3:04 AM Saturday7 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ: ಪ್ರಶಸ್ತಿ ಪ್ರದಾನ, ಪ್ರಮಾಣ ಪತ್ರ ವಿತರಣೆ

01/06/2023, 22:26

ಮಂಗಳೂರು(reporterkarnataka.com): ಭಾರತೀಯ ರೆಡ್ ಕ್ರಾಸ್ ದಕ್ಷಿಣ ಕನ್ನಡ ಘಟಕ, ಸರಕಾರಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರ ಕರ್ತರ ಸಂಘ ಮಂಗಳೂರು, ಯುವ ರೆಡ್ ಕ್ರಾಸ್ ಮಂಗಳೂರು ವಿಶ್ವ ವಿದ್ಯಾನಿಲಯ ಮತ್ತು ಯವ ರೆಡ್ ಕ್ರಾಸ್ ಯೆನೆಪೋಯ ವಿಶ್ವ ವಿದ್ಯಾನಿಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಹಂಪನಕಟ್ಟೆ ಮಂಗಳೂರು ವಿಶ್ವ ವಿದ್ಯಾ ನಿಲಯದ ರವೀಂದ್ರನಾಥ ಕಲಾಭವನದಲ್ಲಿ ಗುರುವಾರ ವಿಶ್ವ ರೆಡ್ ಕ್ರಾಸ್ ದಿನದ ಅಂಗವಾಗಿ ಸಮಾರಂಭ ನಡೆಯಿತು.


ಈ ಸಮಾರಂಭದಲ್ಲಿ ಯುವ ರೆಡ್ ಕ್ರಾಸ್ ಘಟಕದ ಸ್ವಯಂ ಸೇವಕರಿಗೆ ಪ್ರಶಸ್ತಿ ಪ್ರದಾನ ಮತ್ತು ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮ ಜರುಗಿತು. ಇದೇ ಸಂದರ್ಭದಲ್ಲಿ ಸೇವಾ ನಿವೃತ್ತಿ ಹೊಂದುತ್ತಿರುವ ಮಂಗಳೂರು ವಿಶ್ವ ವಿದ್ಯಾನಿಲಯದ ಕುಲಪತಿಯವರಿಗೆ ಅಭಿನಂದನೆ ನೀಡಲಾಯಿತು. ಭಾರತೀಯ ರೆಡ್ ಕ್ರಾಸ್ ಕರ್ನಾಟಕ ಶಾಖೆಯ ಉಪಾಧ್ಯಕ್ಷ ಗೋಪಾಲ ಬಿ.ಹೊಸೂರು ಅಧ್ಯಕ್ಷ ತೆಯಲ್ಲಿ,ದ.ಕ ಜಿಲ್ಲಾ ಘಟಕದ ಸಭಾಪತಿ ಸಿ.ಎ ಶಾಂತಾರಾಮ ಶೆಟ್ಟಿ ಯವರ ಉಪಸ್ಥಿತಿಯಲ್ಲಿ ಮಂಗಳೂರು ವಿ.ವಿ.ಯ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ಮುಖ್ಯ ಅತಿಥಿಯಾಗಿ ಭಾಗವಹಿವಹಿಸಿದ್ದರು. ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ್ ಪ್ರಶಸ್ತಿ ಪ್ರದಾನ
ನೆರವೇರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು