2:53 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಮಂಗಳೂರಿನ ಕೆಪಿಟಿ ಮೈದಾನದಲ್ಲಿ 25ರಂದು ಭಂಡಾರಿ ಸಮಾಜದ ವಾರ್ಷಿಕ ಕ್ರೀಡಾಕೂಟ

21/12/2022, 19:46

ಮಂಗಳೂರು(reporterkarnataka.com): ಭಂಡಾರಿ ಸಮಾಜ ಬಂಧುಗಳ ವಾರ್ಷಿಕ ಕ್ರೀಡಾಕೂಟ ಡಿಸೆಂಬರ್ 25ರಂದು ನಗರದ ಕೆಪಿಟಿ ಮೈದಾನದಲ್ಲಿ ಭಂಡಾರಿ ಸ್ವಯಂ ಸೇವಕ ಸಂಘದ ನೇತೃತ್ವದಲ್ಲಿ ನಡೆಯಲಿದೆ.

ರಾಷ್ಟ್ರ ಮಟ್ಟದ ಅಥ್ಲೆಟಿಕ್ ಚಾಂಪಿಯನ್ ಅನಿತಾ ಕೊಡವೂರು ಉಡುಪಿ ಕ್ರೀಡಾಜ್ಯೋತಿ ಪ್ರಜ್ವಲನೆ ಮಾಡಲಿದ್ದಾರೆ. ರಾಜ್ಯಮಟ್ಟದ ಕರಾಟೆ ಪಟು ಅನಘ ಭಂಡಾರಿ ಪ್ರತಿಜ್ಞಾ ಸ್ವೀಕರಿಸಿ , ಸಂಘದ ಅಧ್ಯಕ್ಷೆ ಬಬಿತಾ ಲತೀಶ್ ಅಧ್ಯಕ್ಷತೆ ವಹಿಸಿಲಿದ್ದಾರೆ. ಭಂಡಾರಿ ಯುವ ವೇದಿಕೆಯ ಮಾಜಿ ಅಧ್ಯಕ್ಷ ಕೃಷ್ಣಾನಂದ ಭಂಡಾರಿ ಧ್ವಜಾರೋಹಣ ಮಾಡಿ , ಎ.ಜೆ.ಆಸ್ಪತ್ರೆ ಮಂಗಳೂರು ಐ.ಎಂ.ಎಸ್.ತುರ್ತು ಚಿಕಿತ್ಸಾ ವಿಭಾಗದ ಮೇಲ್ವಿಚಾರಕಿ ಲೀಲಾವತಿ ಭಾಸ್ಕರ್ ಭಂಡಾರಿ ಕೋಡಿಕಲ್ ಮುಖ್ಯ ಅತಿಥಿಯಾಗಿ ಅಗಮಿಸಲಿದ್ದಾರೆ. ಕ್ರಿಕೆಟ್, ತ್ರೋಬಾಲ್, ವಾಲಿಬಾಲ್ ,
ಹಗ್ಗಜಗ್ಗಾಟ,ಆಟೋಟ ಸ್ವರ್ಧೆಗಳು ಮಡಕೆ ಒಡೆಯುವುದು ಇನ್ನಿತರ ಸ್ವರ್ಧೆಗಳು ಹಾಗೂ ಭಂಡಾರಿ ಸಮಾಜದ ವಧು – ವರರ ನೊಂದಾವಣೆ ನಡೆಯಲಿದೆ.

ಅಂದು ಸಾಯಂಕಾಲ ನಡೆಯುವ ಸಮಾರೋಪ ಸಮಾರಂಭ ಬಹುಮಾನ ವಿತರಣೆಯ ಮುಖ್ಯ ಅತಿಥಿಗಳಾಗಿ ಭಂಡಾರಿ ಮಹಾಮಂಡಳದ ಅಧ್ಯಕ್ಷ ಸದಾಶಿವ ಭಂಡಾರಿ ಸಕಲೇಶಪುರ , ಬೆಂಗಳೂರು ಡಿಜಿಎಸ್ . ಜಿಐಎಮ್ಎಸ್.ಆಸ್ಪತ್ರೆಯ ಸಹಾಯಕ ಪ್ರೊಫೆಸರ್ ಡಾ.ರೋಹನ್ ಪಿ.ಜೆ.ಭಂಡಾರಿ , ಉಡುಪಿ ಪ್ರೊಬೆಷನರಿ ಸಬ್ ಇನ್ಸ್ ಪೆಕ್ಟರ್ ನಿಧಿ ಬಿ.ಎನ್., ಉಡುಪಿ ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಮಂಗಳೂರು ಗುರುಪ್ರಸಾದ್ ಭಂಡಾರಿ ಹಿರೇಬೆಟ್ಟು , ಬೆಳ್ತಂಗಡಿ ಭಂಡಾರಿ ಸಮಾಜ ಸಂಘದ ಅಧ್ಯಕ್ಷ ಉಮೇಶ್ ಭಂಡಾರಿ ಉಜಿರೆ , ರಾಷ್ಟ್ರ ಮಟ್ಟದ ದೇಹದಾರ್ಡ್ಯ ಪಟು ಯಶಸ್ವಿನಿ ವಿ.ಭಂಡಾರಿ , ಮಂಗಳೂರು ಭಂಡಾರಿ ಸಮಾಜ ಸಂಘದ ಅಧ್ಯಕ್ಷ ರಮಾನಾಥ ಭಂಡಾರಿ ಮತ್ತು ಮಂಗಳೂರು ಭಂಡಾರಿ ಯುವ ವೇದಿಕೆಯ ಅಧ್ಯಕ್ಷ ನಿತ್ಯಾನಂದ ಭಂಡಾರಿ ಆಗಮಿಸಲಿದ್ದಾರೆ ಎಂದು ಸಂಘದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು