10:03 AM Sunday8 - March 2026
ಬ್ರೇಕಿಂಗ್ ನ್ಯೂಸ್
ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಇನ್ನರ್ ವೀಲ್ ಜಿಲ್ಲೆ 318 ರ District Rally ‘ಸ್ವರ್ಣ ಪರ್ಬ’

02/10/2023, 21:05

ಮಂಗಳೂರು(reporterkarnataka.com): ಇನ್ನರ್ ವೀಲ್ ಜಿಲ್ಲೆ 318 ರ ಜಿಲ್ಲಾ ರ್ಯಾಲಿ ‘ ಸ್ವರ್ಣ ಪರ್ಬ’ ‘ ಭಾನುವಾರ ನಗರದ ಟಿ. ವಿ. ರಮಣ ಪೈ ಹಾಲಿನಲ್ಲಿ ಜಿಲ್ಲಾ ಚೇರ್ಮನ್ ಪೂರ್ಣಿಮಾ ರವಿ ಅವರ ನೇತೃತ್ವದಲ್ಲಿ ನಡೆಯಿತು.
ಇನ್ನರ್ ವೀಲ್ ಮಂಗಳೂರು ಉತ್ತರದ ಚಾರ್ಟರ್ ಸದಸ್ಯೆ
ಉಷಾ ರವಿರಾಜ್ ಅವರು ಇನ್ನರ್ ವೀಲ್ ಪ್ರಾರ್ಥನೆ ಮಾಡಿದರು. ಕ್ಲಬ್ ನ ಅಧ್ಯಕ್ಷೆ ಗೀತಾ ಬಿ. ರೈ ಅವರು ಸ್ವಾಗತಿಸಿದರು. ರ್ಯಾಲಿ ಚೇರ್ಮನ್ ಚಿತ್ರಾ ವಿ. ರಾವ್ ಅವರು ರ್ಯಾಲಿ ಸ್ವರ್ಣ ಪರ್ಬದ ಬಗ್ಗೆ ಪ್ರಸ್ತಾವಿಕ ಮಾತುಗಳನ್ನು ಹಾಡಿನ ಮೂಲಕ ವಿವರಿಸಿದರು. ಕಾರ್ಯದರ್ಶಿ ಶಬರಿ ಕಡಿದಾಲ್ ಅವರು ಕಾರ್ಯಕ್ರಮಕ್ಕೆ ಶುಭ ಹಾರೈಕೆ ಕಳುಹಿಸಿದವರ ವಿವರ ನೀಡಿದರು. ಚೇರ್ಮನ್ ಪೂರ್ಣಿಮಾ ರವಿ ಅವರು 2023-24ನೇ ಸಾಲಿನಲ್ಲಿ ಜಿಲ್ಲೆ 318 ರಲ್ಲಿ ನಡೆದ ಪ್ರಾಜೆಕ್ಟ್, ಅದರ ಪ್ರಯೋಜನ ಪಡೆದವರ ಹಾಗೂ ವಿನಿಯೋಗ ಮಾಡಿದ ಹಣದ ವಿವರಗಳನ್ನು ತಿಳಿಸಿ, ಕಾರ್ಯ ಕ್ರಮದ ಬಗ್ಗೆ ಮೆಚ್ಚುಗೆ ಮಾತನ್ನು ವ್ಯಕ್ತಪಡಿಸಿದರು. ಇತರ ಕ್ಲಬ್ ಗಳಿಂದ ಬಂದ ಮಾಜಿ ಜಿಲ್ಲಾ ಚೇರ್ ಮೆನ್ ರವರನ್ನು ಗೌರವಿಸಲಾಯಿತು.
ಉಪ ಚೇರ್ಮನ್ ವೈಶಾಲಿ ಕುಡ್ವ ವಂದಿಸಿದರು. ಜಿಲ್ಲಾ ಖಜಾಂಚಿ ರಜನಿ ಭಟ್ ಹಾಗೂ ಜಿಲ್ಲಾ ಎಡಿಟರ್ ಉಮಾ ಮಹೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮ ನಡೆಸಿಕೊಟ್ಟ ಇನ್ನರ್ ವೀಲ್ ಕ್ಲಬ್ ಮಂಗಳೂರು ಉತ್ತರ ದ ಸದಸ್ಯೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಮಾಲಿನಿ ಹೆಬ್ಬಾರ್ ಕಾರ್ಯಕ್ರಮ ನಿರೂಪಣೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು