9:34 PM Tuesday8 - July 2025
ಬ್ರೇಕಿಂಗ್ ನ್ಯೂಸ್
ಪುನರ್ವಸು ಮಳೆ ಅಬ್ಬರ: ಕೊಚ್ಚಿ ಹೋಗುವ ಭೀತಿಯಲ್ಲಿ ತೀರ್ಥಹಳ್ಳಿಯ ಕುನ್ನಿಕೇವಿ ಸೇತುವೆ! ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ…

ಇತ್ತೀಚಿನ ಸುದ್ದಿ

ಮಂಗಳೂರಿನ ಯುವ ಮಹಿಳಾ ನ್ಯಾಯವಾದಿ ಗೀತಾ ಡಿ. ಅವರು ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆ

24/02/2024, 15:58

ಮಂಗಳೂರು(reporterkarnataka.com): ಮಂಗಳೂರಿನಲ್ಲಿ ನ್ಯಾಯವಾದಿಯಾಗಿ ವಕೀಲ ವೃತ್ತಿ ನಡೆಸುತ್ತಿರುವ ಗೀತಾ ಡಿ. ಅವರು 2023ನೇ ನವೆಂಬರ್ ತಿಂಗಳಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯ ನಡೆಸಿದ ಸಿವಿಲ್ ನ್ಯಾಯಾಧೀಶರ ಆಯ್ಕೆಯ ಪರೀಕ್ಷೆಯಲ್ಲಿ ತೇರ್ಗಡೆಗೊಂಡು ನಂತರ ನಡೆದ ಮೌಖಿಕ ಪರೀಕ್ಷೆಯಲ್ಲೂ ಕೂಡಾ ಉತ್ತೀರ್ಣರಾಗಿ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ.
ಕರ್ನಾಟಕ ಉಚ್ಚ ನ್ಯಾಯಾಲಯ ದಿನಾಂಕ 23.2..2024ರಂದು ಫಲಿತಾಂಶ ಸುತ್ತೋಲೆಯನ್ನು ಹೊರಡಿಸಿದ್ದು, ಅದರಂತ ಗೀತಾ ಡಿ. ಅವರು ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿರುತ್ತಾರೆ. ಅವರು ತಮ್ಮ ಪದವಿ ಶಿಕ್ಷಣವನ್ನು ಮೂಡಬಿದ್ರೆಯ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ಪಡೆದು ನಂತರ ಕಾನೂನು ವಿದ್ಯಾಭ್ಯಾಸವನ್ನು ಮಂಗಳೂರಿನ ಎಸ್.ಡಿ.ಎಂ. ಕಾನೂನು ಕಾಲೇಜಿನಲ್ಲಿ ಪಡೆದು ನಂತರ ತನ್ನ ವಕೀಲ ವೃತ್ತಿಯನ್ನು ಮಂಗಳೂರಿನ ಹೆಸರಾಂತ ವಕೀಲರಾದ ಮಯೂರ ಕೀರ್ತಿ ಹಾಗೂ ಶರತ್ ಕುಮಾರ್ ಬಿ. ಅವರ ಕಚೇರಿಯಲ್ಲಿ ಕಿರಿಯ ವಕೀಲರಾಗಿ ವೃತ್ತಿ ಆರಂಭಿಸಿ ತಮ್ಮ ವೃತ್ತಿಯನ್ನು ಮುಂದುವರಿಸುತ್ತಾ ಬಂದಿರುತ್ತಾರೆ. ನಂತರ ಗೀತಾ ಡಿ. ರವರು ವಕೀಲರಾದ ಕಾರ್ತಿಕ್ ಮಚ್ಚಿಲ ಅವರನ್ನು ವಿವಾಹವಾಗಿದ್ದು ತಮ್ಮ ವೃತ್ತಿಯನ್ನು ಮುಂದುವರಿಸುತ್ತಾ ಬಂದಿರುತ್ತಾರೆ. ಗೀತಾ ಡಿ. ಅವರು ಡಿ. ಕೊಂಬೇಗೌಡ ಹಾಗೂ ಕೋಮಲ ಅವರ ಪುತ್ರಿಯಾಗಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು