12:56 AM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಮಂಗಳೂರಿನ ಪಾಲ್ದನೆ ಚರ್ಚ್ ನಲ್ಲಿ ಹಿರಿಯ ನಾಗರಿಕರ ದಿನಾಚರಣೆ

31/10/2024, 17:11

ಮಂಗಳೂರು(reporterkarnataka.com): ನಗರದ ಹೊರವಲಯದ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಹಿರಿಯ ನಾಗರಿಕರ ದಿನವನ್ನು ಆಚರಿಸಲಾಯಿತು. ಚರ್ಚ್ ವ್ಯಾಪ್ತಿಯ 10 ವಾರ್ಡ್ ಗಳ 82 ಮಂದಿ ಹಿರಿಯ ನಾಗರಿಕರು ಭಾಗವಹಿಸಿದ್ದರು. ಪ್ರಾರಂಭದಲ್ಲಿ ಬಲಿ ಪೂಜೆ ನಡೆಯಿತು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿದ್ದ ವಂದನೀಯ ಫಾ. ರಿಚಾರ್ಡ್ ಕ್ವಾಡ್ರಸ್ ಅವರು ಹಿರಿಯ ನಾಗರಿಕರು ನಮಗೆ ದಾರಿ ದೀಪವಾಗಿದ್ದಾರೆ ಎಂದು ಹೇಳಿದರು.
ಚರ್ಚಿನ ಪ್ರದಾನ ಧರ್ಮ ಗುರು ವಂದನೀಯ ಫಾ. ಆಲ್ಬನ್ ಡಿ ಸೋಜಾ ಅವರು ಹಿರಿಯ ನಾಗರಿಕರಿಗೆ ಹಿತ ವಚನ ನೀಡಿದರು.
ಸಾಂಸ್ಕೃತಿಕ ಸಮಿತಿಯ ಸಂಚಾಲಕಿ ಪ್ಯಾಟ್ಸಿ ಮೊಂತೇರೊ, ಸ್ವಾಗತಿಸಿದರು. ಚರ್ಚ್ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೇರೊ, ಉಪಸ್ಥಿತರಿದ್ದರು. ಹಿರಿಯ ನಾಗರಿಕರ ಪರವಾಗಿ ಚಾರ್ಲ್ಸ್ ಡಿಮೆಲ್ಲೊ ತಮ್ಮ ಅನಿಸಿಕೆ ಹೇಳಿದರು. ಪ್ಲಾವಿಯಾ ಡಿ ಸೋಜಾ ಕಾರ್ಯಕ್ರಮ ನಿರ್ವಹಿಸಿದರು. ಸಿರಿಲ್ ಫೆರ್ನಾಂಡಿಸ್ ಮತ್ತು ತಂಡದವರು ಕಿರು ನಾಟಕ ಪ್ರದರ್ಶಿಸಿದರು. ಚಾರ್ಲ್ಸ್ ಫೆರ್ನಾಂಡಿಸ್ ನಗೆ ಹನಿ ಪ್ರದರ್ಶನ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು