3:00 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಮಂಗಳೂರಿಗೆ ಹೈಕೋರ್ಟ್ ಪೀಠ ಬೇಡಿಕೆಯ ಬಗ್ಗೆ ಉತ್ಸಾಹಿತನಾಗಿದ್ದೇನೆ: ವಕೀಲರ ಸಂವಾದದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

04/04/2024, 22:03

ಮಂಗಳೂರು(reporterkarnataka.com): ಕಾಂಗ್ರೆಸ್ ಪಕ್ಷ ಅಭ್ಯರ್ಥಿಯಾಗಿ ತನ್ನನ್ನು ಘೋಷಿಸಿದೆ. ಇದು ವಕೀಲ ಸಮುದಾಯಕ್ಕೆ ಸಿಕ್ಕ ಅವಕಾಶ. ನಿಮ್ಮ ಬೇಡಿಕೆಗಳನ್ನು ಆದ್ಯತೆ ಮೇಲೆ ಈಡೇರಿಸಲಾಗುವುದು. ಅದರಲ್ಲೂ ಮಂಗಳೂರಿಗೆ ಹೈಕೋರ್ಟ್ ಪೀಠ ಬೇಕೆಂಬ ಬೇಡಿಕೆ ಇದ್ದು, ಇದರ ಬಗ್ಗೆ ತಾನು ಉತ್ಸಾಹಿತನಾಗಿದ್ದೇನೆ ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಹೇಳಿದರು.


ನಗರದ ಓಷಿಯನ್ ಪರ್ಲ್’ನಲ್ಲಿ ನಡೆದ ವಕೀಲರ ಜೊತೆಗಿನ ಸಂವಾದದಲ್ಲಿ ಅವರು ಮಾತನಾಡಿದರು.
ಸಮಾಜದ ಮುಖ್ಯವಾಹಿನಿಯಲ್ಲಿ ಕೆಲಸ ಮಾಡುವ ವಕೀಲರು, ತಾವು ಅರಿತಿರುವ ವಿಚಾರವನ್ನು ಸಮಾಜಕ್ಕೆ ತಿಳಿಸುವ ಕೆಲಸ ಆಗಬೇಕಿದೆ. ಅಭಿವೃದ್ಧಿ ಪರ ಕೆಲಸ ಮನೀಡಬೇಕಾದ ಅಗತ್ಯವಿದೆ ಎಂದು ಅವರು
ಹೇಳಿದರು.
ದೇಶಾದ್ಯಂತ ಏನಾಗುತ್ತಿದೆ ಎಂಬ ವಿಚಾರ ನಿಮಗೆ ತಿಳಿದಿದೆ. ಇದನ್ನೆಲ್ಲಾ ನೋಡಿಕೊಂಡು ಸುಮ್ಮನೆ ಕೂರಬಾರದು. ಹಾಗೆಂದು ಮಾತನಾಡಿದರೆ, ದೇಶದ್ರೋಹಿಗಳು ಎಂಬಂತೆ ಬಿಂಬಿಸುವ ಪ್ರಯತ್ನ ನಡೆಯುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ನಮ್ಮಂತಹವರ ಪ್ರಯತ್ನ ತುಂಬಾ ಅಗತ್ಯ. ಹಾಗೆಂದು ಅಪಪ್ರಚಾರದ ಅವಶ್ಯಕತೆ ನಮಗಿಲ್ಲ. ಇದ್ದ ವಿಚಾರವನ್ನು ಜನರ ಮುಂದಿಡುವ ಕೆಲಸವನ್ನು ಮಾಡಬೇಕು ಎಂದರು.
*ಪ್ರಶ್ನಿಸುವ ಮನೋಭಾವ ಬೆಳೆಸಿ:* ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಭಾರತದಲ್ಲಿ ಏನಾಗುತ್ತಿದೆ ಎಂಬ ಪ್ರಶ್ನೆ ವಿಶ್ವಾದ್ಯಂತ ಇದೆ. ಇದನ್ನು ಪ್ರಶ್ನಿಸುವ ಮನೋಭಾವ ನಮ್ಮಲ್ಲಿ ಬೆಳೆಯಬೇಕಿದೆ. ಆದ್ದರಿಂದ ಜನರಿಗೆ ಅರಿವು ಮೂಡಿಸುವ ಕೆಲಸ ಆಗಬೇಕು ಎಂದು ನುಡಿದರು.
*ವರ್ತಮಾನದ ಅರಿವು ವಕೀಲರಿಗಿದೆ:* ಜಿಲ್ಲಾ ಚುನಾವಣಾ ಉಸ್ತುವಾರಿ ಬಿ. ರಮಾನಾಥ ರೈ ಮಾತನಾಡಿ, ವಕೀಲ ಸಮುದಾಯ ವರ್ತಮಾನದ ಆಗು ಹೋಗುಗಳ ಬಗ್ಗೆ ಅರಿವು ಹೊಂದಿರುವವರು.
ಇಂದು ಮಾತನಾಡಲು ಭಯ ಆಗುವಂತಹ ಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ಅರಿವು ಇದ್ದವರು ಮಾತನಾಡಬೇಕು ಎಂದರು.
*ವಿಷಮ ಪರಿಸ್ಥಿತಿ:* ಎ.ಐ.ಎಲ್.ಯು.ನ ಯಶವಂತ್ ಮರೋಳಿ ಮಾತನಾಡಿ, ನಾವು ವಿ‌ಷಮ ಪರಿಸ್ಥಿತಿಯಲ್ಲಿದ್ದೇವೆ. ಸಂವಿಧಾನದ ಮೇಲೆ ಪ್ರಹಾರ ಆಗ್ತಾ ಇದೆ. ಇದೇ ಕಾರಣಕ್ಕೆ ವಕೀಲರ ವೇಗ ಕಡಿಮೆ ಆಗ್ತಾ ಇದೆ ಎಂದು ಹೇಳಿದರು.
*ನೋಟಾ ಬಗ್ಗೆ ಎಚ್ಚರ:* ವಕೀಲ ಹನೀಫ್ ಮಾತನಾಡಿ, ಕಾಂಗ್ರೆಸಿನ ಮತ ನೋಟಾಕೆ ಹೋಗದಂತೆ ಎಚ್ಚರ‌‌ ವಹಿಸಿ ಎಂದರು.
*ಪದ್ಮರಾಜ್ ಅವರಿಗೆ ವಕೀಲರ ಬೆಂಬಲ:* ಬಾರ್ ಅಸೋಸಿಯೇಷನಿನ ಮಾಜಿ ಕಾರ್ಯದರ್ಶಿ ದಿನಕರ ಶೆಟ್ಟಿ ಮಾತನಾಡಿ, ವಕೀಲರೆಲ್ಲರ ಬೆಂಬಲ ಪದ್ಮರಾಜ್ ಅವರಿಗೆ ಇದೆ. ಸಂವಿಧಾನವನ್ನು ರಕ್ಷಿಸುವ ನಿಟ್ಟಿನಲ್ಲಿ ವಕೀಲರಿಗೂ ಚುನಾವಣೆಯ ಕೆಲ ಜವಾಬ್ದಾರಿ ನೀಡಬೇಕು ಎಂದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮೂಸಾ ಕುಂಞ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು