6:08 PM Saturday8 - November 2025
ಬ್ರೇಕಿಂಗ್ ನ್ಯೂಸ್
ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌…

ಇತ್ತೀಚಿನ ಸುದ್ದಿ

ಮಂಗಳೂರಿನ ಚಾಲಕರು ಪ್ರಜ್ಞಾವಂತರು: ಚಾಲಕರಿಗೆ ಜಾಗೃತಿ ಶಿಬಿರದಲ್ಲಿ ಎಸಿಪಿ ನಟರಾಜ್

15/01/2022, 15:25

ಮಂಗಳೂರು(reporterkarnataka.com
ನಗರ ಟ್ರಾಫಿಕ್ ಪೊಲೀಸ್ ಮತ್ತು ದ. ಕ ಜಿಲ್ಲಾ ಶಾಲಾ ಮಕ್ಕಳ ಮಕ್ಕಳ ವಾಹನ ಚಾಲಕರ ಸಂಘ ಇವರ ಸಹಯೋಗದೊಂದಿಗೆ ಚಾಲಕರಿಗೆ ಜಾಗೃತಿ ಶಿಬಿರವು ಅತ್ತಾವರ ಉಮಾಮಹೇಶ್ವರಿ ದೇವಸ್ಥಾನದ ಹಾಲ್ ನಲ್ಲಿ ಜರುಗಿತು.
ಟ್ರಾಫಿಕ್ ಎಸಿಪಿ ನಟರಾಜ್ ಮಾತನಾಡಿ ಮಂಗಳೂರಿನ ಚಾಲಕರು ಇತರ ಕಡೆಗಳಿಗೆ ಹೋಲಿಸಿದರೆ ಪ್ರಜ್ಞಾವಂತರು. ಬದಲಿ ಚಾಲಕರನ್ನು ನಿಯೋಜನೆ ಮಾಡುವಾಗ ಜಾಗ್ರತೆ ವಹಿಸಿ., ದಾಖಲೆಗಳನ್ನು ಸರಿಯಾಗಿ ಇಟ್ಟುಕೊಳ್ಳಿ. ಮಕ್ಕಳ ಜಾಗ್ರತೆ ನಿಮ್ಮ ಹೊಣೆ. ಹಾಗೂ ಲೈಂಗಿಕತೆ ತೊಂದರೆಗಳಿಂದ ಕಾಪಾಡಿ, ದೌರ್ಜನ್ಯವನ್ನು ಮಾಡುವುದು ಎಷ್ಟು ಅಪರಾಧವೋ. ಅಷ್ಟೇ ಅದನ್ನು ನೋಡಿ ಸುಮ್ಮನಿರುವುದೋ ಅಪರಾಧ, ರಕ್ಷೆ ಸುರಕ್ಷತೆ ನಮ್ಮ ಹೊಣೆ, ಚಾಲನೆ ವೇಳೆ ತಾಳ್ಮೆಯುತ ಚಲಾವಣೆ ಮಾಡಿ ಮಾಡಿ, ಮಕ್ಕಳ ಮೇಲೆ ಸಲಿಗೆಯಿಂದ ವರ್ತಿಸಬೇಡಿ, ನೀವು ಸರಿಯಾಗಿದ್ದರೂ ನೋಡುವವರು ತಪ್ಪಾಗಿ ಭಾವಿಸುವ ಸಾಧ್ಯತೆ ಇದೆ ಎಂದು ಚಾಲಕರಿಗೆ ಕಿವಿ ಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಕದ್ರಿ ಟ್ರಾಫಿಕ್ ಇನ್ಸ್ಪೆಕ್ಟರ್ ಗೋಪಾಲಕೃಷ್ಣ ಭಟ್,ಮಾತನಾಡಿ ಪೊಲೀಸ್ ಸಿಬ್ಬಂದಿ ಕಾನೂನಿನ ಚೌಕಟ್ಟಿನಡಿಯಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ. ಆದ್ದರಿಂದ ನಾವು ಯಾರ ಮೇಲೆಯೂ ಕೂಡ ಅನಗತ್ಯ ದಂಡ ವಿಧಿಸಲು ಇಚ್ಚಿಸುವುದಿಲ್ಲ. ಓವರ್ ಲೋಡ್ ಮಾಡಿಕೊಂಡು ಹೋಗದೆ ಹೊಂದಾಣಿಕೆಯನ್ನು ಮಾಡುವ ನಿಟ್ಟಿನಲ್ಲಿ ಚಾಲಕರು ನಡೆದುಕೊಳ್ಳಬೇಕು. ಅದರ ಬದಲು ಇತರ ಚಾಲಕರಿಗೆ ದುಡಿಯಲು ಅವಕಾಶ ನೀಡಿ ಎಂದು ಅವರು ಮನವಿ ಮಾಡಿದರು.

ಮಂಗಳೂರು ಶಾರದಾ ಶಾಲೆಯ ಪ್ರಾಂಶುಪಾಲ ದಯಾನಂದ ಕಟೀಲ್ ಚಾಲಕರು ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಪಾಂಡೇಶ್ವರ ಟ್ರಾಫಿಕ್ ಪೊಲೀಸ್ ಇನ್ಸ್ಪೆಕ್ಟರ್ ಜಯಾನಂದ, ಸಂಘದ ಅಧ್ಯಕ್ಷ ಉಮೇಶ್ ಅತ್ತಾವರ, ಸಂಘಟನಾ ಕಾರ್ಯದರ್ಶಿ ಲೋಕೇಶ್,ಮತ್ತಿತರರು ಉಪಸ್ಥಿತರಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ರೆಹಮಾನ್ ಕುಂಜತಬೈಲ್ ನೆರೆವೇರಿಸಿದರು. ಪ್ರಧಾನ ಕಾರ್ಯದರ್ಶಿ ಕಿರಣ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು