5:16 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ದೆಹಲಿ ಸಾಹಿತ್ಯ ಅಕಾಡೆಮಿಯಿಂದ ಕಥಾಸಂಧಿ ಕಾರ್ಯಕ್ರಮ

02/08/2023, 18:21

ಮಂಗಳೂರು(reporter Karnataka.com): ಸಾದ್ಯವಾದಷ್ಟು ಭಾಷಾ ಬಳಕೆ ಮತ್ತು ನಿರೂಪಣೆಯಲ್ಲಿ ಶುದ್ದತೆಯನ್ನು ಕಾಪಡಿಕೊಂಡು ಬರುವುದರ ಜತೆಗೆ ಪ್ರತಿ ಕಥೆಯಲ್ಲಿ ಸಾಮಾಜಿಕ ಸಮಸ್ಯೆಯನ್ನು ಬಿಂಬಿಸುವ ಪ್ರಾಮಾಣಿಕ ಪ್ರಯತ್ನ ಮಾಡಿರುತ್ತೇನೆ” ಎಂದು ಹಿರಿಯ ಕಥೆಗಾರ ಡಾಲ್ಪಿ ಕಾಸ್ಸಿಯಾ ಅಭಿಪ್ರಾಯಪಟ್ಟರು.
ಅವರು ನಗರದ ಕೊಡಿಯಾಲ್ ಬೈಲ್ ನ ಬಿಷಪ್ಪರ ನಿವಾಸದಲ್ಲಿ ರಾಕ್ಣೊ ವಾರಪತ್ರಿಕೆಯ ಆಶ್ರಯದಲ್ಲಿ ಸಾಹಿತ್ಯ ಅಕಾಡೆಮಿ, ದೆಹಲಿ ಆಯೋಜಿಸಿದ ಕಥಾಸಂಧಿ ಕಾರ್ಯಕ್ರಮದಲ್ಲಿ ತಮ್ಮ ಆಯ್ದ ಕಥೆ ಮಾಂಯ್ ಕಿತ್ಯಾಕ್ ರಡ್ತಾ? (ಅಮ್ಮ ಯಾಕೆ ಅಳುತ್ತಾರೆ?) ಪ್ರಸ್ತುತಪಡಿಸಿ, ಕಥನ ಕಲೆಯ ಬಗ್ಗೆ ಮಾತನಾಡುತ್ತಿದ್ದರು.
ಸಾಹಿತ್ಯ ಅಕಾಡೆಮಿ, ದೆಹಲಿ, ಕೊಂಕಣಿ ಭಾಷಾ ಸಲಹಾ ಮಂಡಳಿಯ ಸದಸ್ಯ, ಪತ್ರಕರ್ತ ಎಚ್ಚೆಮ್, ಪೆರ್ನಾಲ್ ಸಾಹಿತ್ಯ ಅಕಾಡೆಮಿಯ ವಿವಿಧ ಯೋಜನೆಗಳ ಬಗ್ಗೆ ವಿಸ್ತ್ರತ ಪರಿಚಯ ನೀಡಿ, ಕೊಂಕಣಿ ಭಾಷಿಕರು ಪ್ರತ್ಯೇಕವಾಗಿ ಸಾಹಿತಿ ಮತ್ತು ಬರಹಗಾರರು ಸಾಹಿತ್ಯ ಅಕಾಡೆಮಿಯ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿಸಿದರು.
ಸಾಹಿತ್ಯ ಅಕಾಡೆಮಿ, ದೆಹಲಿ ಜನರಲ್ ಕಾವ್ನ್ಸಿಲ್ ಸದಸ್ಯರೂ, ಕೊಂಕಣಿ ಭಾಷಾ ಮುಖ್ಯಸ್ಥರೂ ಆಗಿರುವ ಕವಿ ಮೆಲ್ವಿನ್ ರಾಡ್ರಿಗಸ್ ಕಥಾಕಾರರನ್ನು ವೇದಿಕೆಗೆ ಬರಮಾಡಿಕೊಂಡು ಹೂಗುಚ್ಛ ನೀಡಿ ಸ್ವಾಗತಿಸಿದರು.


ಕಥಾ ಪ್ರಸ್ತುತಿಯ ಬಳಿಕ ಕಥೆ, ಕಥಾಹಂದರ, ಆರಂಭ, ಅಂತ್ಯ ಮತ್ತು ತಿರುವುಗಳ ಬಗ್ಗೆ ಡಾಲ್ಫಿ ಕಾಸ್ಸಿಯಾ ಬೆಳಕು ಚೆಲ್ಲಿದರು. ರಾಕ್ಣೊ ಸಂಪಾದಕ ವಂ| ರೂಪೇಶ್ ಅಶೋಕ್ ಮಾಡ್ತಾ ಸಂವಾದವನ್ನು ನಡೆಸಿಕೊಟ್ಟು, ವಂದಿಸಿದರು. ಸಾಹಿತ್ಯ ಅಕಾಡೆಮಿ, ದೆಹಲಿ ಕೊಂಕಣಿ ಭಾಷಾ ಸಲಹಾ ಸಮಿತಿಯ ಸದಸ್ಯ ಸ್ಟ್ಯಾನಿ ಬೇಳಾ ಈ ಸಂದರ್ಭದಲ್ಲಿ ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು