5:50 PM Wednesday17 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಮಂಗಳೂರಿನ ಕದ್ರಿ ಬಾಲ ಭವನದಲ್ಲಿ ‘ಕೋಟಿಕಂಠ ಗಾಯನ ಮತ್ತು ಕವಿಗೋಷ್ಠಿ

29/10/2022, 20:21

ಮಂಗಳೂರು(reporterkarmatka.com)
ರಾಣಿ ಪುಷ್ಪಲತಾದೇವಿ ಸಾರಥ್ಯದ ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಆಶ್ರಯದಲ್ಲಿ” ಕೋಟಿಕಂಠ ಗಾಯನ ಮತ್ತು ಕವಿಗೋಷ್ಠಿ” ನಗರದ ಕದ್ರಿ ಬಾಲ ಭವನದಲ್ಲಿ
ಶುಕ್ರವಾರ ನಡೆಯಿತು .


ಕಾರ್ಯಕ್ರಮವನ್ನು ಉದ್ಘಾಟಿಸಿದ ಕಾರ್ಮಿಕ ಇಲಾಖೆಯ ಪರಿವೀಕ್ಷಕ ರಾಜಶೇಖರ್ ರೆಡ್ಡಿ ಮಾತನಾಡಿ, ಭಾರತದಲ್ಲಿ ಹುಟ್ಟಲು ಪುಣ್ಯ ಮಾಡಿರಬೇಕು. ಅದರಲ್ಲೂ ಕರ್ನಾಟಕದಲ್ಲಿ ಹುಟ್ಟಲು ತಪಸ್ಸು ಮಾಡಿರಬೇಕು. ಕರ್ನಾಟಕವು ನಾಲ್ಕು ಭಾಗಗಳಾಗಿತ್ತು, ಆದರೆ ಕರ್ನಾಟಕವನ್ನು ಅಖಂಡ ಕರ್ನಾಟಕವಾಗಿ ಕಾಣಬೇಕು. ಈ ನಾಡಿನ ನೆಲ ಜಲ ಭಾಷೆಯನ್ನ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿ. ಕರ್ನಾಟಕ ಏಕೀಕರಣಕ್ಕಾಗಿ ಅನೇಕರು ತಮ್ಮ ಪ್ರಾಣ ತೆತ್ತಿದ್ದಾರೆ ಎಂದು ಹೇಳಿದರು. ಅಲ್ಲದೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರನ್ನು “ಕನ್ನಡದಲ್ಲಿ ಮಾತನಾಡುವೆ, ಕನ್ನಡದಲ್ಲಿ ವ್ಯವಹರಿಸುವೆ” ಎಂಬುದಾಗಿ ಪ್ರಮಾಣ ಮಾಡಿಸಿದರು .

ಕವಿಗೋಷ್ಠಿಯ ಅಧ್ಯಕ್ಷತೆಯನ್ನು ವಹಿಸಿದ್ದ ಉಪನ್ಯಾಸಕಿ ಹಾಗೂ ಕವಯತ್ರಿ ಸುಲೋಚನ ಪಚ್ಚಿನಡ್ಕ ಮಾತನಾಡಿ ಕಾವ್ಯ ಕಟ್ಟುವುದು ಅತ್ಯಂತ ಕ್ಲಿಷ್ಟಕರವಾದ ವಿಚಾರ. ಕಾವ್ಯ ಜನರ ಮನಸ್ಸನ್ನು ಮುಟ್ಟುವಂತಿರಬೇಕು ಕವಿತೆ ಜನರ ಭಾವನೆಗಳನ್ನು ಅರ್ಥೈಸುವಂತಿರಬೇಕು. ಮನುಷ್ಯನ ಮನಸ್ಸು ತಟ್ಟುವಂತಿರಬೇಕು. ನಾವು ಹಿರಿಯ ತಲೆಮಾರಿನ ಕಾವ್ಯವನ್ನು ಓದಿದ್ದೇವೆ ಕೇಳಿದ್ದೇವೆ. ಆದರೆ ಇತ್ತೀಚಿನ ಕವಿತೆಗಳಲ್ಲಿ ರಮ್ಯತೆ ಇದೆ ಹೊರತು ಗಂಭೀರತೆ ಇಲ್ಲ.

ಇವತ್ತಿಗೂ ಹಸಿವು ಮತ್ತು ಬಡತನದ ಬಗ್ಗೆ ಸಾಕಷ್ಟು ಕವಿತೆಗಳು ಬರುತ್ತಿದೆ ಎಂದರೆ ನಮ್ಮ ಸುತ್ತಮುತ್ತಲ ಸಮಾಜದಲ್ಲಿ ಇನ್ನೂ ಬಡತನ ಜೀವಂತವಾಗಿದೆ ಎಂಬುದಕ್ಕೆ ಸಾಕ್ಷಿ ಎಂದ ಅವರು ಪರಂಪರೆಯನ್ನು ಇಟ್ಟುಕೊಂಡು ವರ್ತಮಾನದಲ್ಲಿ ಬದುಕಲು ಸಾಧ್ಯವಿಲ್ಲ ಎಂದು ಹೇಳಿದರು
ಈ ಸಂದರ್ಭದಲ್ಲಿ ಕೋಟಿಕಂಠ ಗಾಯನ ಕಾರ್ಯಕ್ರಮ ನಡೆಯಿತು.
ಇದೇ ಸಂದರ್ಭದಲ್ಲಿ ಕಾಂತಾರ ಚಿತ್ರದ ಪ್ರಥಮ ದೃಶ್ಯದಲ್ಲಿ ಕಾಣಿಸಿಕೊಂಡ ನಟ ನವೀನ್ ಬೊಂದೆಲ್ ಇವರನ್ನ ಹೂಗುಚ್ಚ ನೀಡಿ ಗೌರವಿಸಲಾಯಿತು.
ವೇದಿಕೆಯಲ್ಲಿ ಸಾಮಾಜಿಕ ಚಿಂತಕ ಡಾ. ಗಣೇಶ್ ಕುಮಾರ್, ಕವಿಗೋಷ್ಠಿಯ ಸಂಚಾಲಕ ಹಾಗೂ ಕವಿ ಡಾಕ್ಟರ್ ಸುರೇಶ್ ನೆಗಳ ಗುಳಿ NSCDF ಅಧ್ಯಕ್ಷ ಗಂಗಾಧರ ಗಾಂಧಿ ಮತ್ತಿತರರು ಉಪಸ್ಥಿತರಿದ್ದರು.
KSSAP ಅಧ್ಯಕ್ಷ ರಾಣಿ ಪುಷ್ಪಲತಾ ದೇವಿ ಸ್ವಾಗತಿಸಿ ಪ್ರಸ್ತಾವನೆ ಗೈದರು. ಗಂಗಾಧರ ಗಾಂಧಿ ವಂದಿಸಿದರು. ಅಪೂರ್ವ ಕಾರಂತ್ ಕಾರ್ಯಕ್ರಮ ನಿರೂಪಿಸಿದರು.

ಈ ಸಂದರ್ಭದಲ್ಲಿ ಕನ್ನಡ ಮತ್ತ ಸಂಸ್ಕೃತಿ ಇಲಾಖೆ ನಿರ್ದೇಶನದಂತೆ ಇ.ಎಸ್.ಕರ್ಕಿಯವರ ಹಚ್ಚೆವು ಕನ್ನಡದ ದೀಪ, ಹಂಸಲೇಖರವರ ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು, ಹುಯಿಲಗೋಳ ನಾರಾಯಣ ರಾವ್ ರವರ ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು ಹಾಡುಗಳನ್ನು ಸಮೂಹಗಾನದಲ್ಲಿ ಸಾದರ ಪಡಿಸಲಾಯಿತು.

ನಂತರ ನಡೆದ ಕವಿಗೋಷ್ಟಿಯಲ್ಲಿ ಗೋಪಾಲ್ ಕೃಷ್ಣ ಶಾಸ್ತ್ರಿ, ಸೌಮ್ಯ ಗೋಪಾಲ್ , ರೇಖಾ ಸುದೇಶ್,ಪರಿಮಳ ಮಹೇಶ್ , ಪ್ರಕಾಶ್ ಪಡಿಯಾರ್, ಭಾಸ್ಕರ್ ವರ್ಕಾಡಿ, ರೇಮಂಡ್ ಡಿಕುಹ್ನ ತಾಕೊಡೆ,ಡಾ. ವಾಣಿಶ್ರೀ ಕಾಸರಗೋಡ್, ಗುರುರಾಜ್ ಎಂ.ಆರ್,ನಾರಾಯಣ ನಾಯ್ಕ್ àaààಳಿ, ಕೊಲ್ಚಪ್ಪೆ ಗೋವಿಂದ ಭಟ್, ಉಮೇಶ್ ಕಾರಂತ್,ಸತ್ಯವತಿ ಕೊಳ್ಚಪ್ಪು, ಕಟ್ಟದ ಮೂಲೆ ನರಸಿಂಹ ಭಟ್, ಶ್ಯಾಮಪ್ರಸಾದ್ ಭಟ್ ಕಾರ್ಕಳ,ಜೂಲಿಯಟ್ ಫೆರ್ನಾಂಡಿಸ್, ಜಯಾನಂದ ಪೆರಾಜೆ, ಅನುರಾಧ ರಾಜೀವ್ ಸುರತ್ಕಲ್, ಸಂಧ್ಯಾ ಭಟ್
ಗೀತಾ ಲಕ್ಷ್ಮೀಶ್, ಸತೀಶ್ ಬಿಳಿಯೂರು,ಸೌಮ್ಯ ಆರ್ ಶೆಟ್ಟಿ,, ಸುಖಲತಾ ಶೆಟ್ಟಿ,ವಾಣಿ ಲೋಕಯ್ಯ ಕನ್ನಡದ ಕವನಗಳನ್ನ ವಾಚಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು