6:04 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಮಂಗಳೂರಿನಲ್ಲಿ ಟ್ರಕ್ ಟರ್ಮಿನಲ್ ನಿರ್ಮಾಣ: ಅಗತ್ಯ ಜಮೀನು ವಶಪಡಿಸುವ ಕುರಿತು ನಾಳೆ ಸಭೆ

18/08/2021, 09:52

ಮಂಗಳೂರು (reporterkarnataka.com.): ಡಿ. ದೇವರಾಜ ಅರಸ್ ಟ್ರಕ್ ಟರ್ಮಿನಲ್ಸ್‍ನ ಅಧ್ಯಕ್ಷ ಡಿ.ಎಸ್ ವೀರಯ್ಯ ಅವರು ಇದೇ ಆಗಸ್ಟ್ 18 ರಿಂದ 20 ರವರೆಗೆ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದು, ಮಂಗಳೂರಿನಲ್ಲಿ ಟ್ರಕ್ ಟರ್ಮಿನಲ್ ನಿರ್ಮಿಸುವ ಕುರಿತು ಆ.19ರಂದು ಸಭೆ ನಡೆಯಲಿದೆ.

ವೀರಯ್ಯ ಅವರು ಆಗಸ್ಟ್‌ 18ರ ಸಂಜೆ 6.10ಕ್ಕೆ ಮಂಗಳೂರಿಗೆ ಆಗಮಿಸಿ  ವಾಸ್ತವ್ಯ ಮಾಡುವರು. ಆಗಸ್ಟ್ 19ರ ಗುರುವಾರ ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜಿಲ್ಲಾಧಿಕಾರಿಯವರು, ಮಹಾನಗರಪಾಲಿಕೆ ಅಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಕೆ.ಐ.ಎ.ಡಿ.ಬಿ ಅಧಿಕಾರಿಗಳು ಹಾಗೂ ಇನ್ನಿತರ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಮಂಗಳೂರಿನಲ್ಲಿ ಟ್ರಕ್ ಟರ್ಮಿನಲ್ ನಿರ್ಮಾಣ ಮಾಡಲು ಅಗತ್ಯವಿರುವ ಜಮೀನು ನೀಡುವ ಅಥವಾ ವಶಪಡಿಸಿಕೊಳ್ಳುವ ಬಗ್ಗೆ ಹಮ್ಮಿಕೊಳ್ಳಲಾದ ಸಭೆಯಲ್ಲಿ ಭಾಗವಹಿಸುವರು. 

ಮಧ್ಯಾಹ್ನ 12.30ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳೂರು ಜಿಲ್ಲಾ ಲಾರಿ ಮಾಲಿಕರೊಂದಿಗೆ ಸಭೆ ನಡೆಸುವರು. ಸಂಜೆ 4 ಗಂಟೆಗೆ ಮಂಗಳೂರು ಬಂದರಿಗೆ ಭೇಟಿ ನೀಡಿ ಪಾರ್ಕಿಂಗ್ ವ್ಯವಸ್ಥೆ ಬಗ್ಗೆ ಪರಿಶೀಲಿಸಲಿಸಿ, ಮಂಗಳೂರಿನಲ್ಲಿ ವಾಸ್ತವ್ಯ ಮಾಡುವರು. 
ಆಗಸ್ಟ್ 20ರ ಬೆಳಗ್ಗೆ 11.30ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ ಎಂದು ಡಿ. ದೇವರಾಜ ಅರಸ್ ಟ್ರಕ್ ಟರ್ಮಿನಲ್ಸ್ ಲಿ ಕಚೇರಿಯ ಪ್ರಕಟಣೆ ತಿಳಿಸಿದೆ.   

ಇತ್ತೀಚಿನ ಸುದ್ದಿ

ಜಾಹೀರಾತು