6:16 PM Monday19 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಮಂಗಳೂರಿನ‌ ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಸಂತ ಜೋಸೆಫ್ ವಾರ್ಡಿನ ವಾರ್ಷಿಕ ಹಬ್ಬ

22/04/2024, 14:16

ಮಂಗಳೂರು(reporterkarnataka.com): ಪಾಲ್ದನೆ ಸಂತ ತೆರೆಸಾ ಚರ್ಚ್ ನಲ್ಲಿ ಚರ್ಚಿನ ಸಂತ ಜೋಸೆಫ್ ವಾರ್ಡಿನ ವಾರ್ಷಿಕ ಹಬ್ಬ ವಾರ್ಡಿನ ವಿನ್ಸೆಂಟ್ ಪಿಂಟೋ ಅವರ ತೆರೆದ ಮೈದಾನದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ. ಫಾ. ಅಲ್ಬನ್ ಡಿಸೋಜ ಅವರು ವಹಿಸಿದ್ದು, ಈ ವಾರ್ಡ್ ಬಹಳಷ್ಟು ಪ್ರಗತಿ ಹೊಂದಿದೆ. ವಾರ್ಡಿನ ಸರ್ವತೋಮುಖ ಅಭಿವೃದ್ದಿ ನಾವು ನೋಡುತ್ತಾ ಇದ್ದೇವೆ ಎಂದು ಶ್ಲಾಘಿಸಿ ಶುಭ ಹಾರೈಸಿದರು.
ಚರ್ಚಿನ ಪಾಲನಾ ಸಮಿತಿ ಉಪಾಧ್ಯಕ್ಷರಾದ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೆರೊ, 21 ಆಯೋಗಗಳ ಸಂಯೋಜಕ ಜೊಸ್ಲಿನ್ ಲೋಬೊ ಉಪಸ್ಥಿತರಿದ್ದು, ಶುಭ ಹಾರೈಸಿದರು.
ವಾರ್ಡಿನ ಮುಖ್ಯಸ್ಥೆ ಶೀಲಾ ಡಿಸೋಜ ಅವರು ಅತಿಥಿಗಳನ್ನು ಸ್ವಾಗತಿಸಿದರು. ವಾರ್ಡಿನ ಪರವಾಗಿ ಕಳೆದ 7 ವರ್ಷಗಳಿಂದ ನಿರಂತರ ವಾರ್ಡಿನ ಮುಖ್ಯಸ್ಥರಾಗಿ ಸೇವೆಯನ್ನು ನೀಡುತ್ತಿರುವ ಶೀಲಾ ಡಿಸೋಜ ಅವರನ್ನು ಫಲ- ಪುಷ್ಟ ಹಾಗೂ ಶಾಲು ಹೊದೆಸಿ ಸನ್ಮಾನಿಸಲಾಯಿತು. ವಾರ್ಡಿನ ಪ್ರತಿನಿಧಿ ಸವಿತಾ ಡಿಕುನ್ನಾ ಅವರು ವರದಿ ವಾಚಿಸಿದರು. ಮತ್ತೋರ್ವ ಪ್ರತಿನಿಧಿ ಅರುಣ್ ಪಿಂಟೋ ಉಪಸ್ಥಿತರಿದ್ದರು. ವಿಲ್ಮಾ ಪಿಂಟೋ ಕಾರ್ಯಕ್ರಮ ನಿರೂಪಿಸಿದರು.
ವಾರ್ಡಿನ ಎಲ್ಲ ವಯಸ್ಸಿನ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಇತರ ವಾರ್ಡಿನ ಮುಖ್ಯಸ್ಥರು, ಚರ್ಚಿನ ಸಂಘ- ಸಂಸ್ಥೆಗಳ
ಮುಖ್ಯಸ್ಥರು ಭಾಗವಹಿಸಿದ್ದರು. ಸಹ ಭೋಜನ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು