8:40 AM Tuesday2 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಂಗಳೂರಿನ ವೈದ್ಯ ಡಾ. ನೆಗಳಗುಳಿ ಅವರ ‘ಕಡಲ ಹೂವು’ ಗಜಲ್ ಸಂಕಲನ ಲೋಕಾರ್ಪಣೆ

01/11/2023, 11:08

ಮಂಗಳೂರು(reporterkarnataka.com):
ಮಂಗಳೂರಿನ ಪಿ.ವಿ.ಪ್ರದೀಪ್ ಕುಮಾರ್ ಸಾರಥ್ಯದ ಕಥಾಬಿಂದು ಪ್ರಕಾಶನದ ಹದಿನಾರನೇ ವಾರ್ಷಿಕ ಸಾಹಿತ್ಯ ಸಂಭ್ರಮ ಸಮಾರಂಭದಲ್ಲಿ ಮಂಗಳೂರಿನ ವೈದ್ಯ ಡಾ. ಸುರೇಶ ನೆಗಳಗುಳಿ ಇವರ ಮೂರನೇಯ ಗಜಲ್ ಸಂಕಲನ ಕಡಲ ಹೂವು ನಗರದ ಪುರ ಭವನದಲ್ಲಿ ಲೋಕಾರ್ಪಣೆ ಗೊಂಡಿತು.
ಪಾಣೆಮಂಗಳೂರಿನ ರೈತ ಸೇವಾ ಸಂಘದ ಮುಖ್ಯಸ್ಥ ಜಯಶಂಕರ ಬಾಸ್ರಿತ್ತಾಯ ಬಿಡುಗಡೆಗೊಳಿಸಿದರು. ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಷ ಪುನರೂರು, ಕಿನ್ಮಿಗೋಳಿ ಯುಗ ಪುರುಷದ
ಭುವನಾಭಿರಾಮ ಉಡುಪ, ಮೂಡಬಿದಿರೆಯ ಧನಲಕ್ಷ್ಮೀ ಗೇರು ಬೀಜ ಮಾಲಕ ಶ್ರೀಪತಿ ಭಟ್ ಮತ್ತು ಪಿ.ವಿ. ಕುಮಾರ್ , ಕೊಳ್ಚಪ್ಪೆ ಗೋವಿಂದ ಭಟ್, ಜಯಾನಂದ ಪೆರಾಜೆ ಭಾಗಿಯಾದರು.
ಕೃತಿಕಾರ ಡಾ ಸುರೇಶ ನೆಗಳಗುಳಿಯವರು ತನ್ನ ಈ ಸಂಕಲನದಲ್ಲಿ ಕನ್ನಡ, ತುಳು, ಹವ್ಯಕ, ಇಂಗ್ಲಿಷ್, ಹಿಂದಿ, ಮಲಯಾಳಂ ಭಾಷೆಗಳ ವಿವಿಧ ಮಾದರಿಯ ಗಜಲ್ ಇರುವ ಬಗ್ಗೆ ತಿಳಿಸುತ್ತಾ ಅದರಲ್ಲೊಂದು ಗಜಲನ್ನು ವಾಚಿಸಿದರು.
ಬಳಿಕ ಅವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು
ರಶ್ಮಿ ಸನಿಲ್ ನಿರೂಪಣೆ ಗೈದ ಈ ಸಮಾರಂಭದಲ್ಲಿ ಹಾ.ಮ.ಸತೀಶ, ರತ್ನಾ ಭಟ್, ಕಲ್ಲಚ್ವು ಮಹೇಶ್ ನಾಯಕ್ , ರೇಖಾ ಸುದೇಶ ರಾವ್, ಚುಸಾಪ ಅಧ್ಯಕ್ಷ ಜಿ.ಕೆ. ಶಾಸ್ತ್ರಿ, ಸೌಮ್ಯಾ ಗೋಪಾಲ್, ನಾಡಿನ ಸಮಾಚಾರ ಪತ್ರಿಕೆಯ ಬಸವರಾಜ್ ಯಲ್ಲಪ್ಪಾ ಉಪ್ಪಾರಟ್ಟಿ, ರೇಮಂಡ್ ಡಿಕುನ್ಹ , ರಾಧಾಕೃಷ್ಣ ಉಳಿಯತ್ತಡ್ಕ , ವಾಮನ ರಾವ್ ಬೇಕಲ್, ವೀಣಾ ಕಾರಂತ ಮುಂತಾದವರು ಉಪಸ್ಥಿತರಿದ್ದರು.
ಇದೇ ಸಮಾರಂಭದಲ್ಲಿ ಐವತ್ತು ಕವಿಗಳ ಕೃತಿಗಳು ಲೋಕಾರ್ಪಿತವಾದುದು ವಿಶೇಷವಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು