6:54 PM Thursday7 - August 2025
ಬ್ರೇಕಿಂಗ್ ನ್ಯೂಸ್
ಮುತ್ತಾಲಿಕ್ ಜತೆ ವೇದಿಕೆ ಹಂಚಿಕೊಂಡ ಕೈ ಶಾಸಕಿ: ನಯನಾ ಮೋಟಮ್ಮ ವಿರುದ್ಧ ಪ್ರಾಯಶ್ಚಿತ್ತ… ಮತದಾರರ ಹಕ್ಕು ರಕ್ಷಣೆ ರಾಜಕೀಯ ಪಕ್ಷಗಳ ಕರ್ತವ್ಯ: ಡಿಸಿಎಂ ಡಿ.ಕೆ. ಶಿವಕುಮಾರ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:… ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ… Shivamogga | ತೀರ್ಥಹಳ್ಳಿ: ಮನೆಗಾಗಿ ಸಾಲ; ಮನನೊಂದ ವೃದ್ದ ದಂಪತಿ ಒಂದೇ ಮರಕ್ಕೆ… Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ… Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ

ಇತ್ತೀಚಿನ ಸುದ್ದಿ

ಮಂಗಳೂರಿನ ವೈಭವ ಮರುಕಳಿಸಲು ಕಾಂಗ್ರೆಸ್ ಗೆಲ್ಲಿಸಿ: ತೋಡಾರಿನಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಪದ್ಮರಾಜ್ ಆರ್. ಪೂಜಾರಿ

21/04/2024, 22:20

ಮೂಡುಬಿದರೆ(reporterkarnataka.com): ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತೋಡಾರಿನಲ್ಲಿ ಕಾರ್ಯಕರ್ತರ ಸಭೆ ನಡೆಯಿತು.


ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಮಾತನಾಡಿ, ಕಾಂಗ್ರೆಸ್ ಯಾವತ್ತೂ ಜಾತಿ, ಧರ್ಮದ ವಿಚಾರದಲ್ಲಿ ಚುನಾವಣೆ ಎದುರಿಸಿಲ್ಲ. ಅಭಿವೃದ್ಧಿ ವಿಚಾರವಾಗಿ ಮಾತ್ರ ಚುನಾವಣೆ ಎದುರಿಸಿ, ಉತ್ತಮ ಆಡಳಿತವನ್ನು ನೀಡಿದೆ. ನಮ್ಮ ಭವಿಷ್ಯ, ಮಕ್ಕಳ ಜೀವನವನ್ನು ನಿರ್ಧರಿಸುವ ಚುನಾವಣೆ ಮತ್ತೊಮ್ಮೆ ಬಂದಿದೆ. ವೈಭವದಿಂದ ಮೆರೆಯುತ್ತಿದ್ದ ಮಂಗಳೂರನ್ನು ಮತ್ತೆ ಅದೇ ವೈಭವಕ್ಕೆ ಕೊಂಡೊಯ್ಯುವ ಅಗತ್ಯವಿದೆ ಎಂದರು.
ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ, ನಾನು ಶಾಸಕನಾಗಿದ್ದಾಗಲೇ ಹೊಸಬರಿಗೆ ಅವಕಾಶ ಕೊಡಿ ಎಂದು ಕೇಳಿಕೊಂಡಿದ್ದೆ. ಇದೀಗ ಯುವಕನಿಗೆ, ವಕೀಲನಿಗೆ ಅವಕಾಶ ನೀಡಲಾಗಿದೆ. ಸಮರ್ಥ ಅಭ್ಯರ್ಥಿ ಮಾತ್ರವಲ್ಲ, ನಾವು ಗೌರವಿಸುವಂತಹ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ. ಅವರನ್ನು ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡಿಕೊಂಡರು.
ಮಿಥುನ್ ರೈ ಮಾತನಾಡಿ, ಹಿಂದುಳಿದ ವರ್ಗದ ಧ್ವನಿಯಾಗಿರುವ ಪದ್ಮರಾಜ್ ಆರ್. ಪೂಜಾರಿ ಅವರ ಗೆಲುವಿಗಾಗಿ ಈಗ ನಾವೆಲ್ಲಾ ಧ್ವನಿಯಾಗಬೇಕು ಎಂದರು.
ಜಿಲ್ಲಾ ವಕ್ಫ್ ಅಧ್ಯಕ್ಷ ಅಬ್ದುಲ್ ಸಲಾಂ ತೋಡಾರ್, ರಾಜೇಶ್ ಅಡ್ಲಕೆರೆ, ಚಂದ್ರಹಾಸ್ ಸಾಧು ಸನಿಲ್, ಮೂಡುಬಿದರೆ ಉಸ್ತುವಾರಿ, ಗುರುರಾಜ್, ಬ್ಲಾಕ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ನಜೀರ್, ಇಸಾಕ್ ಹಾಜಿ, ಲತೀಫ್, ಆಸೀಫ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು