11:23 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಕಾಶ್ಮೀರದ ವೈಷ್ಣೋದೇವಿ ದೇಗುಲ ದರ್ಶನ: ಟೆಕ್ಕಿಗೆ ಟೋಪಿ ಹಾಕಿದ ವಂಚಕ

07/10/2022, 22:31

ಮಂಗಳೂರು(reporter Karnataka.com): ಜಮ್ಮು ಕಾಶ್ಮೀರದ ವೈಷ್ಣೋದೇವಿ ದೇಗುಲಕ್ಕೆ ಮಂಗಳೂರಿನಿಂದ ಖಾಸಗಿ ಹೆಲಿಕಾಪ್ಟರ್ ಸೇವೆ ಒದಗಿಸುವುದಾಗಿ ಬೆಂಗಳೂರು ಮೂಲದ ಟೆಕ್ಕಿಯೊಬ್ಬರಿಗೆ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ.

ಬೆಂಗಳೂರಿನ ಟೆಕ್ಕಿಗೆ ಮಂಗಳೂರಿನಿಂದ ವೈಷ್ಣೋದೇವಿ ದೇವಾಲಯದ ದರ್ಶನಕ್ಕೆ ನೇರ ಹೆಲಿಕಾಪ್ಟರ್ ಸೇವೆ ಒದಗಿಸುವುದಾಗಿ ನಿತಿನ್ ಎಂಬಾತ ಭರವಸೆ ನೀಡಿದ್ದ. ನಂತರ ಖಾಸಗಿ ಹೆಲಿಕಾಪ್ಟರ್ ಬುಕ್ಕಿಂಗ್ ಗೆ 38060 ರೂ. ಕೇಳಿದ್ದ. ಅದರಂತೆ ಟೆಕ್ಕಿ ನಿತಿನ್ ಕಳುಹಿಸಿದ ಕ್ಯೂ ಆರ್ ಕೋಡ್ ಗೆ ಟೆಕ್ಕಿ ಹಣ ಪಾವತಿಸಿದ್ದ. ನಂತರ ನಿತಿನ್ ನ ಮೊಬೈಲ್ ಸ್ವಿಚ್ ಆಫ್ ಆಗಿದೆ. ಇಷ್ಟೆಲ್ಲ ನಡೆದ ಮೇಲೆ ಟೆಕ್ಕಿಗೆ ತಾನು ಮೋಸ ಹೋಗಿರುವುದು ಗಮನಕ್ಕೆ ಬಂತು. ಟೆಕ್ಕಿ ವೈಷ್ಣೋದೇವಿ ದೇಗುಲ ಸಂಪರ್ಕಿಸಿದಾಗ ನಿತಿನ್ ಎಂಬ ನಮ್ಮ ಪ್ರತಿನಿಧಿ ಯಾರೂ ಇಲ್ಲ ಎಂದು ಮಾಹಿತಿ ನೀಡಿದ್ದಾರೆ. ಮೋಸ ಹೋದ ಟೆಕ್ಕಿ ಮಂಗಳೂರು ಸೈಬರ್ ಠಾಣೆಗೆ ದೂರು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು