2:11 AM Friday14 - August 2026
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ

ಇತ್ತೀಚಿನ ಸುದ್ದಿ

ಮಂಗಳೂರಿನ‌ ವೆನ್ಲಾಕ್ ಸಹಿತ ರಾಜ್ಯದ 5 ಜಿಲ್ಲಾಸ್ಪತ್ರೆಗಳಲ್ಲಿ ತೀವ್ರ ನಿಗಾ ಆರೈಕೆ ಘಟಕ: ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ

29/02/2024, 23:19

ಬೆಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ವೆನ್ಲಾಕ್ ಆಸ್ಪತ್ರೆ ಸೇರಿದಂತೆ ರಾಜ್ಯದ 5 ಜಿಲ್ಲಾಸ್ಪತ್ರೆಗಳಲ್ಲಿ 50 ಹಾಸಿಗೆಯ ತೀವ್ರ ನಿಗಾ ಆರೈಕೆ ಘಟಕಗಳ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ. ರಾಷ್ಟ್ರೀಯ ಆರೋಗ್ಯ ಯೋಜನೆಯಡಿ ಅನುಮೋದನೆಗೊಂಡ ಕ್ರಿಟಿಕಲ್ ಕೇರ್ ಗಳಲ್ಲಿ ಆರೋಗ್ಯ ಇಲಾಖೆ ವ್ಯಾಪ್ತಿಯ 5 ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ವ್ಯಾಪ್ತಿಯ 6 ಆಸ್ಪತ್ರೆಗಳು ಸೇರಿದಂತೆ ಒಟ್ಟು 11 ಆಸ್ಪತ್ರೆಗಳಲ್ಲಿ ತೀವ್ರ ನಿಗಾ ಆರೈಕೆ ಘಟಕಗಳ ನಿರ್ಮಾಣಕ್ಕೆ ಹಣಕಾಸು ಇಲಾಖೆ ಒಪ್ಪಿಗೆ ಸೂಚಿಸಿತ್ತು. ಆರೋಗ್ಯ ಇಲಾಖೆ ವ್ಯಾಪ್ತಿಗೆ ಬರುವ 5 ಜಿಲ್ಲಾಸ್ಪತ್ರೆಗಳಲ್ಲಿ ಕ್ರಿಟಿಕಲ್ ಕೇರ್ ನಿರ್ಮಾಣಕ್ಕೆ ಇಂದು ನಡೆದ ಸಚಿವ ಸಂಪುಟ‌ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ದೊರಕಿರುವುದಾಗಿ ಆರೋಗ್ಯ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
137.75 ಕೋಟಿ ವೆಚ್ವದಲ್ಲಿ 50 ಬೆಡ್ ಕ್ರಿಟಿಕಲ್ ಕೇರ್ ಗಳ ಸ್ಥಾಪನೆಗೆ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ. ಬೆಂಗಳೂರು ನಗರ ಜಿಲ್ಲೆಯ ಸಿ.ವಿ ರಾಮನ್ ಸಾರ್ವಜನಿಕ ಆಸ್ಪತ್ರೆಯಲ್ಲಿ 100 ಹಾಸಿಗೆಯ ತೀವ್ರ ನಿಗಾ ಆರೈಕೆ ಘಟಕವನ್ನ 45 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವುದು. ಉಳಿದಂತೆ ನಾಲ್ಕು ಜಿಲ್ಲಾಸ್ಪತ್ರೆಗಳಲ್ಲಿ ತಲಾ 50 ಬೆಡ್ ಗಳ ಕ್ರಿಟಿಕಲ್ ಕೇರ್ ಘಟಕಗಳ ನಿರ್ಮಾಣವನ್ನ ತಲಾ 24 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲು ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ವೆನ್ ಲಾಕ್ ಆಸ್ಪತ್ರೆ, ವಿಜಯನಗರ ಜಿಲ್ಲಾಸ್ಪತ್ರೆ, ದೊಡ್ಡಬಳ್ಳಾಪುರ ಹಾಗೂ ರಾಮನಗರ ಜಿಲ್ಲಾಸ್ಪತ್ರೆಗಳಲ್ಲಿ ತಲಾ 50 ಬೆಡ್ ಗಳ ತೀವ್ರ ನಿಗಾ ಆರೈಕೆ ಘಟಕಗಳ ಸ್ಥಾಪನೆಗೆ ಸಂಪುಟದಿಂದ ಅನುಮೋದನೆ ದೊರೆತಿದೆ. ಈ 5 ತೀವ್ರ ನಿಗಾ ಆರೈಕೆ ಘಟಕಗಳ ನಿರ್ಮಾಣ ಕಾಮಗಾರಿಗಳಿಗೆ ರಾಷ್ಟ್ರೀಯ ಆರೋಗ್ಯ ಯೋಜನೆ PM-ABHIM ಅಡಿ ಅನುದಾನ ದೊರೆಯಲಿದ್ದು, ರಾಜ್ಯ ಸರ್ಕಾರ ಕೂಡ ತನ್ನ ಪಾಲಿನ ವೆಚ್ಚವನ್ನ ಭರಿಸಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಿದೆ.‌

ಇತ್ತೀಚಿನ ಸುದ್ದಿ

ಜಾಹೀರಾತು