5:46 AM Wednesday23 - April 2025
ಬ್ರೇಕಿಂಗ್ ನ್ಯೂಸ್
ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ…

ಇತ್ತೀಚಿನ ಸುದ್ದಿ

ಮಂಗಳೂರಿನ ಚಾಲಕರು ಪ್ರಜ್ಞಾವಂತರು: ಚಾಲಕರಿಗೆ ಜಾಗೃತಿ ಶಿಬಿರದಲ್ಲಿ ಎಸಿಪಿ ನಟರಾಜ್

15/01/2022, 15:25

ಮಂಗಳೂರು(reporterkarnataka.com
ನಗರ ಟ್ರಾಫಿಕ್ ಪೊಲೀಸ್ ಮತ್ತು ದ. ಕ ಜಿಲ್ಲಾ ಶಾಲಾ ಮಕ್ಕಳ ಮಕ್ಕಳ ವಾಹನ ಚಾಲಕರ ಸಂಘ ಇವರ ಸಹಯೋಗದೊಂದಿಗೆ ಚಾಲಕರಿಗೆ ಜಾಗೃತಿ ಶಿಬಿರವು ಅತ್ತಾವರ ಉಮಾಮಹೇಶ್ವರಿ ದೇವಸ್ಥಾನದ ಹಾಲ್ ನಲ್ಲಿ ಜರುಗಿತು.
ಟ್ರಾಫಿಕ್ ಎಸಿಪಿ ನಟರಾಜ್ ಮಾತನಾಡಿ ಮಂಗಳೂರಿನ ಚಾಲಕರು ಇತರ ಕಡೆಗಳಿಗೆ ಹೋಲಿಸಿದರೆ ಪ್ರಜ್ಞಾವಂತರು. ಬದಲಿ ಚಾಲಕರನ್ನು ನಿಯೋಜನೆ ಮಾಡುವಾಗ ಜಾಗ್ರತೆ ವಹಿಸಿ., ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳಿ. ಮಕ್ಕಳ ಜಾಗ್ರತೆ ನಿಮ್ಮ ಹೊಣೆ. ಹಾಗೂ ಲೈಂಗಿಕತೆ ತೊಂದರೆಗಳಿಂದ ಕಾಪಾಡಿ, ದೌರ್ಜನ್ಯವನ್ನು ಮಾಡುವುದು ಎಷ್ಟು ಅಪರಾಧವೋ. ಅಷ್ಟೇ ಅದನ್ನು ನೋಡಿ ಸುಮ್ಮನಿರುವುದೋ ಅಪರಾಧ, ರಕ್ಷೆ ಸುರಕ್ಷತೆ ನಮ್ಮ ಹೊಣೆ, ಚಾಲನೆ ವೇಳೆ ತಾಳ್ಮೆಯುತ ಚಲಾವಣೆ ಮಾಡಿ ಮಾಡಿ, ಮಕ್ಕಳ ಮೇಲೆ ಸಲಿಗೆಯಿಂದ ವರ್ತಿಸಬೇಡಿ, ನೀವು ಸರಿಯಾಗಿದ್ದರೂ ನೋಡುವವರು ತಪ್ಪಾಗಿ ಭಾವಿಸುವ ಸಾಧ್ಯತೆ ಇದೆ ಎಂದು ಚಾಲಕರಿಗೆ ಕಿವಿ ಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಕದ್ರಿ ಟ್ರಾಫಿಕ್ ಇನ್ಸ್ಪೆಕ್ಟರ್ ಗೋಪಾಲಕೃಷ್ಣ ಭಟ್,ಮಾತನಾಡಿ ಪೊಲೀಸ್ ಸಿಬ್ಬಂದಿ ಕಾನೂನಿನ ಚೌಕಟ್ಟಿನಡಿಯಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ. ಆದ್ದರಿಂದ ನಾವು ಯಾರ ಮೇಲೆಯೂ ಕೂಡ ಅನಗತ್ಯ ದಂಡ ವಿಧಿಸಲು ಇಚ್ಚಿಸುವುದಿಲ್ಲ. ಓವರ್ ಲೋಡ್ ಮಾಡಿಕೊಂಡು ಹೋಗದೆ ಹೊಂದಾಣಿಕೆಯನ್ನು ಮಾಡುವ ನಿಟ್ಟಿನಲ್ಲಿ ಚಾಲಕರು ನಡೆದುಕೊಳ್ಳಬೇಕು. ಅದರ ಬದಲು ಇತರ ಚಾಲಕರಿಗೆ ದುಡಿಯಲು ಅವಕಾಶ ನೀಡಿ ಎಂದು ಅವರು ಮನವಿ ಮಾಡಿದರು.

ಮಂಗಳೂರು ಶಾರದಾ ಶಾಲೆಯ ಪ್ರಾಂಶುಪಾಲ ದಯಾನಂದ ಕಟೀಲ್ ಚಾಲಕರು ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಪಾಂಡೇಶ್ವರ ಟ್ರಾಫಿಕ್ ಪೊಲೀಸ್ ಇನ್ಸ್ಪೆಕ್ಟರ್ ಜಯಾನಂದ, ಸಂಘದ ಅಧ್ಯಕ್ಷ ಉಮೇಶ್ ಅತ್ತಾವರ, ಸಂಘಟನಾ ಕಾರ್ಯದರ್ಶಿ ಲೋಕೇಶ್,ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ರೆಹಮಾನ್ ಕುಂಜತಬೈಲ್ ನೆರೆವೇರಿಸಿದರು. ಪ್ರಧಾನ ಕಾರ್ಯದರ್ಶಿ ಕಿರಣ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು