8:39 PM Saturday8 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಮಂಗಳೂರು: 4 ತಿಂಗಳ ಹಸುಗೂಸಿನ ಕೊಂದು ತಾನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಹೆತ್ತಬ್ಬೆ

03/12/2023, 14:28

ಮಂಗಳೂರು(reporterkarnataka.com): ಮಾನಸಖಿನ್ನತೆಗೊಳಗಾದ ಬಾಣಂತಿ ಗೃಹಿಣಿಯೊಬ್ಬರು ತನ್ನ 4 ತಿಂಗಳ ಶಿಶುವನ್ನು ಟಬ್ ನೀರಿನಲ್ಲಿ ಮುಳುಗಿಸಿ ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಗರದ ಗುಜ್ಜರಕೆರೆ ಬಳಿಯ ಅಪಾರ್ಟ್ ಮೆಂಟ್ ವೊಂದರಲ್ಲಿ ನಡೆದಿದೆ.
ಗುಜ್ಜರಕೆರೆ ಸಮೀಪದ ಅಪಾರ್ಟ್ ಮೆಂಟ್ ನ ನಿವಾಸಿಯಾದ ಫಾತಿಮಾ(23) ಎಂಬ ಬಾಣಂತಿ ಯುವತಿ ಶಿಶುವನ್ನು ಕೊಂದು ಸಾವಿಗೆ ಶರಣಾದವರು ಎಂದು ತಿಳಿದು ಬಂದಿದೆ.
ಫಾತಿಮಾ ಅವರು ಎರಡು ವರ್ಷಗಳ ಹಿಂದೆ ಹುಸೈನ್ ಎಂಬವರನ್ನು ವಿವಾಹವಾಗಿದ್ದರು. ಈ ದಂಪತಿಗೆ 4 ತಿಂಗಳ ಗಂಡು ಮಗು ಇದೆ. ಫಾತಿಮಾ ಅವರು ಹೆರಿಗೆ ಬಳಿಕ ಮಾನಸಿಕ ಖಿನ್ನತೆಗೊಳಗಾದರು. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಆಗಾಗ ಹೇಳುತ್ತಿದ್ದರು. ಅವರಿಗೆ ವೈದ್ಯರಲ್ಲಿ ಚಿಕಿತ್ಸೆ ಕೂಡ ನಡೆಯುತ್ತಿತ್ತು. ಆದರೆ ನಿನ್ನೆ ದಿನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಫಾತಿಮಾ ತನ್ನ 4 ತಿಂಗಳ ಮಗುವನ್ನು ನೀರಿನಲ್ಲಿ ಮುಳುಗಿಸಿ ಸಾಯಿಸಿ, ನಂತರ ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು