3:22 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ವಿಶಿಷ್ಟ ಚೇತನ ಮಕ್ಕಳಿಗಾಗಿ ವಿಶೇಷ ಪಾರ್ಕ್‌ ನಿರ್ಮಾಣ: ಶಾಸಕ ವೇದವ್ಯಾಸ ಕಾಮತ್

13/02/2023, 20:49

ಮಂಗಳೂರು(reporterkarnataka.com): ನಗರದ ಕದ್ರಿ ಪಾರ್ಕ್ ಗಂಗನಪಳ್ಳ ಕೆರೆಯ ಸಮೀಪವೇ ವಿಶೇಷ ಚೇತನ ಮಕ್ಕಳಿಗಾಗಿ ಇನ್ನೊಂದು ಪಾರ್ಕ್‌ ಹಾಗೂ ಆಟದ ಮೈದಾನ ನಿರ್ಮಾಣವಾಗಲಿದೆ ಎಂದು ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು.

ಮಂಗಳೂರಿನಲ್ಲಿ ಎರಡು ವಿಶೇಷ ಚೇತನ ಮಕ್ಕಳ ಶಾಲೆಗಳು ಕಾರ್ಯ ನಿರ್ವಹಿಸುತ್ತಿದ್ದು, ಚೇತನಾ ಶಾಲೆಯ ವಿನೋದ್ ಶೆಣೈ ಹಾಗೂ ಸಾನ್ನಿಧ್ಯ ವಿಶೇಷ ಮಕ್ಕಳ ಶಾಲೆಯ ವಸಂತ್ ಶೆಟ್ಟಿ ಅವರು ಈ ಮಕ್ಕಳ ಆಟ-ಪಾಠ ಮತ್ತು ಬೌದ್ಧಿಕ ವಿಕಾಸಕ್ಕಾಗಿ ಪ್ರತ್ಯೇಕ ಪಾರ್ಕ್ ಮತ್ತು ಆಟದ ಮೈದಾನ ನಿರ್ಮಿಸಿಕೊಡುವಂತೆ ಶಾಸಕ ಕಾಮತ್ ಅವರಿಗೆ ಮನವಿ ಸಲ್ಲಿಸಿದ್ದರು.
ಮನವಿಯನ್ನು ಪರಿಗಣಿಸಿದ ಶಾಸಕರು ಮಂಗಳೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ಅಧ್ಯಕ್ಷ ರವಿಶಂಕರ ಮಿಜಾರು ಅವರ ಜತೆ ಚರ್ಚಿಸಿ, ಮಂಗಳೂರು ಮಹಾನಗರ ಪಾಲಿಕೆಯಲ್ಲೂ ಪ್ರಸ್ತಾವ ಮಂಡಿಸಿ ಅನುಮೋದನೆ ದೊರಕವಂತೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕದ್ರಿ ಪಾರ್ಕಿನ ಒಳಗಡೆ 50 ಸೆಂಟ್ಸ್‌ ಜಾಗದಲ್ಲಿ ವಿಶೇಷ ಚೇತನ ಮಕ್ಕಳ ಪಾರ್ಕ್‌ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಶೀಘ್ರವೇ ಇದು ಕಾರ್ಯಗತಗೊಳ್ಳಲಿದ್ದು, ಸ್ಮಾರ್ಟ್‌ ಸಿಟಿ ಮಂಗಳೂರಿನಲ್ಲಿ ಹೊಸದೊಂದು ಸೌಲಭ್ಯ ವಿಶಿಷ್ಟ ಚೇತನ ಮಕ್ಕಳು ಮತ್ತು ಸಾರ್ವಜನಿಕರ ಬಳಕೆಗೆ ಲಭ್ಯವಾಗಲಿದೆ. ಪಾರ್ಕ್ ನಿರ್ಮಾಣ ಕುರಿತು ವಿಶೇಷ ಮಕ್ಕಳ ಪೋಷಕರು, ಶಿಕ್ಷಕರು ಹಾಗೂ ಸಂಘ ಸಂಸ್ಥೆಗಳು ಮೆಚ್ಚುಗೆ ವ್ಯಕ್ತಪಡಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು