7:41 AM Wednesday21 - January 2026
ಬ್ರೇಕಿಂಗ್ ನ್ಯೂಸ್
ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ದೆಹಲಿ ಸಾಹಿತ್ಯ ಅಕಾಡೆಮಿಯಿಂದ ಕಥಾಸಂಧಿ ಕಾರ್ಯಕ್ರಮ

02/08/2023, 18:21

ಮಂಗಳೂರು(reporter Karnataka.com): ಸಾದ್ಯವಾದಷ್ಟು ಭಾಷಾ ಬಳಕೆ ಮತ್ತು ನಿರೂಪಣೆಯಲ್ಲಿ ಶುದ್ದತೆಯನ್ನು ಕಾಪಡಿಕೊಂಡು ಬರುವುದರ ಜತೆಗೆ ಪ್ರತಿ ಕಥೆಯಲ್ಲಿ ಸಾಮಾಜಿಕ ಸಮಸ್ಯೆಯನ್ನು ಬಿಂಬಿಸುವ ಪ್ರಾಮಾಣಿಕ ಪ್ರಯತ್ನ ಮಾಡಿರುತ್ತೇನೆ” ಎಂದು ಹಿರಿಯ ಕಥೆಗಾರ ಡಾಲ್ಪಿ ಕಾಸ್ಸಿಯಾ ಅಭಿಪ್ರಾಯಪಟ್ಟರು.
ಅವರು ನಗರದ ಕೊಡಿಯಾಲ್ ಬೈಲ್ ನ ಬಿಷಪ್ಪರ ನಿವಾಸದಲ್ಲಿ ರಾಕ್ಣೊ ವಾರಪತ್ರಿಕೆಯ ಆಶ್ರಯದಲ್ಲಿ ಸಾಹಿತ್ಯ ಅಕಾಡೆಮಿ, ದೆಹಲಿ ಆಯೋಜಿಸಿದ ಕಥಾಸಂಧಿ ಕಾರ್ಯಕ್ರಮದಲ್ಲಿ ತಮ್ಮ ಆಯ್ದ ಕಥೆ ಮಾಂಯ್ ಕಿತ್ಯಾಕ್ ರಡ್ತಾ? (ಅಮ್ಮ ಯಾಕೆ ಅಳುತ್ತಾರೆ?) ಪ್ರಸ್ತುತಪಡಿಸಿ, ಕಥನ ಕಲೆಯ ಬಗ್ಗೆ ಮಾತನಾಡುತ್ತಿದ್ದರು.
ಸಾಹಿತ್ಯ ಅಕಾಡೆಮಿ, ದೆಹಲಿ, ಕೊಂಕಣಿ ಭಾಷಾ ಸಲಹಾ ಮಂಡಳಿಯ ಸದಸ್ಯ, ಪತ್ರಕರ್ತ ಎಚ್ಚೆಮ್, ಪೆರ್ನಾಲ್ ಸಾಹಿತ್ಯ ಅಕಾಡೆಮಿಯ ವಿವಿಧ ಯೋಜನೆಗಳ ಬಗ್ಗೆ ವಿಸ್ತ್ರತ ಪರಿಚಯ ನೀಡಿ, ಕೊಂಕಣಿ ಭಾಷಿಕರು ಪ್ರತ್ಯೇಕವಾಗಿ ಸಾಹಿತಿ ಮತ್ತು ಬರಹಗಾರರು ಸಾಹಿತ್ಯ ಅಕಾಡೆಮಿಯ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿಸಿದರು.
ಸಾಹಿತ್ಯ ಅಕಾಡೆಮಿ, ದೆಹಲಿ ಜನರಲ್ ಕಾವ್ನ್ಸಿಲ್ ಸದಸ್ಯರೂ, ಕೊಂಕಣಿ ಭಾಷಾ ಮುಖ್ಯಸ್ಥರೂ ಆಗಿರುವ ಕವಿ ಮೆಲ್ವಿನ್ ರಾಡ್ರಿಗಸ್ ಕಥಾಕಾರರನ್ನು ವೇದಿಕೆಗೆ ಬರಮಾಡಿಕೊಂಡು ಹೂಗುಚ್ಛ ನೀಡಿ ಸ್ವಾಗತಿಸಿದರು.


ಕಥಾ ಪ್ರಸ್ತುತಿಯ ಬಳಿಕ ಕಥೆ, ಕಥಾಹಂದರ, ಆರಂಭ, ಅಂತ್ಯ ಮತ್ತು ತಿರುವುಗಳ ಬಗ್ಗೆ ಡಾಲ್ಫಿ ಕಾಸ್ಸಿಯಾ ಬೆಳಕು ಚೆಲ್ಲಿದರು. ರಾಕ್ಣೊ ಸಂಪಾದಕ ವಂ| ರೂಪೇಶ್ ಅಶೋಕ್ ಮಾಡ್ತಾ ಸಂವಾದವನ್ನು ನಡೆಸಿಕೊಟ್ಟು, ವಂದಿಸಿದರು. ಸಾಹಿತ್ಯ ಅಕಾಡೆಮಿ, ದೆಹಲಿ ಕೊಂಕಣಿ ಭಾಷಾ ಸಲಹಾ ಸಮಿತಿಯ ಸದಸ್ಯ ಸ್ಟ್ಯಾನಿ ಬೇಳಾ ಈ ಸಂದರ್ಭದಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು