9:17 PM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಮಂಗಳೂರಿನ ಕೊಟ್ಟಾರ ಚೌಕಿ ಸರ್ಕಲ್ ಗೆ ವೀರಯೋಧ ಕ್ಯಾಪ್ಟನ್ ಪ್ರಾಂಜಲ್ ಹೆಸರು: ಶಾಸಕ ಡಾ. ಭರತ್ ಶೆಟ್ಟಿ

26/11/2023, 22:17

ಮಂಗಳೂರು(reporterkarnataka.com): ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗೆ ಹೋರಾಡಿ ದೇಶಕ್ಕಾಗಿ ತನ್ನ ಪ್ರಾಣವನ್ನೇ ಬಲಿದಾನಗೈದ ಕರುನಾಡಿನ ವೀರಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಹೆಸರನ್ನು ಹೆದ್ದಾರಿ ಮತ್ತು ನಗರ ಸಂಪರ್ಕಿಸುವ ಕೊಟ್ಟಾರಚೌಕಿ ಜಂಕ್ಷನ್ ಸರ್ಕಲ್ ಗೆ ಇಡಲಾಗುವುದು ಎಂದು ಎಂದು ಶಾಸಕ ಡಾ. ಭರತ್ ಶೆಟ್ಟಿ ವೈ.
ತಿಳಿಸಿದ್ದಾರೆ.
ಕೊಟ್ಟಾರಚೌಕಿಯಲ್ಲಿ ಅಮರ್ ಜವಾನ್ ಥೀಮ್ ಪಾರ್ಕ್ ನಿರ್ಮಾಣವಾಗಲಿದೆ. ಇದರ ಜತೆಗೆ ಮಂಗಳೂರಿನಲ್ಲಿ ಕಲಿತು ಬೆಳೆದು ಅವಿನಾಭಾವ ಸಂಬಂಧ ಹೊಂದಿರುವ ಕ್ಯಾ.ಪ್ರಾಂಜಲ್ ಹೆಸರಿಡುವುದು ಸೂಕ್ತವಾಗಿದೆ .ಈ ಬಗ್ಗೆ ಮಂಗಳೂರು ಪಾಲಿಕೆ ಕ್ರಮ ಕೈಗೊಳ್ಳುವಂತೆ ಪತ್ರ ಬರೆದು ಸೂಚನೆ ನೀಡಲಾಗುದು ಎಂದು ತಿಳಿಸಿದ್ದಾರೆ.
ಉತ್ತಮ ಜೀವನಕ್ಕಾಗಿ ಲಕ್ಷಾಂತರ ವೇತನ ಬರುವ ಬೇರೆ ಉದ್ಯೋಗವನ್ನು ಆರಿಸುವ ಬದಲು ಬಾಲ್ಯದಿಂದಲೇ ಸೈನ್ಯ ಸೇರಿ ದೇಶ ಸೇವೆ ಮಾಡುವ ಕ್ಯಾಪ್ಟನ್ ಪ್ರಾಂಜಲ್ ಅವರ‌ ನಿರ್ಧಾರ , ಅವರ ಸಾಹಸಗಾಥೆ ಯುವಶಕ್ತಿಗೆ ಪ್ರೇರಣೆಯಾಗಿದೆ.
ಅವರ ಕುಟುಂಬಕ್ಕೆ ಅನಿರೀಕ್ಷಿತ ಆಘಾತವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ತಿಳಿಸಿದ್ದಾರೆ‌.

ಇತ್ತೀಚಿನ ಸುದ್ದಿ

ಜಾಹೀರಾತು