5:59 AM Wednesday31 - December 2025
ಬ್ರೇಕಿಂಗ್ ನ್ಯೂಸ್
ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Bangalore | ಹೊಸ ವರ್ಷಾಚರಣೆ: ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ತಾಕೀತು ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ

ಇತ್ತೀಚಿನ ಸುದ್ದಿ

ಮಂಗಳೂರಿನ ಫುಡಾರ್ ಪ್ರತಿಷ್ಠಾನ 2023ನೇ ಸಾಲಿನ ಪ್ರಶಸ್ತಿ ಪ್ರದಾನ: ಪ್ರತಿಭಾವಂತ 216 ವಿದ್ಯಾರ್ಥಿಗಳಿಗೆ ಅಭಿನಂದನೆ

26/03/2023, 23:29

ಮಂಗಳೂರು(reporterkarnataka.com): ಮಂಗಳೂರಿನ ಕೊಂಕಣಿ ಕೆಥೋಲಿಕ್ ಸಮುದಾಯದ ಪ್ರತಿಷ್ಠಿತ ಸಂಸ್ಥೆ ಫುಡಾರ್ ಪ್ರತಿಷ್ಠಾನ ಇದರ ವತಿಯಿಂದ 2023 ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭ ಭಾನುವಾರ ನಗರದ ಮಿಲಾಗ್ರಿಸ್ ಜುಬಿಲಿ ಹಾಲ್ ನಲ್ಲಿ ನಡೆಯಿತು.
ಸಮಾರಂಭದಲ್ಲಿ ಮಂಗಳೂರು ಮತ್ತು ಉಡುಪಿ ಧರ್ಮ ಪ್ರಾಂತ್ಯಗಳ ವ್ಯಾಪ್ತಿಯಲ್ಲಿ 2021 – 22ನೇ ಶೈಕ್ಷಣಿಕ ವರ್ಷದಲ್ಲಿ 10ನೇ ತರಗತಿ ಮತ್ತು ಪಿಯುಸಿ ಪಬ್ಲಿಕ್ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕ ಗಳಿಸಿದ ಹಾಗೂ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳಲ್ಲಿ ರೇಂಕ್ ಗಳಿಸಿದ ಪ್ರತಿಭಾವಂತ ಕೊಂಕಣಿ ಕೆಥೋಲಿಕ್ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಮಂಗಳೂರು ಧರ್ಮ ಪ್ರಾಂತ್ಯದ ಪ್ರಧಾನ ಗುರು ಮೊ. ಮ್ಯಾಕ್ಸಿಮ್ ನೋರೋನ್ಹಾ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಫುಡಾರ್ ಪ್ರತಿಷ್ಟಾನದ ಅಧ್ಯಕ್ಷ ಜೆರಾಲ್ಡ್ ಡಿ ಕೋಸ್ತ ಅಧ್ಯಕ್ಷತೆ ವಹಿಸಿದ್ದರು. ಮುಂಬಯಿ ಕಸ್ಟಮ್ಸ್ ಮತ್ತು ಜಿ.ಎಸ್. ಟಿ. ವಿಭಾಗದ ನಿರ್ದೇಶಕಿ ಹಾಗೂ 2022 ನೇ ಸಾಲಿನ ಶೌರ್ಯ ಪ್ರಶಸ್ತಿ ವಿಜೇತ ಅಧಿಕಾರಿ ಮಿಶೆಲ್ ಕ್ವೀನಿ ಡಿ ಕೊಸ್ತ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಮಿಶೆಲ್ ಕ್ವೀನಿ ಡಿ ಕೊಸ್ತ ಅವರು ಫುಡಾರ್ ಪ್ರತಿಷ್ಠಾನವು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಅಭಿನಂದಿಸುವ ಮೂಲಕ ಸ್ತುತ್ಯಾರ್ಹ ಕೆಲಸ ಮಾಡುತ್ತಿದೆ. ಇಂದು ಸನ್ಮಾನ ಪಡೆದವರು ಸಮಾಜದ ಒಳಿತಿಗಾಗಿ ಶ್ರಮಿಸ ಬೇಕು. ನಮ್ಮ ಯುವಕರು ಉದ್ಯೋಗ ಅರಸಿಕೊಂಡು ವಿದೇಶಕ್ಕೆ ಹೋಗುವ ಬದಲು ನಮ್ಮ ದೇಶದಲ್ಲಿಯೇ ಸರಕಾರಿ ನೌಕರಿಗೆ ಸೇರಿ ಸಮಾಜ ಸೇವೆ ಮಾಡ ಬೇಕು ಎಂದು ಹೇಳಿದರು.
ಕ್ಯಾಥೋಲಿಕ್ ಸಭಾದ ಆಧ್ಯಾತ್ಮಿಕ ನಿರ್ದೇಶಕರಾದ ರೆ. ಫಾ. ಜೆ.ಬಿ. ಸಲ್ದಾನ್ಹಾ (ಮಂಗಳೂರು) ಮತ್ತು ರೆ. ಫಾ. ಫರ್ಡಿನಾಂಡ್ ಗೊನ್ಸಾಲ್ವಿಸ್ (ಉಡುಪಿ), ಕ್ಯಾಥೋಲಿಕ್ ಸಭಾ ಅಧ್ಯಕ್ಷರಾದ ಸ್ಟಾನಿ ಲೋಬೋ, ಎಲ್. ಜೆ. ಫೆರ್ನಾಂಡಿಸ್ ಮುಂತಾದವರು ಉಪಸ್ಥಿತರಿದ್ದರು.
ಉಪಾಧ್ಯಕ್ಷ ರೆ. ಫಾ. ವಾಲ್ಟರ್ ಡಿ ಮೆಲ್ಲೋ ಸ್ವಾಗತಿಸಿ ಕೋಶಾಧಿಕಾರಿ ಎಲ್ರೊಯ್ ಕಿರಣ್ ಕ್ರಾಸ್ಟೋ ವಂದಿಸಿದರು. ಸಮಾರಂಭದಲ್ಲಿ ಒಟ್ಟು 216 ಮಂದಿ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಅರುಣ್ ಫೆರ್ನಾಂಡಿಸ್ ಮತ್ತು ವಿವಿಡ್ ಡಿ ಸೋಜಾ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು