4:10 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಎಚ್‍ಡಿಎಫ್‍ಸಿ ‘ಚಕ್ರಗಳ ಮೇಲೆ ಬ್ಯಾಂಕ್’ ಲೋಕಾರ್ಪಣೆ

21/09/2023, 20:26

ಮಂಗಳೂರು(reporterkarnataka.com): ಎಚ್.ಡಿ.ಎಫ್.ಸಿ ಬ್ಯಾಂಕ್ ಗ್ರಾಹಕರ ಮನೆ ಬಾಗಿಲಿಗೆ ಸೇವೆ ನೀಡುವ ಉದ್ದೇಶದಿಂದ “ಚಕ್ರಗಳ ಮೇಲೆ ಬ್ಯಾಂಕ್” ಯೋಜನೆಗೆ ಗುರುವಾರ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚಾಲನೆ ನೀಡಲಾಯಿತು.


ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಸಂತೋಷ್ ಕುಮಾರ್ ಅವರು, ದಕ್ಷಿಣ ಕನ್ನಡ ಜಿಲ್ಲೆ ಬ್ಯಾಂಕ್ ಗಳ ಉಗಮ ಸ್ಥಳವಾಗಿದ್ದು ಎಚ್.ಡಿಎಫ್ ಬ್ಯಾಂಕ್ ಚಕ್ರಗಳ ಮೇಲೆ ಬ್ಯಾಂಕ್ ಸೇವೆಯ ಮೂಲಕ ಹಳ್ಳಿ ಹಳ್ಳಿಗಳ ಜನರನ್ನು ತಲುಪಲು ಮುಂದಾಗಿರುವುದು ಶ್ಲಾಘನೀಯ. ಈ ಮೂಲಕ ಹಳ್ಳಿಭಾಗಗಳ ಜನರು ಬ್ಯಾಂಕ್ ಸೇವೆಯನ್ನು ಪಡೆಯುವಂತಾಗಲಿ. ಬಿಸಿ ರೋಡ್, ವಿಟ್ಲ, ಉಜಿರೆ, ಉಪ್ಪಿನಂಗಡಿ, ಪುತ್ತೂರು ಮತ್ತಿತರ 24 ರಿಂದ 40 ಕಿಲೋಮೀಟರ್ ವ್ಯಾಪ್ತಿಯ ಗ್ರಾಮೀಣ ಭಾಗಗಳಲ್ಲಿ ಈ ವಾಹನ ಸೇವೆ ಒದಗಿಸಲಿದೆ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಈ ವಾಹನದಲ್ಲಿ ಎಟಿಎಂ ಮಾತ್ರವಲ್ಲದೆ ನೂತನ ಅಕೌಂಟ್ ತೆರೆಯುವುದರಿಂದ ಹಿಡಿದು ನಗದು ಠೇವಣಿ, ಡಿಪಾಸಿಟ್, ಲೋನ್ ಸೌಲಭ್ಯ ಕೂಡ ಲಭ್ಯವಿದೆ ಬ್ಯಾಂಕ್ ನಲ್ಲಿ ಲಭ್ಯ ವಿರುವ 21 ರೀತಿಯ ಎಲ್ಲಾ ಸೌಲಭ್ಯ ಗ್ರಾಹಕರಿಗೆ ಅನುಕೂಲವಾಗಲಿದೆ ಎಂದರು.
ಈ ಸಂದರ್ಭದಲ್ಲಿ ಎಚ್.ಡಿ.ಎಫ್.ಸಿ ಬ್ಯಾಂಕ್‍ನ ಸರ್ಕಲ್ ಹೆಡ್ ಮತ್ತು ಹಿರಿಯ ಉಪಾಧ್ಯಕ್ಷ ಶುಭಂಕರ್ ಬೋಸ್, ದಕ್ಷಿಣ ಕನ್ನಡ ಕ್ಲಸ್ಟರ್ ಹೆಡ್ ಚಂದನ್ ಶಿವಣ್ಣ, ಉಡುಪಿ ಕ್ಲಸ್ಟರ್ ಮುಖ್ಯಸ್ಥ ವಾಸುದೇವ ಪಿ, ಬಿ.ಸಿ.ರೋಡ್-ಬಂಟ್ವಾಳ ಶಾಖ ಮುಖ್ಯಸ್ಥ ಪ್ರಖ್ಯಾತ್ ಶೆಟ್ಟಿ, ಪುತ್ತೂರು ಶಾಖಾ ವ್ಯವಸ್ಥಾಪಕ ಅನೀಶ್ ಶೆಟ್ಟಿ, ಸುರತ್ಕಲ್ ಶಾಖಾ ವ್ಯವಸ್ಥಾಪಕ ಉದಯ ಕುಮಾರ್ ಹಾಗೂ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು