2:47 PM Sunday29 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಮಂಗಳೂರಿನಿಂದ ಕಳವಾದ ಟೆಂಪೋ ಟ್ರಾವಲರ್ ಬೆಳಗಾವಿಯಲ್ಲಿ ವಶಕ್ಕೆ: ಉರ್ವ ಪೊಲೀಸರಿಂದ 3 ಮಂದಿ ಬಂಧನ

23/09/2023, 12:55

ಮಂಗಳೂರು(reporterkarnataka.com): ನಗರದ ಕುಂಟಿಕಾನ ಫ್ಲೈ ಓವರ್ ಬಳಿ ಪಾರ್ಕ್ ಮಾಡಿದ್ದ ಟೆಂಪೋ ಟ್ರಾವೆಲರ್ ( KA 19 AC 8179) ವಾಹನವನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬೆಳಗಾವಿಯಲ್ಲಿ ಮೂವರನ್ನು ಬಂಧಿಸಿದ್ದು, ವಾಹನ ವಶಪಡಿಸಿಕೊಂಡಿದ್ದಾರೆ.
ಸೆ.14ರಂದು ರಾತ್ರಿ 8:30 ಸಮಯಕ್ಕೆ ವಾಹನವನ್ನು ಪಾರ್ಕ್ ಮಾಡಿದ್ದು ಸೆ. 15ರಂದು ಮಧ್ಯಾಹ್ನ 12: 30 ಸಮಯಕ್ಕೆ ವಾಹನ ಕಳುವಾದ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ವಾಹನ ಕಳವು ಪ್ರಕರಣದ ಆರೋಪಿಗಳ ಮತ್ತು ವಾಹನದ ಪತ್ತೆಗಾಗಿ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಆದೇಶದಂತೆ ಹಾಗೂ ಡಿಸಿಪಿಗಳಾ್ ಸಿದ್ದಾರ್ಥ್ ಗೋಯಲ್ ಮತ್ತು ದಿನೇಶ್ ಕುಮಾರ್ ಅವರ ಮಾರ್ಗದರ್ಶನದಂತೆ ಎಸಿಪಿ ಮಹೇಶ್ ಕುಮಾರ್ ಅವರ ನೇತೃತ್ವದಲ್ಲಿ ಪೊಲೀಸ್ ಠಾಣಾ ನಿರೀಕ್ಷಕರಾದ ಭಾರತಿ ಜಿ. ಅವರ ಸಾರಥ್ಯದಲ್ಲಿ ವಿಶೇಷ ತಂಡವನ್ನು ರಚಿಸಿ ಉಪ ನಿರೀಕ್ಷಕರವಾದ ಹರೀಶ್ ಹೆಚ್ ವಿ, ಎಎಸ್ಐ ವಿನಯ್ ಕುಮಾರ್ ಎ ಎಸ್ ಐ ಉಲ್ಲಾಸ್ ಮಹಾಲೆ ಪೊಲೀಸ್ ಸಿಬ್ಬಂದಿಗಳಾದ ಗಿರೀಶ್ , ಭಾಸ್ಕರ್ , ಅಭಿಷೇಕ್ , ಪ್ರಜ್ವಲ್ ಅವರುಗಳು ಬೆಳಗಾವಿಯಲ್ಲಿ ಆರೋಪಿಗಳಾದ ಅರೀಫ್ ಉಲ್ಲಾಖಾನ್ ಯಾನೆ ಅರೀಫ್, ಅಮಿತ್ ಬಾಹುಬಲಿ ಪಂಚೋಡಿ ಯಾನೆ ಬೇಬಿ, ಸುರೇಂದ್ರ ಕುಮಾರ್ ಇವರುಗಳನ್ನು ವಶಕ್ಕೆ ಪಡೆದು ಕಳುವಾದ ಸುಮಾರು 15 ಲಕ್ಷ ಮೌಲ್ಯದ ಟೆಂಪೋ ಟ್ರಾವೆಲ್ಲೆರ್ ವಶಪಡಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು