2:12 PM Tuesday22 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ…

ಇತ್ತೀಚಿನ ಸುದ್ದಿ

ಮಂಗಳೂರಿನ ಕೆಪಿಟಿ ಮೈದಾನದಲ್ಲಿ 25ರಂದು ಭಂಡಾರಿ ಸಮಾಜದ ವಾರ್ಷಿಕ ಕ್ರೀಡಾಕೂಟ

21/12/2022, 19:46

ಮಂಗಳೂರು(reporterkarnataka.com): ಭಂಡಾರಿ ಸಮಾಜ ಬಂಧುಗಳ ವಾರ್ಷಿಕ ಕ್ರೀಡಾಕೂಟ ಡಿಸೆಂಬರ್ 25ರಂದು ನಗರದ ಕೆಪಿಟಿ ಮೈದಾನದಲ್ಲಿ ಭಂಡಾರಿ ಸ್ವಯಂ ಸೇವಕ ಸಂಘದ ನೇತೃತ್ವದಲ್ಲಿ ನಡೆಯಲಿದೆ.

ರಾಷ್ಟ್ರ ಮಟ್ಟದ ಅಥ್ಲೆಟಿಕ್ ಚಾಂಪಿಯನ್ ಅನಿತಾ ಕೊಡವೂರು ಉಡುಪಿ ಕ್ರೀಡಾಜ್ಯೋತಿ ಪ್ರಜ್ವಲನೆ ಮಾಡಲಿದ್ದಾರೆ. ರಾಜ್ಯಮಟ್ಟದ ಕರಾಟೆ ಪಟು ಅನಘ ಭಂಡಾರಿ ಪ್ರತಿಜ್ಞಾ ಸ್ವೀಕರಿಸಿ , ಸಂಘದ ಅಧ್ಯಕ್ಷೆ ಬಬಿತಾ ಲತೀಶ್ ಅಧ್ಯಕ್ಷತೆ ವಹಿಸಿಲಿದ್ದಾರೆ. ಭಂಡಾರಿ ಯುವ ವೇದಿಕೆಯ ಮಾಜಿ ಅಧ್ಯಕ್ಷ ಕೃಷ್ಣಾನಂದ ಭಂಡಾರಿ ಧ್ವಜಾರೋಹಣ ಮಾಡಿ , ಎ.ಜೆ.ಆಸ್ಪತ್ರೆ ಮಂಗಳೂರು ಐ.ಎಂ.ಎಸ್.ತುರ್ತು ಚಿಕಿತ್ಸಾ ವಿಭಾಗದ ಮೇಲ್ವಿಚಾರಕಿ ಲೀಲಾವತಿ ಭಾಸ್ಕರ್ ಭಂಡಾರಿ ಕೋಡಿಕಲ್ ಮುಖ್ಯ ಅತಿಥಿಯಾಗಿ ಅಗಮಿಸಲಿದ್ದಾರೆ. ಕ್ರಿಕೆಟ್, ತ್ರೋಬಾಲ್, ವಾಲಿಬಾಲ್ ,
ಹಗ್ಗಜಗ್ಗಾಟ,ಆಟೋಟ ಸ್ವರ್ಧೆಗಳು ಮಡಕೆ ಒಡೆಯುವುದು ಇನ್ನಿತರ ಸ್ವರ್ಧೆಗಳು ಹಾಗೂ ಭಂಡಾರಿ ಸಮಾಜದ ವಧು – ವರರ ನೊಂದಾವಣೆ ನಡೆಯಲಿದೆ.

ಅಂದು ಸಾಯಂಕಾಲ ನಡೆಯುವ ಸಮಾರೋಪ ಸಮಾರಂಭ ಬಹುಮಾನ ವಿತರಣೆಯ ಮುಖ್ಯ ಅತಿಥಿಗಳಾಗಿ ಭಂಡಾರಿ ಮಹಾಮಂಡಳದ ಅಧ್ಯಕ್ಷ ಸದಾಶಿವ ಭಂಡಾರಿ ಸಕಲೇಶಪುರ , ಬೆಂಗಳೂರು ಡಿಜಿಎಸ್ . ಜಿಐಎಮ್ಎಸ್.ಆಸ್ಪತ್ರೆಯ ಸಹಾಯಕ ಪ್ರೊಫೆಸರ್ ಡಾ.ರೋಹನ್ ಪಿ.ಜೆ.ಭಂಡಾರಿ , ಉಡುಪಿ ಪ್ರೊಬೆಷನರಿ ಸಬ್ ಇನ್ಸ್ ಪೆಕ್ಟರ್ ನಿಧಿ ಬಿ.ಎನ್., ಉಡುಪಿ ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಮಂಗಳೂರು ಗುರುಪ್ರಸಾದ್ ಭಂಡಾರಿ ಹಿರೇಬೆಟ್ಟು , ಬೆಳ್ತಂಗಡಿ ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಉಮೇಶ್ ಭಂಡಾರಿ ಉಜಿರೆ , ರಾಷ್ಟ್ರ ಮಟ್ಟದ ದೇಹದಾರ್ಡ್ಯ ಪಟು ಯಶಸ್ವಿನಿ ವಿ.ಭಂಡಾರಿ , ಮಂಗಳೂರು ಭಂಡಾರಿ ಸಮಾಜ ಸಂಘದ ಅಧ್ಯಕ್ಷ ರಮಾನಾಥ ಭಂಡಾರಿ ಮತ್ತು ಮಂಗಳೂರು ಭಂಡಾರಿ ಯುವ ವೇದಿಕೆಯ ಅಧ್ಯಕ್ಷ ನಿತ್ಯಾನಂದ ಭಂಡಾರಿ ಆಗಮಿಸಲಿದ್ದಾರೆ ಎಂದು ಸಂಘದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು