3:17 AM Wednesday6 - August 2025
ಬ್ರೇಕಿಂಗ್ ನ್ಯೂಸ್
ಮತದಾರರ ಹಕ್ಕು ರಕ್ಷಣೆ ರಾಜಕೀಯ ಪಕ್ಷಗಳ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:… ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ… Shivamogga | ತೀರ್ಥಹಳ್ಳಿ: ಮನೆಗಾಗಿ ಸಾಲ; ಮನನೊಂದ ವೃದ್ದ ದಂಪತಿ ಒಂದೇ ಮರಕ್ಕೆ… Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ… Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ…

ಇತ್ತೀಚಿನ ಸುದ್ದಿ

ಮಂಗಳೂರಿನ ವೈದ್ಯ ಡಾ. ನೆಗಳಗುಳಿ ಅವರ ‘ಕಡಲ ಹೂವು’ ಗಜಲ್ ಸಂಕಲನ ಲೋಕಾರ್ಪಣೆ

01/11/2023, 11:08

ಮಂಗಳೂರು(reporterkarnataka.com):
ಮಂಗಳೂರಿನ ಪಿ.ವಿ.ಪ್ರದೀಪ್ ಕುಮಾರ್ ಸಾರಥ್ಯದ ಕಥಾಬಿಂದು ಪ್ರಕಾಶನದ ಹದಿನಾರನೇ ವಾರ್ಷಿಕ ಸಾಹಿತ್ಯ ಸಂಭ್ರಮ ಸಮಾರಂಭದಲ್ಲಿ ಮಂಗಳೂರಿನ ವೈದ್ಯ ಡಾ. ಸುರೇಶ ನೆಗಳಗುಳಿ ಇವರ ಮೂರನೇಯ ಗಜಲ್ ಸಂಕಲನ ಕಡಲ ಹೂವು ನಗರದ ಪುರ ಭವನದಲ್ಲಿ ಲೋಕಾರ್ಪಣೆ ಗೊಂಡಿತು.
ಪಾಣೆಮಂಗಳೂರಿನ ರೈತ ಸೇವಾ ಸಂಘದ ಮುಖ್ಯಸ್ಥ ಜಯಶಂಕರ ಬಾಸ್ರಿತ್ತಾಯ ಬಿಡುಗಡೆಗೊಳಿಸಿದರು. ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಷ ಪುನರೂರು, ಕಿನ್ಮಿಗೋಳಿ ಯುಗ ಪುರುಷದ
ಭುವನಾಭಿರಾಮ ಉಡುಪ, ಮೂಡಬಿದಿರೆಯ ಧನಲಕ್ಷ್ಮೀ ಗೇರು ಬೀಜ ಮಾಲಕ ಶ್ರೀಪತಿ ಭಟ್ ಮತ್ತು ಪಿ.ವಿ. ಕುಮಾರ್ , ಕೊಳ್ಚಪ್ಪೆ ಗೋವಿಂದ ಭಟ್, ಜಯಾನಂದ ಪೆರಾಜೆ ಭಾಗಿಯಾದರು.
ಕೃತಿಕಾರ ಡಾ ಸುರೇಶ ನೆಗಳಗುಳಿಯವರು ತನ್ನ ಈ ಸಂಕಲನದಲ್ಲಿ ಕನ್ನಡ, ತುಳು, ಹವ್ಯಕ, ಇಂಗ್ಲಿಷ್, ಹಿಂದಿ, ಮಲಯಾಳಂ ಭಾಷೆಗಳ ವಿವಿಧ ಮಾದರಿಯ ಗಜಲ್ ಇರುವ ಬಗ್ಗೆ ತಿಳಿಸುತ್ತಾ ಅದರಲ್ಲೊಂದು ಗಜಲನ್ನು ವಾಚಿಸಿದರು.
ಬಳಿಕ ಅವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು
ರಶ್ಮಿ ಸನಿಲ್ ನಿರೂಪಣೆ ಗೈದ ಈ ಸಮಾರಂಭದಲ್ಲಿ ಹಾ.ಮ.ಸತೀಶ, ರತ್ನಾ ಭಟ್, ಕಲ್ಲಚ್ವು ಮಹೇಶ್ ನಾಯಕ್ , ರೇಖಾ ಸುದೇಶ ರಾವ್, ಚುಸಾಪ ಅಧ್ಯಕ್ಷ ಜಿ.ಕೆ. ಶಾಸ್ತ್ರಿ, ಸೌಮ್ಯಾ ಗೋಪಾಲ್, ನಾಡಿನ ಸಮಾಚಾರ ಪತ್ರಿಕೆಯ ಬಸವರಾಜ್ ಯಲ್ಲಪ್ಪಾ ಉಪ್ಪಾರಟ್ಟಿ, ರೇಮಂಡ್ ಡಿಕುನ್ಹ , ರಾಧಾಕೃಷ್ಣ ಉಳಿಯತ್ತಡ್ಕ , ವಾಮನ ರಾವ್ ಬೇಕಲ್, ವೀಣಾ ಕಾರಂತ ಮುಂತಾದವರು ಉಪಸ್ಥಿತರಿದ್ದರು.
ಇದೇ ಸಮಾರಂಭದಲ್ಲಿ ಐವತ್ತು ಕವಿಗಳ ಕೃತಿಗಳು ಲೋಕಾರ್ಪಿತವಾದುದು ವಿಶೇಷವಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು