12:21 AM Tuesday16 - September 2025
ಬ್ರೇಕಿಂಗ್ ನ್ಯೂಸ್
Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;…

ಇತ್ತೀಚಿನ ಸುದ್ದಿ

ಮಂಗಳೂರಿಗೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ: ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಶಿಲಾನ್ಯಾಸ

16/01/2025, 20:54

ಮಂಗಳೂರು(reporterkarnataka.com): ಕಡಲ ನಗರಿ ಮಂಗಳೂರಿನಲ್ಲಿ ಕರ್ನಾಟಕ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ
ಹೊಸ ಪ್ರಾದೇಶಿಕ ಕೇಂದ್ರ ತಲೆ ಎತ್ತಲಿದೆ. ಹೊಸ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ. 17ರಂದು ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಈ ಭಾಗದ ಪ್ರದೇಶದಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡುವುದು ಇದರಿಂದ ಸಾಧ್ಯವಾಗಲಿದೆ. ಆರೋಗ್ಯ ಕ್ಷೇತ್ರದ ಪ್ರಗತಿಯಲ್ಲಿ ಇದು ಮಹತ್ವದ ಹೆಜ್ಜೆ ಕೂಡ ಆಗಿದೆ. ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
1996ರಲ್ಲಿ ಪ್ರಾರಂಭವಾದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಆರೋಗ್ಯ ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಆವಿಷ್ಕಾರಗಳು, ಉತ್ತಮ ಯೋಜನೆಗಳನ್ನು ಆರಂಭಿಸಿದೆ. ಗುಣಮಟ್ಟದ ಆರೋಗ್ಯ ಒದಗಿಸಲು ಇದು ಸಹಕಾರಿಯಾಗಿದೆ. ಬೆಳಗಾವಿ, ಕಲಬುರಗಿ ಮತ್ತು ಮಂಗಳೂರಿನಲ್ಲಿ ಪ್ರಾದೇಶಿಕ ಕೇಂದ್ರಗಳನ್ನು ಸ್ಥಾಪಿಸುವ ಮೂಲಕ ಹೆಚ್ಚು ಜನರಿಗೆ ಆರೋಗ್ಯ ಸೌಲಭ್ಯ ಒದಗಿಸುವುದು ಸರ್ಕಾರದ ಮುಖ್ಯ ಗುರಿಯಾಗಿದೆ.
ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯವು ಮೌಲ್ಯಮಾಪನ ಪದ್ಧತಿಗಳನ್ನು ಆಧುನೀಕರಿಸಲು ಡಿಜಿಟಲ್ ಪ್ಲಾಟ್‍ಫಾರ್ಮ್‍ಗಳನ್ನು ಪರಿಚಯಿಸಿದ ಮೊದಲ ಆರೋಗ್ಯ ವಿಶ್ವವಿದ್ಯಾಲಯವಾಗಿದೆ.
ಪ್ರತಿ ಪ್ರೋಗ್ರಾಂ ಮತ್ತು ಕೋರ್ಸ್‍ಗೆ ವಿಶಿಷ್ಟವಾದ ಮೌಲ್ಯಮಾಪನ ಬ್ಲೂಪ್ರಿಂಟ್ ಪ್ರಕಾರ ಸಮಗ್ರ ಪ್ರಶ್ನೆ ಬ್ಯಾಂಕ್ ಸ್ಥಾಪಿಸುವುದು ಈ ವಿವಿಯ ಗಮನಾರ್ಹ ಸಾಧನೆಯಾಗಿದೆ. ಮಂಗಳೂರಿನಲ್ಲಿ ಈ ಕೇಂದ್ರದ ಸ್ಥಾಪನೆಯು ಗ್ರಾಮೀಣ ಮತ್ತು ನಗರಗಳ ನಡುವಿನ ಆರೋಗ್ಯ ಶಿಕ್ಷಣದ ಅಂತರವನ್ನು ಕಡಿಮೆ ಮಾಡಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು