9:25 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಮಂಗಳೂರಿನ ವೈಭವ ಮರುಕಳಿಸಲು ಕಾಂಗ್ರೆಸ್ ಗೆಲ್ಲಿಸಿ: ತೋಡಾರಿನಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಪದ್ಮರಾಜ್ ಆರ್. ಪೂಜಾರಿ

21/04/2024, 22:20

ಮೂಡುಬಿದರೆ(reporterkarnataka.com): ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತೋಡಾರಿನಲ್ಲಿ ಕಾರ್ಯಕರ್ತರ ಸಭೆ ನಡೆಯಿತು.


ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಮಾತನಾಡಿ, ಕಾಂಗ್ರೆಸ್ ಯಾವತ್ತೂ ಜಾತಿ, ಧರ್ಮದ ವಿಚಾರದಲ್ಲಿ ಚುನಾವಣೆ ಎದುರಿಸಿಲ್ಲ. ಅಭಿವೃದ್ಧಿ ವಿಚಾರವಾಗಿ ಮಾತ್ರ ಚುನಾವಣೆ ಎದುರಿಸಿ, ಉತ್ತಮ ಆಡಳಿತವನ್ನು ನೀಡಿದೆ. ನಮ್ಮ ಭವಿಷ್ಯ, ಮಕ್ಕಳ ಜೀವನವನ್ನು ನಿರ್ಧರಿಸುವ ಚುನಾವಣೆ ಮತ್ತೊಮ್ಮೆ ಬಂದಿದೆ. ವೈಭವದಿಂದ ಮೆರೆಯುತ್ತಿದ್ದ ಮಂಗಳೂರನ್ನು ಮತ್ತೆ ಅದೇ ವೈಭವಕ್ಕೆ ಕೊಂಡೊಯ್ಯುವ ಅಗತ್ಯವಿದೆ ಎಂದರು.
ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ, ನಾನು ಶಾಸಕನಾಗಿದ್ದಾಗಲೇ ಹೊಸಬರಿಗೆ ಅವಕಾಶ ಕೊಡಿ ಎಂದು ಕೇಳಿಕೊಂಡಿದ್ದೆ. ಇದೀಗ ಯುವಕನಿಗೆ, ವಕೀಲನಿಗೆ ಅವಕಾಶ ನೀಡಲಾಗಿದೆ. ಸಮರ್ಥ ಅಭ್ಯರ್ಥಿ ಮಾತ್ರವಲ್ಲ, ನಾವು ಗೌರವಿಸುವಂತಹ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ. ಅವರನ್ನು ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡಿಕೊಂಡರು.
ಮಿಥುನ್ ರೈ ಮಾತನಾಡಿ, ಹಿಂದುಳಿದ ವರ್ಗದ ಧ್ವನಿಯಾಗಿರುವ ಪದ್ಮರಾಜ್ ಆರ್. ಪೂಜಾರಿ ಅವರ ಗೆಲುವಿಗಾಗಿ ಈಗ ನಾವೆಲ್ಲಾ ಧ್ವನಿಯಾಗಬೇಕು ಎಂದರು.
ಜಿಲ್ಲಾ ವಕ್ಫ್ ಅಧ್ಯಕ್ಷ ಅಬ್ದುಲ್ ಸಲಾಂ ತೋಡಾರ್, ರಾಜೇಶ್ ಅಡ್ಲಕೆರೆ, ಚಂದ್ರಹಾಸ್ ಸಾಧು ಸನಿಲ್, ಮೂಡುಬಿದರೆ ಉಸ್ತುವಾರಿ, ಗುರುರಾಜ್, ಬ್ಲಾಕ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ, ನಜೀರ್, ಇಸಾಕ್ ಹಾಜಿ, ಲತೀಫ್, ಆಸೀಫ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು