6:39 PM Thursday15 - May 2025
ಬ್ರೇಕಿಂಗ್ ನ್ಯೂಸ್
ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು…

ಇತ್ತೀಚಿನ ಸುದ್ದಿ

ಮಂಗಳೂರು: 4 ತಿಂಗಳ ಹಸುಗೂಸಿನ ಕೊಂದು ತಾನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಹೆತ್ತಬ್ಬೆ

03/12/2023, 14:28

ಮಂಗಳೂರು(reporterkarnataka.com): ಮಾನಸಖಿನ್ನತೆಗೊಳಗಾದ ಬಾಣಂತಿ ಗೃಹಿಣಿಯೊಬ್ಬರು ತನ್ನ 4 ತಿಂಗಳ ಶಿಶುವನ್ನು ಟಬ್ ನೀರಿನಲ್ಲಿ ಮುಳುಗಿಸಿ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಗರದ ಗುಜ್ಜರಕೆರೆ ಬಳಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ನಡೆದಿದೆ.
ಗುಜ್ಜರಕೆರೆ ಸಮೀಪದ ಅಪಾರ್ಟ್ ಮೆಂಟ್ ನ ನಿವಾಸಿಯಾದ ಫಾತಿಮಾ(23) ಎಂಬ ಬಾಣಂತಿ ಯುವತಿ ಶಿಶುವನ್ನು ಕೊಂದು ಸಾವಿಗೆ ಶರಣಾದವರು ಎಂದು ತಿಳಿದು ಬಂದಿದೆ.
ಫಾತಿಮಾ ಅವರು ಎರಡು ವರ್ಷಗಳ ಹಿಂದೆ ಹುಸೈನ್ ಎಂಬವರನ್ನು ವಿವಾಹವಾಗಿದ್ದರು. ಈ ದಂಪತಿಗೆ 4 ತಿಂಗಳ ಗಂಡು ಮಗು ಇದೆ. ಫಾತಿಮಾ ಅವರು ಹೆರಿಗೆ ಬಳಿಕ ಮಾನಸಿಕ ಖಿನ್ನತೆಗೊಳಗಾದರು. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಆಗಾಗ ಹೇಳುತ್ತಿದ್ದರು. ಅವರಿಗೆ ವೈದ್ಯರಲ್ಲಿ ಚಿಕಿತ್ಸೆ ಕೂಡ ನಡೆಯುತ್ತಿತ್ತು. ಆದರೆ ನಿನ್ನೆ ದಿನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಫಾತಿಮಾ ತನ್ನ 4 ತಿಂಗಳ ಮಗುವನ್ನು ನೀರಿನಲ್ಲಿ ಮುಳುಗಿಸಿ ಸಾಯಿಸಿ, ನಂತರ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು