3:33 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಟ್ರಕ್ ಟರ್ಮಿನಲ್ ನಿರ್ಮಾಣ: ಅಗತ್ಯ ಜಮೀನು ವಶಪಡಿಸುವ ಕುರಿತು ನಾಳೆ ಸಭೆ

18/08/2021, 09:52

ಮಂಗಳೂರು (reporterkarnataka.com.): ಡಿ. ದೇವರಾಜ ಅರಸ್ ಟ್ರಕ್ ಟರ್ಮಿನಲ್ಸ್‍ನ ಅಧ್ಯಕ್ಷ ಡಿ.ಎಸ್ ವೀರಯ್ಯ ಅವರು ಇದೇ ಆಗಸ್ಟ್ 18 ರಿಂದ 20 ರವರೆಗೆ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದು, ಮಂಗಳೂರಿನಲ್ಲಿ ಟ್ರಕ್ ಟರ್ಮಿನಲ್ ನಿರ್ಮಿಸುವ ಕುರಿತು ಆ.19ರಂದು ಸಭೆ ನಡೆಯಲಿದೆ.

ವೀರಯ್ಯ ಅವರು ಆಗಸ್ಟ್‌ 18ರ ಸಂಜೆ 6.10ಕ್ಕೆ ಮಂಗಳೂರಿಗೆ ಆಗಮಿಸಿ  ವಾಸ್ತವ್ಯ ಮಾಡುವರು. ಆಗಸ್ಟ್ 19ರ ಗುರುವಾರ ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜಿಲ್ಲಾಧಿಕಾರಿಯವರು, ಮಹಾನಗರಪಾಲಿಕೆ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಕೆ.ಐ.ಎ.ಡಿ.ಬಿ ಅಧಿಕಾರಿಗಳು ಹಾಗೂ ಇನ್ನಿತರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮಂಗಳೂರಿನಲ್ಲಿ ಟ್ರಕ್ ಟರ್ಮಿನಲ್ ನಿರ್ಮಾಣ ಮಾಡಲು ಅಗತ್ಯವಿರುವ ಜಮೀನು ನೀಡುವ ಅಥವಾ ವಶಪಡಿಸಿಕೊಳ್ಳುವ ಬಗ್ಗೆ ಹಮ್ಮಿಕೊಳ್ಳಲಾದ ಸಭೆಯಲ್ಲಿ ಭಾಗವಹಿಸುವರು. 

ಮಧ್ಯಾಹ್ನ 12.30ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳೂರು ಜಿಲ್ಲಾ ಲಾರಿ ಮಾಲಿಕರೊಂದಿಗೆ ಸಭೆ ನಡೆಸುವರು. ಸಂಜೆ 4 ಗಂಟೆಗೆ ಮಂಗಳೂರು ಬಂದರಿಗೆ ಭೇಟಿ ನೀಡಿ ಪಾರ್ಕಿಂಗ್ ವ್ಯವಸ್ಥೆ ಬಗ್ಗೆ ಪರಿಶೀಲಿಸಲಿಸಿ, ಮಂಗಳೂರಿನಲ್ಲಿ ವಾಸ್ತವ್ಯ ಮಾಡುವರು. 
ಆಗಸ್ಟ್ 20ರ ಬೆಳಗ್ಗೆ 11.30ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ ಎಂದು ಡಿ. ದೇವರಾಜ ಅರಸ್ ಟ್ರಕ್ ಟರ್ಮಿನಲ್ಸ್ ಲಿ ಕಚೇರಿಯ ಪ್ರಕಟಣೆ ತಿಳಿಸಿದೆ.   

ಇತ್ತೀಚಿನ ಸುದ್ದಿ

ಜಾಹೀರಾತು