6:37 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಮಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಕಾಶ್ಮೀರದ ವೈಷ್ಣೋದೇವಿ ದೇಗುಲ ದರ್ಶನ: ಟೆಕ್ಕಿಗೆ ಟೋಪಿ ಹಾಕಿದ ವಂಚಕ

07/10/2022, 22:31

ಮಂಗಳೂರು(reporter Karnataka.com): ಜಮ್ಮು ಕಾಶ್ಮೀರದ ವೈಷ್ಣೋದೇವಿ ದೇಗುಲಕ್ಕೆ ಮಂಗಳೂರಿನಿಂದ ಖಾಸಗಿ ಹೆಲಿಕಾಪ್ಟರ್ ಸೇವೆ ಒದಗಿಸುವುದಾಗಿ ಬೆಂಗಳೂರು ಮೂಲದ ಟೆಕ್ಕಿಯೊಬ್ಬರಿಗೆ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ.

ಬೆಂಗಳೂರಿನ ಟೆಕ್ಕಿಗೆ ಮಂಗಳೂರಿನಿಂದ ವೈಷ್ಣೋದೇವಿ ದೇವಾಲಯದ ದರ್ಶನಕ್ಕೆ ನೇರ ಹೆಲಿಕಾಪ್ಟರ್ ಸೇವೆ ಒದಗಿಸುವುದಾಗಿ ನಿತಿನ್ ಎಂಬಾತ ಭರವಸೆ ನೀಡಿದ್ದ. ನಂತರ ಖಾಸಗಿ ಹೆಲಿಕಾಪ್ಟರ್ ಬುಕ್ಕಿಂಗ್ ಗೆ 38060 ರೂ. ಕೇಳಿದ್ದ. ಅದರಂತೆ ಟೆಕ್ಕಿ ನಿತಿನ್ ಕಳುಹಿಸಿದ ಕ್ಯೂ ಆರ್ ಕೋಡ್ ಗೆ ಟೆಕ್ಕಿ ಹಣ ಪಾವತಿಸಿದ್ದ. ನಂತರ ನಿತಿನ್ ನ ಮೊಬೈಲ್ ಸ್ವಿಚ್ ಆಫ್ ಆಗಿದೆ. ಇಷ್ಟೆಲ್ಲ ನಡೆದ ಮೇಲೆ ಟೆಕ್ಕಿಗೆ ತಾನು ಮೋಸ ಹೋಗಿರುವುದು ಗಮನಕ್ಕೆ ಬಂತು. ಟೆಕ್ಕಿ ವೈಷ್ಣೋದೇವಿ ದೇಗುಲ ಸಂಪರ್ಕಿಸಿದಾಗ ನಿತಿನ್ ಎಂಬ ನಮ್ಮ ಪ್ರತಿನಿಧಿ ಯಾರೂ ಇಲ್ಲ ಎಂದು ಮಾಹಿತಿ ನೀಡಿದ್ದಾರೆ. ಮೋಸ ಹೋದ ಟೆಕ್ಕಿ ಮಂಗಳೂರು ಸೈಬರ್ ಠಾಣೆಗೆ ದೂರು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು