2:14 AM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಮಂಗಳೂರಿನ ವಾಸುಕಿ ನಗರ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ 

07/10/2022, 19:52

ಮಂಗಳೂರು(reporter Karnataka.com):ಮಂಗಳೂರು ಮಹಾನಗರ ಪಾಲಿಕೆಯ ಜಪ್ಪಿನಮೊಗರು ವಾರ್ಡ್‌  ವ್ಯಾಪ್ತಿಯ ವಾಸುಕಿ ನಗರದಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಭೂಮಿಪೂಜೆ ನೆರವೇರಿಸಿದರು. 

ಈ ವೇಳೆ ಮಾತನಾಡಿದ ಶಾಸಕ ಕಾಮತ್, ವಾಸುಕಿ ನಗರದಲ್ಲಿ ಸಾರ್ವಜನಿಕ ಉಪಯೋಗಕ್ಕಾಗಿ ವೇದಿಕೆ ನಿರ್ಮಿಸುವ ಕುರಿತು ಸಾರ್ವಜನಿಕರ ಬೇಡಿಕೆ ಬಂದಿತ್ತು. ಆ ಪ್ರಕಾರವಾಗಿ ಪಾಲಿಕೆ ಸಂಬಂಧಪಟ್ಟ ಜಾಗದಲ್ಲಿ ವೇದಿಕೆ ಹಾಗೂ ಗ್ರೀನ್ ರೂಮ್ ನಿರ್ಮಾಣಕ್ಕೆ 20 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ಹೇಳಿದರು. 

ಜಪ್ಪಿನಮೊಗರು ವಾರ್ಡಿನಲ್ಲಿ ಕಳೆದ 4 ವರ್ಷಗಳಿಂದ ಸಮರೋಪಾದಿಯಲ್ಲಿ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ಮಳೆಗಾಲದ ಸಂದರ್ಭದಲ್ಲಿ ಕೃತಕ ನೆರೆ ಉಂಟಾಗುವ‌ ರಾಜಕಾಲುವೆಗಳನ್ನು ಅಭಿವೃದ್ಧಿಪಡಿಸಿದ ಕಾರಣ ಬಹು ವರ್ಷಗಳ ನಂತರ ಈ ವಾರ್ಡಿನಲ್ಲಿ ನೆರೆ ಹಾವಳಿಯ ಸಮಸ್ಯೆ ಅಷ್ಟಾಗಿ ಬಾಧಿಸಿಲ್ಲ‌. ರಸ್ತೆ ನಿರ್ಮಾಣ, ಚರಂಡಿ, ತಡೆಗೋಡೆ ನಿರ್ಮಾಣ, ದೇವಸ್ಥಾನಗಳ ಅಭಿವೃದ್ಧಿ ಸೇರಿದಂತೆ ಜನಪರ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ಹೇಳಿದ್ದಾರೆ. 

ಈ ಸಂದರ್ಭದಲ್ಲಿ ಮಂಗಳೂರು ‌ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮಾ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಕಿಶೋರ್ ಕೊಟ್ಟಾರಿ, ನಯನ ಆರ್. ಕೋಟ್ಯಾನ್, ಸ್ಥಳೀಯ ಕಾರ್ಪೋರೇಟರ್ ಗಳಾದ ವೀಣಾ ಮಂಗಳ,ಪ್ರವೀಣ್ ಚಂದ್ರ ಆಳ್ವ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ‌ ಶೆಟ್ಟಿ, ಮುಖಂಡರಾದ ಕಿರಣ್ ರೈ ಬಜಾಲ್, ಸುರೇಂದ್ರ ಜಪ್ಪಿನಮೊಗರು, ಭರತ್ ರಾಜ್ ಶೆಟ್ಟಿ, ಸುಕೇಶ್ ಬಜಾಲ್, ಎಂ.ಪಿ ಗಣೇಶ್, ರವೀಂದ್ರ ರಾವ್, ಎಸ್ ಕುಮಾರ್, ಪಿ.ಎ ಶ್ರೀನಿವಾಸ್, ರಮೇಶ್ ಸಹ್ಯಾದ್ರಿ, ರಾಮು, ಸಂದೇಶ್ ಶೆಟ್ಟಿ, ರಾಮ್ ಪ್ರಸಾದ್ ಶೆಟ್ಟಿ, ಉದಯ್, ವಿನ್ಸೆಂಟ್ ಡಿಸೋಜ, ಸುನಿತಾ, ಸುಜಾತ, ಪ್ರೀತಿ, ವಿದ್ಯಾ, ವಿನೋದ್ ರಾವ್, ವಿದ್ಯಾ ರಾವ್, ವಿಜಯ್, ಪ್ರವೀಣ್ ಕುಮಾರ್, ರಾಘವೇಂದ್ರ, ಸ್ನೇಹ, ಜಯಶ್ರೀ, ಸುಮತಿ, ಈಶ್ವರ್, ನಾಗೇಂದ್ರ, ಸುಪ್ರಿಯಾ, ರಾಮಚಂದ್ರ ಆಳ್ವ, ಜಯಪ್ರಕಾಶ್, ಪ್ರವೀಣ್ ನಿಡ್ಡೇಲ್, ಭಾರ್ಗವ‌ ಬಲ್ಯಾಯ, ಚಂದ್ರಶೇಖರಯ್ಯ, ರಾಘವೇಂದ್ರ ‌ಶೆಟ್ಟಿ, ಸ್ಥಳೀಯರು ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು