11:57 AM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಶ್ರೀಲಂಕಾ ಮೂಲದ 35 ಪ್ರಜೆಗಳ ಬಂಧನ:  ತಮಿಳುನಾಡು ಮೂಲಕ ಆಗಮನ; ಮಾನವ ಕಳ್ಳಸಾಗಣಿಕೆ ಶಂಕೆ

11/06/2021, 16:28

ಮಂಗಳೂರು(reporterkarnataka news): ಶ್ರೀಲಂಕಾ ಮೂಲದ 35 ಮಂದಿಯನ್ನು ನಗರದಲ್ಲಿ ಬಂಧಿಸಲಾಗಿದೆ. ಮಂಗಳೂರು ಹಾಗೂ ತಮಿಳುನಾಡು ಪೊಲೀಸರು ಜಂಟೀ ಕಾರ್ಯಾಚರಣೆ ನಡೆಸಿ ಅಕ್ರಮ ಪ್ರವೇಶ ಮಾಡಿದವರನ್ನು ಬಂಧಿಸಿದ್ದಾರೆ.

ಇದೊಂದು ಮಾನವ ಕಳ್ಳ ಸಾಗಾಣಿಕೆ ಪ್ರಕರಣ ಎನ್ನಲಾಗಿದೆ. ಏಜೆಂಟ್ ಗಳ ಮೂಲಕ ಇವರು ಶ್ರೀಲಂಕಾದಿಂದ ಭಾರತ ಪ್ರವೇಶಿಸಿದ್ದಾರೆ. ಪ್ರತಿಯೊಬ್ಬರಿಂದ 8-10 ಲಕ್ಷ ರೂ. ಏಜೆಂಟರು ಪಡೆದುಕೊಂಡಿದ್ದಾರೆ. ಭಾರತದ ಮೂಲಕ ಕೆನಡಾಕ್ಕೆ ಕಳುಹಿಸುವ ಭರವಸೆ ಇವರಿಗೆ ನೀಡಲಾಗಿತ್ತು.

ಮೊದಲಿಗೆ ಇವರನ್ನು ಕಳೆದ ತಿಂಗಳು ತಮಿಳುನಾಡಿಗೆ ಕರೆದು ತರಲಾಯಿತು. ಅಲ್ಲಿ ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿರುವುದರಿಂದ ಅಲ್ಲಿ ಸುರಕ್ಷಿತವಲ್ಲ ಎಂದು ಮಂಗಳೂರಿಗೆ ಸ್ಥಳಾಂತರಿಸಲಾಯಿತು ಎಂದು ತಿಳಿದು ಬಂದಿದೆ.

ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಯಾವುದೇ ತಪಾಸಣೆಯಿಲ್ಲದೆ ಅವರು ಹೇಗೆ ರಾಜ್ಯ ಪ್ರವೇಶಿಸಿದರು ಎನ್ನುವ ಕುರಿತು ತನಿಖೆ ನಡೆಯುತ್ತಿದೆ. ಮಂಗಳೂರಿನ ಲಾಡ್ಜ್ ಮತ್ತು ಬಾಡಿಗೆ ಮನೆಯೊಂದರಲ್ಲಿ ಅವರಿಗೆ ವಾಸ್ತವ್ಯದ ವ್ಯವಸ್ಥೆ ಮಾಡಲಾಗಿತ್ತು ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು