2:36 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮಂಗಳೂರಿನ ಪಾದುವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

30/09/2023, 22:27

ಮಂಗಳೂರು(reporterkarnataka.com): ನಗರದ ಪಾದುವ ಕಾಲೇಜಿನ ಪ್ರಸಕ್ತ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ನಡೆಯಿತು.


ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಉಪನೋಂದಣಾಧಿಕಾರಿ ಹಾಗೂ ಮ್ಯಾಪ್ಸ್ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಭಾಕರ್ ನೀರುಮಾರ್ಗ ಸಂಘವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಲೇಜು ನಾಯಕರ ಪಾತ್ರ ಯಾವ ರೀತಿ ಕಾಲೇಜಿನ ಅಭಿವೃದ್ಧಿಗೆ ಪೂರಕವಾಗುವುದು ಎಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ ಪಾದುವ ಶಿಕ್ಷಣ ಸಂಸ್ಥೆಯ ಸಂಚಾಲಕ ವಂದನೀಯ ಫಾ| ವಿನ್ಸೆಂಟ್ ಮೊಂತೇರೊ ಅವರು ಆಶೀರ್ವಾದಿಸಿ, ವಿದ್ಯಾರ್ಥಿ ಸಂಘವು ನಿರಂತರ ಪ್ರಯತ್ನದಿಂದ ಉತ್ತಮ ಚಟುವಟಿಕೆಗಳನ್ನು ನಡೆಸಿ ಕಾಲೇಜಿನ ಕೀರ್ತಿ ಹೆಚ್ಚಿಸುವಂತೆ ಸಲಹೆ ನೀಡಿದರು.
ಇನ್ನೋರ್ವ ಅತಿಥಿಯಾದ ಅಡ್ವಕೇಟ್ ಹಾಗೂ ಮಾಜಿ ಕಾರ್ಪೊರೇಟರ್ ಮರಿಯಮ್ಮ ಥೋಮಸ್‌ ಉತ್ತಮ ನಾಯಕತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಫಾ| ಅರುಣ್ ವಿಲ್ಸನ್ ಲೋಬೋ ಅವರು ಸ್ವಾಗತಿಸಿದರು. ವಿದ್ಯಾರ್ಥಿ ನಾಯಕರಿಗೆ ಪ್ರಮಾಣವಚನ ನೆರವೇರಿಸಿದರು. ಉಪಪ್ರಾಂಶುಪಾಲರಾದ ಪ್ರೊ| ರೋಶನ್ ಸಾಂತುಮಾಯೊರ್, ವಿದ್ಯಾರ್ಥಿ ಸಂಘದ ಸಂಯೋಜಕರಾದ ರಿನಾ ಹಾಗೂ ಅಕ್ಷತಾ ಹಾಗೂ ವಿದ್ಯಾರ್ಥಿ ಸಂಘದ ಅಧ್ಯಕ್ಷ ವಿಲ್ಸನ್ ಡಿಸೋಜ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಮೆಲಿಟಾ ಡಿಸೋಜ ವಂದಿಸಿದರು. ವಿದ್ಯಾರ್ಥಿಗಳಾದ ಆಲ್ವಿನ್ ಹಾಗೂ ಮೆಲಿಟಾ ರೊಸಾರಿಯೋ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು