5:18 AM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಮಂಗಳೂರಿಗೆ ಸರಬರಾಜು ಆಗುವ ನೀರಿಗೆ ದಾರಿಯಲ್ಲೇ ಕನ್ನ: ಪಾಲಿಕೆಯಿಂದ ಅಕ್ರಮ ಸಂಪರ್ಕ ತೆರವು

03/02/2024, 21:58

ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆಗೆ ತುಂಬೆ ಅಣೆಕಟ್ಟಿನಿಂದ ಸರಬರಾಜು ಮಾಡುವ ಮುಖ್ಯ ಪೈಪ್ ಲೈನಿಂದ ಮಾಡಲಾದ ಅಕ್ರಮ ಸಂಪರ್ಕವನ್ನು ಶನಿವಾರ ಪಾಲಿಕೆ ವತಿಯಿಂದ ತೆರವುಗೊಳಿಸಲಾಯಿತು.


ತುಂಬೆಯಿಂದ ಪಂಪ್‌ ಮಾಡಲಾಗುವ ಕುಡಿಯುವ ನೀರನ್ನು ಪಂಚಾಯತ್‌ ವ್ಯಾಪ್ತಿ ಮೂಲಕ ಹಾದು ಹೋಗಿರುವ ಮುಖ್ಯ ಕೊಳವೆಯಿಂದ ವಿವಿಧ ಪಂಚಾಯತ್‌ ವ್ಯಾಪ್ತಿಗಳಲ್ಲಿ ಕಟ್ಟಡ ರಚನೆಗೆ, ವಾಣಿಜ್ಯ ಉದ್ದೇಶಕ್ಕೆ ಹಾಗೂ ಕೃಷಿ ಚಟುವಟಿಕೆಗಳಿಗೆ ಅನಧಿಕೃತ ಜೋಡಣೆ ಮೂಲಕ ನೀರು ಬಳಕೆ ಮಾಡುತ್ತಿರುವ ಬಗ್ಗೆ ದೂರುಗಳು ಬರುತ್ತಿತ್ತು. ಇದರಿಂದಾಗಿ ಪಾಲಿಕೆ ವ್ಯಾಪ್ತಿಗೆ ನೀರಿನ ಪೂರೈಕೆಯ ಪ್ರಮಾಣ ಕಡಿಮೆಯಾಗುತ್ತಿದ್ದ ಪ್ರಯುಕ್ತ ನಗರಕ್ಕೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗದಿರುವ ಹಿನ್ನೆಲೆಯಲ್ಲಿ ಶನಿವಾರ ಪಾಲಿಕೆ ಅಧಿಕಾರಿಗಳ 3 ತಂಡಗಳನ್ನು ರಚಿಸಿ ತೆರವು ಕಾರ್ಯಾಚರಣೆ ನಡೆಸಲಾಯಿತು. ತುಂಬೆ, ಪುದು ಮತ್ತು ಅಡ್ಯಾರ್‌ ಗ್ರಾಮ ಪಂಚಾಯತ್‌ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಪರಿಶೀಲಿಸಿದಾಗ ಅನಧಿಕೃತವಾಗಿ ಮುಖ್ಯ ಕೊಳವೆ ಮಾರ್ಗದಿಂದ ಕಟ್ಟಡ ರಚನೆಗೆ, ಕೃಷಿ ಚಟುವಟಿಕೆಗೆ ಹಾಗೂ ವಾಣಿಜ್ಯ ಉದ್ದೇಶಕ್ಕೆ ಬಳಕೆಯಾಗುತ್ತಿರುವ ನೀರಿನ ಅನಧಿಕೃತ ಜೋಡಣೆಗಳನ್ನು ಪೋಲೀಸ್‌ ಇಲಾಖೆ ಮತ್ತು ಪಂಚಾಯತ್‌ ಅಭಿವೃದ್ದಿ ಅಧಿಕಾರಿಗಳ ಸಹಕಾರದೊಂದಿಗೆ ತೆರವು ಕಾರ್ಯಾಚರಣೆಯ ಮೂಲಕ ಕಡಿತಗೊಳಿಸಲಾಯಿತು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು