6:41 PM Friday10 - April 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ; ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ಸೈಕೋ’ ಕಳ್ಳನ ಬಂಧನ ಫೇಲಾದವರಿಗೆ ಇನ್ನೊಂದು ಚಾನ್ಸ್: ದ್ವಿತೀಯ ಪಿಯುಸಿ ಪರೀಕ್ಷೆ-2 ದಿನಾಂಕ ಪ್ರಕಟ Suratkal | ಅಮಾನತುಗೊಂಡಿದ್ದ ಎನ್‌ಐಟಿಕೆ ಕುಲಸಚಿವ ರವೀಂದ್ರನಾಥ್ ಸೇವೆಯಿಂದ ವಜಾ ಪತಿಯ ಶವದ ಜತೆ 10 ದಿನ ಕಳೆದ ಪತ್ನಿ: ಮಲೆನಾಡು ಚಿಕ್ಕಮಗಳೂರಿನಲ್ಲಿ ವಿಚಿತ್ರ… ಕಾಂಗ್ರೆಸ್‌ನಿಂದ ಕೋಟ್ಯಂತರ ರೂಪಾಯಿ ಹಣ ಹಂಚಿಕೆ: ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಆರೋಪ ಅಮ್ಮನ ಸಾವಿನ ದುಃಖದಲ್ಲೂ ಛಲ ಬಿಡದೆ ಪರೀಕ್ಷೆ ಬರೆದ ದಿಶಾ ಸ್ಟೇಟ್ ಗೆ… ದಾವಣಗೆರೆ ದಕ್ಷಿಣ: ಮತಗಟ್ಟೆ ಬಳಿ ಟೇಬಲ್ ವಿಚಾರವಾಗಿ ಕಾಂಗ್ರೆಸ್-ಎಸ್ ಡಿಪಿಐ ಕಾರ್ಯಕರ್ತರ ಜಟಾಪಟಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪ ಚುನಾವಣೆ: ಬಹುತೇಕ ಶಾಂತಿಯುತ ಮತದಾನ ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:…

ಇತ್ತೀಚಿನ ಸುದ್ದಿ

ಮಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಕಾಶ್ಮೀರದ ವೈಷ್ಣೋದೇವಿ ದೇಗುಲ ದರ್ಶನ: ಟೆಕ್ಕಿಗೆ ಟೋಪಿ ಹಾಕಿದ ವಂಚಕ

07/10/2022, 22:31

ಮಂಗಳೂರು(reporter Karnataka.com): ಜಮ್ಮು ಕಾಶ್ಮೀರದ ವೈಷ್ಣೋದೇವಿ ದೇಗುಲಕ್ಕೆ ಮಂಗಳೂರಿನಿಂದ ಖಾಸಗಿ ಹೆಲಿಕಾಪ್ಟರ್ ಸೇವೆ ಒದಗಿಸುವುದಾಗಿ ಬೆಂಗಳೂರು ಮೂಲದ ಟೆಕ್ಕಿಯೊಬ್ಬರಿಗೆ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ.

ಬೆಂಗಳೂರಿನ ಟೆಕ್ಕಿಗೆ ಮಂಗಳೂರಿನಿಂದ ವೈಷ್ಣೋದೇವಿ ದೇವಾಲಯದ ದರ್ಶನಕ್ಕೆ ನೇರ ಹೆಲಿಕಾಪ್ಟರ್ ಸೇವೆ ಒದಗಿಸುವುದಾಗಿ ನಿತಿನ್ ಎಂಬಾತ ಭರವಸೆ ನೀಡಿದ್ದ. ನಂತರ ಖಾಸಗಿ ಹೆಲಿಕಾಪ್ಟರ್ ಬುಕ್ಕಿಂಗ್ ಗೆ 38060 ರೂ. ಕೇಳಿದ್ದ. ಅದರಂತೆ ಟೆಕ್ಕಿ ನಿತಿನ್ ಕಳುಹಿಸಿದ ಕ್ಯೂ ಆರ್ ಕೋಡ್ ಗೆ ಟೆಕ್ಕಿ ಹಣ ಪಾವತಿಸಿದ್ದ. ನಂತರ ನಿತಿನ್ ನ ಮೊಬೈಲ್ ಸ್ವಿಚ್ ಆಫ್ ಆಗಿದೆ. ಇಷ್ಟೆಲ್ಲ ನಡೆದ ಮೇಲೆ ಟೆಕ್ಕಿಗೆ ತಾನು ಮೋಸ ಹೋಗಿರುವುದು ಗಮನಕ್ಕೆ ಬಂತು. ಟೆಕ್ಕಿ ವೈಷ್ಣೋದೇವಿ ದೇಗುಲ ಸಂಪರ್ಕಿಸಿದಾಗ ನಿತಿನ್ ಎಂಬ ನಮ್ಮ ಪ್ರತಿನಿಧಿ ಯಾರೂ ಇಲ್ಲ ಎಂದು ಮಾಹಿತಿ ನೀಡಿದ್ದಾರೆ. ಮೋಸ ಹೋದ ಟೆಕ್ಕಿ ಮಂಗಳೂರು ಸೈಬರ್ ಠಾಣೆಗೆ ದೂರು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು