12:00 PM Saturday14 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಸಿಬಿಐ ಕಾರ್ಯಾಚರಣೆ: ರೈಲ್ವೆ ಸಿಬ್ಬಂದಿಗೆ ನಕಲಿ ವೈದ್ಯಕೀಯ ಪ್ರಮಾಣಪತ್ರ ನೀಡುತ್ತಿದ್ದ 3 ಆರೋಪಿಗಳ ಬಂಧನ

12/06/2022, 21:01

ಮಂಗಳೂರು(reporterkarnataka.com):  ರೈಲ್ವೆಯಲ್ಲಿ ನೌಕರರ ಆರೋಗ್ಯ ಕ್ಷಮತೆಯ ಬಗ್ಗೆ ನಕಲಿ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುತ್ತಿದ್ದ ಓರ್ವ ಆರೋಪಿಯನ್ನು
ಮಂಗಳೂರಿನಲ್ಲಿ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.

ಬೆಂಗಳೂರಿನಿಂದ ಆಗಮಿಸಿದ ಸಿಬಿಐ ತಂಡ ಈ ಕಾರ್ಯಾಚರಣೆ ನಡೆಸಿದೆ. ಮಂಗಳೂರು ನಗರದ ಇಬ್ರಾಹೀಂ ಎಂಬಾತ ಬಂಧಿತ ಆರೋಪಿ ಎಂದು ತಿಳಿದು ಬಂದಿದೆ.

ಈತನನ್ನು ಬಂಧಿಸಿರುವ ಬಗ್ಗೆ ಸಿಬಿಐ ಅಧಿಕಾರಿಗಳು ಮಂಗಳೂರಿನ ಪಾಂಡೇಶ್ವರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ರೈಲ್ವೆ ಇಲಾಖೆಯಲ್ಲಿ ವರ್ಷಂಪ್ರತಿ ನೌಕರರು ದೈಹಿಕ ಕ್ಷಮತೆಯ ಬಗ್ಗೆ ರೈಲ್ವೆ ಇಲಾಖೆಯ ಆರೋಗ್ಯ ಇಲಾಖೆಯಿಂದ ಫಿಟ್ ನೆಸ್ ಸರ್ಟಿಫಿಕೇಟ್ ಅನ್ನು ನೀಡಬೇಕು. ಈ ಹಿನ್ನೆಲೆಯಲ್ಲಿ ರೈಲ್ವೆ ನೌಕರರು ಮಂಗಳೂರಿನ ರೈಲ್ವೆ ನಿಲ್ದಾಣದ ಬಳಿಯಿ

ರೈಲ್ವೆ ಇಲಾಖೆಯ ಆರೋಗ್ಯ ಇಲಾಖೆಯಲ್ಲಿ ತಪಾಸಣೆ ನಡೆಸಿ ಸರ್ಟಿಫಿಕೇಟ್ ಪಡೆಯಬೇಕು. ಆದರೆ ಇಬ್ರಾಹೀಂ ಎಂಬಾತನು ನಕಲಿ ವೈದ್ಯಕೀಯ ಪ್ರಮಾಣ ಪತ್ರ ನೀಡುತ್ತಿರುವ ಬಗ್ಗೆ ಮಾಹಿತಿಯಿರುವ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಬಂಧಿತ ಆರೋಪಿ ಇಬ್ರಾಹಿಂ ಸಾವಿರಕ್ಕೂ ಅಧಿಕ ನಕಲಿ ವೈದ್ಯಕೀಯ ಪ್ರಮಾಣ ಪತ್ರ ನೀಡಿರುವುದು ಅಧಿಕಾರಿಗಳಿಗೆ ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು