4:04 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಮಂಗಳೂರಿಗೆ ಸರಬರಾಜು ಆಗುವ ನೀರಿಗೆ ದಾರಿಯಲ್ಲೇ ಕನ್ನ: ಪಾಲಿಕೆಯಿಂದ ಅಕ್ರಮ ಸಂಪರ್ಕ ತೆರವು

03/02/2024, 21:58

ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆಗೆ ತುಂಬೆ ಅಣೆಕಟ್ಟಿನಿಂದ ಸರಬರಾಜು ಮಾಡುವ ಮುಖ್ಯ ಪೈಪ್ ಲೈನಿಂದ ಮಾಡಲಾದ ಅಕ್ರಮ ಸಂಪರ್ಕವನ್ನು ಶನಿವಾರ ಪಾಲಿಕೆ ವತಿಯಿಂದ ತೆರವುಗೊಳಿಸಲಾಯಿತು.


ತುಂಬೆಯಿಂದ ಪಂಪ್‌ ಮಾಡಲಾಗುವ ಕುಡಿಯುವ ನೀರನ್ನು ಪಂಚಾಯತ್‌ ವ್ಯಾಪ್ತಿ ಮೂಲಕ ಹಾದು ಹೋಗಿರುವ ಮುಖ್ಯ ಕೊಳವೆಯಿಂದ ವಿವಿಧ ಪಂಚಾಯತ್‌ ವ್ಯಾಪ್ತಿಗಳಲ್ಲಿ ಕಟ್ಟಡ ರಚನೆಗೆ, ವಾಣಿಜ್ಯ ಉದ್ದೇಶಕ್ಕೆ ಹಾಗೂ ಕೃಷಿ ಚಟುವಟಿಕೆಗಳಿಗೆ ಅನಧಿಕೃತ ಜೋಡಣೆ ಮೂಲಕ ನೀರು ಬಳಕೆ ಮಾಡುತ್ತಿರುವ ಬಗ್ಗೆ ದೂರುಗಳು ಬರುತ್ತಿತ್ತು. ಇದರಿಂದಾಗಿ ಪಾಲಿಕೆ ವ್ಯಾಪ್ತಿಗೆ ನೀರಿನ ಪೂರೈಕೆಯ ಪ್ರಮಾಣ ಕಡಿಮೆಯಾಗುತ್ತಿದ್ದ ಪ್ರಯುಕ್ತ ನಗರಕ್ಕೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗದಿರುವ ಹಿನ್ನೆಲೆಯಲ್ಲಿ ಶನಿವಾರ ಪಾಲಿಕೆ ಅಧಿಕಾರಿಗಳ 3 ತಂಡಗಳನ್ನು ರಚಿಸಿ ತೆರವು ಕಾರ್ಯಾಚರಣೆ ನಡೆಸಲಾಯಿತು. ತುಂಬೆ, ಪುದು ಮತ್ತು ಅಡ್ಯಾರ್‌ ಗ್ರಾಮ ಪಂಚಾಯತ್‌ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಪರಿಶೀಲಿಸಿದಾಗ ಅನಧಿಕೃತವಾಗಿ ಮುಖ್ಯ ಕೊಳವೆ ಮಾರ್ಗದಿಂದ ಕಟ್ಟಡ ರಚನೆಗೆ, ಕೃಷಿ ಚಟುವಟಿಕೆಗೆ ಹಾಗೂ ವಾಣಿಜ್ಯ ಉದ್ದೇಶಕ್ಕೆ ಬಳಕೆಯಾಗುತ್ತಿರುವ ನೀರಿನ ಅನಧಿಕೃತ ಜೋಡಣೆಗಳನ್ನು ಪೋಲೀಸ್‌ ಇಲಾಖೆ ಮತ್ತು ಪಂಚಾಯತ್‌ ಅಭಿವೃದ್ದಿ ಅಧಿಕಾರಿಗಳ ಸಹಕಾರದೊಂದಿಗೆ ತೆರವು ಕಾರ್ಯಾಚರಣೆಯ ಮೂಲಕ ಕಡಿತಗೊಳಿಸಲಾಯಿತು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು