10:56 PM Monday9 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಮಂಗಳೂರಿನ ಯುವ ಮಹಿಳಾ ನ್ಯಾಯವಾದಿ ಗೀತಾ ಡಿ. ಅವರು ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆ

24/02/2024, 15:58

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ನ್ಯಾಯವಾದಿಯಾಗಿ ವಕೀಲ ವೃತ್ತಿ ನಡೆಸುತ್ತಿರುವ ಗೀತಾ ಡಿ. ಅವರು 2023ನೇ ನವೆಂಬರ್ ತಿಂಗಳಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯ ನಡೆಸಿದ ಸಿವಿಲ್ ನ್ಯಾಯಾಧೀಶರ ಆಯ್ಕೆಯ ಪರೀಕ್ಷೆಯಲ್ಲಿ ತೇರ್ಗಡೆಗೊಂಡು ನಂತರ ನಡೆದ ಮೌಖಿಕ ಪರೀಕ್ಷೆಯಲ್ಲೂ ಕೂಡಾ ಉತ್ತೀರ್ಣರಾಗಿ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ.
ಕರ್ನಾಟಕ ಉಚ್ಚ ನ್ಯಾಯಾಲಯ ದಿನಾಂಕ 23.2..2024ರಂದು ಫಲಿತಾಂಶ ಸುತ್ತೋಲೆಯನ್ನು ಹೊರಡಿಸಿದ್ದು, ಅದರಂತ ಗೀತಾ ಡಿ. ಅವರು ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿರುತ್ತಾರೆ. ಅವರು ತಮ್ಮ ಪದವಿ ಶಿಕ್ಷಣವನ್ನು ಮೂಡಬಿದ್ರೆಯ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ಪಡೆದು ನಂತರ ಕಾನೂನು ವಿದ್ಯಾಭ್ಯಾಸವನ್ನು ಮಂಗಳೂರಿನ ಎಸ್.ಡಿ.ಎಂ. ಕಾನೂನು ಕಾಲೇಜಿನಲ್ಲಿ ಪಡೆದು ನಂತರ ತನ್ನ ವಕೀಲ ವೃತ್ತಿಯನ್ನು ಮಂಗಳೂರಿನ ಹೆಸರಾಂತ ವಕೀಲರಾದ ಮಯೂರ ಕೀರ್ತಿ ಹಾಗೂ ಶರತ್ ಕುಮಾರ್ ಬಿ. ಅವರ ಕಚೇರಿಯಲ್ಲಿ ಕಿರಿಯ ವಕೀಲರಾಗಿ ವೃತ್ತಿ ಆರಂಭಿಸಿ ತಮ್ಮ ವೃತ್ತಿಯನ್ನು ಮುಂದುವರಿಸುತ್ತಾ ಬಂದಿರುತ್ತಾರೆ. ನಂತರ ಗೀತಾ ಡಿ. ರವರು ವಕೀಲರಾದ ಕಾರ್ತಿಕ್ ಮಚ್ಚಿಲ ಅವರನ್ನು ವಿವಾಹವಾಗಿದ್ದು ತಮ್ಮ ವೃತ್ತಿಯನ್ನು ಮುಂದುವರಿಸುತ್ತಾ ಬಂದಿರುತ್ತಾರೆ. ಗೀತಾ ಡಿ. ಅವರು ಡಿ. ಕೊಂಬೇಗೌಡ ಹಾಗೂ ಕೋಮಲ ಅವರ ಪುತ್ರಿಯಾಗಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು