1:49 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಮಂಗಳೂರಿನಿಂದ ಕಳವಾದ ಟೆಂಪೋ ಟ್ರಾವಲರ್ ಬೆಳಗಾವಿಯಲ್ಲಿ ವಶಕ್ಕೆ: ಉರ್ವ ಪೊಲೀಸರಿಂದ 3 ಮಂದಿ ಬಂಧನ

23/09/2023, 12:55

ಮಂಗಳೂರು(reporterkarnataka.com): ನಗರದ ಕುಂಟಿಕಾನ ಫ್ಲೈ ಓವರ್ ಬಳಿ ಪಾರ್ಕ್ ಮಾಡಿದ್ದ ಟೆಂಪೋ ಟ್ರಾವೆಲರ್ ( KA 19 AC 8179) ವಾಹನವನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬೆಳಗಾವಿಯಲ್ಲಿ ಮೂವರನ್ನು ಬಂಧಿಸಿದ್ದು, ವಾಹನ ವಶಪಡಿಸಿಕೊಂಡಿದ್ದಾರೆ.
ಸೆ.14ರಂದು ರಾತ್ರಿ 8:30 ಸಮಯಕ್ಕೆ ವಾಹನವನ್ನು ಪಾರ್ಕ್ ಮಾಡಿದ್ದು ಸೆ. 15ರಂದು ಮಧ್ಯಾಹ್ನ 12: 30 ಸಮಯಕ್ಕೆ ವಾಹನ ಕಳುವಾದ ಬಗ್ಗೆ ಉರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ವಾಹನ ಕಳವು ಪ್ರಕರಣದ ಆರೋಪಿಗಳ ಮತ್ತು ವಾಹನದ ಪತ್ತೆಗಾಗಿ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಆದೇಶದಂತೆ ಹಾಗೂ ಡಿಸಿಪಿಗಳಾ್ ಸಿದ್ದಾರ್ಥ್ ಗೋಯಲ್ ಮತ್ತು ದಿನೇಶ್ ಕುಮಾರ್ ಅವರ ಮಾರ್ಗದರ್ಶನದಂತೆ ಎಸಿಪಿ ಮಹೇಶ್ ಕುಮಾರ್ ಅವರ ನೇತೃತ್ವದಲ್ಲಿ ಪೊಲೀಸ್ ಠಾಣಾ ನಿರೀಕ್ಷಕರಾದ ಭಾರತಿ ಜಿ. ಅವರ ಸಾರಥ್ಯದಲ್ಲಿ ವಿಶೇಷ ತಂಡವನ್ನು ರಚಿಸಿ ಉಪ ನಿರೀಕ್ಷಕರವಾದ ಹರೀಶ್ ಹೆಚ್ ವಿ, ಎಎಸ್ಐ ವಿನಯ್ ಕುಮಾರ್ ಎ ಎಸ್ ಐ ಉಲ್ಲಾಸ್ ಮಹಾಲೆ ಪೊಲೀಸ್ ಸಿಬ್ಬಂದಿಗಳಾದ ಗಿರೀಶ್ , ಭಾಸ್ಕರ್ , ಅಭಿಷೇಕ್ , ಪ್ರಜ್ವಲ್ ಅವರುಗಳು ಬೆಳಗಾವಿಯಲ್ಲಿ ಆರೋಪಿಗಳಾದ ಅರೀಫ್ ಉಲ್ಲಾಖಾನ್ ಯಾನೆ ಅರೀಫ್, ಅಮಿತ್ ಬಾಹುಬಲಿ ಪಂಚೋಡಿ ಯಾನೆ ಬೇಬಿ, ಸುರೇಂದ್ರ ಕುಮಾರ್ ಇವರುಗಳನ್ನು ವಶಕ್ಕೆ ಪಡೆದು ಕಳುವಾದ ಸುಮಾರು 15 ಲಕ್ಷ ಮೌಲ್ಯದ ಟೆಂಪೋ ಟ್ರಾವೆಲ್ಲೆರ್ ವಶಪಡಿಸಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು