8:13 PM Saturday16 - August 2025
ಬ್ರೇಕಿಂಗ್ ನ್ಯೂಸ್
Bangalore | ಬಿಜೆಪಿಯವರಿಗೆ ರಾಜಕಾರಣಕ್ಕಾಗಿ ಧರ್ಮಸ್ಥಳ ಬೇಕಾಗಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ ವಿರಾಜಪೇಟೆ: ಅರಣ್ಯ ಇಲಾಖೆಯ ಕಾರ್ಯಾಚರಣೆ ಯಶಸ್ವಿ; ನಾಡಿನಲ್ಲಿ ಬೀಡು ಬಿಟ್ಟಿದ್ದ 10ಕ್ಕೂ ಅಧಿಕ… ‘ಧರ್ಮಸ್ಥಳ ವಿರುದ್ಧ ಷಡ್ಯಂತರʼ ರಾಜ್ಯ ಸರ್ಕಾರದ್ದೇ?: ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಕೇಂದ್ರ ಸಚಿವ… ಸಾಲದ ಬಾಧೆ: ಆಟೋ ಚಾಲಕ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನ; ಅರಣ್ಯ… ಬಸವಣ್ಣನವರ ಕಲ್ಯಾಣ ರಾಜ್ಯದ ಕನಸಿನ ಈಡೇರಿಕೆಯೇ ನಮ್ಮ ಗುರಿ: ಸಿಎಂ ಸಿದ್ದರಾಮಯ್ಯ ಕೇಂದ್ರದಿಂದ ಸ್ವಾತಂತ್ರ್ಯೋತ್ಸವದ ವಿಶಿಷ್ಠ ಕೊಡುಗೆ; ಉತ್ತರ ಕರ್ನಾಟಕಕ್ಕೆ ವಿಶೇಷ ಆರ್ಥಿಕ ವಲಯ ಘೋಷಣೆ ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ; ಎಸ್ಐಟಿ ತನಿಖೆ ನಡೆಯುತ್ತಿರುವಾಗ ಸದನದಲ್ಲಿ ಪ್ರಸ್ತಾಪ ಸರಿಯಲ್ಲ:… ಜಾಮೀನು ರದ್ದು ಮಾಡಿದ ಸುಪ್ರೀಂಕೋರ್ಟ್: ನಟ ದರ್ಶನ್​​, ಪವಿತ್ರಾ ಗೌಡ ಸಹಿತ 4… ಕೇಂದ್ರದಿಂದ ರಸಗೊಬ್ಬರ ಪೂರೈಕೆ ಕೊರತೆ ರಾಜ್ಯದ ಸಮಸ್ಯೆಗೆ ಕಾರಣ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ Kodagu | ಮಡಿಕೇರಿ: ಅಸ್ಸಾಂ ಕಾರ್ಮಿಕರಿಂದ ಆಧಾರ್ ಕಾರ್ಡಿನ ದುರ್ಬಳಕೆ ಆರೋಪ

ಇತ್ತೀಚಿನ ಸುದ್ದಿ

Mangaluru | ಕೆನರಾ ಬ್ಯಾಂಕಿನಿಂದ ಪ್ರತಿಭಾವಂತ ಎಸ್ ಸಿ/ ಎಸ್ ಟಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ವಿತರಣೆ

16/08/2025, 18:30

ಮಂಗಳೂರು(reporterkarnataka.com): ಕೆನರಾ ಬ್ಯಾಂಕ್ ಡಾ. ಅಂಬೇಡ್ಕರ್ ವಿದ್ಯಾ ಜ್ಯೋತಿ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರತಿಭಾವಂತ ಎಸ್ ಸಿ/ ಎಸ್ ಟಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಮಂಗಳೂರಿನ ಕೇಂದ್ರ ವೃತ್ತ ಕಚೇರಿಯಲ್ಲಿ ನಡೆಯಿತು.
ಶಿಕ್ಷಣಕ್ಕಾಗಿ ಒಟ್ಟು 45,786 ವಿದ್ಯಾರ್ಥಿನಿಯರಿಗೆ ಮತ್ತು 2600 ಅಧಿಕ ಶಾಲೆಗಳಿಗೆ ಸುಮಾರು 1824.68 ಲಕ್ಷ ವಿದ್ಯಾರ್ಥಿ ವೇತನವನ್ನು ಭಾರತಾದ್ಯಂತ ನೀಡುವ ಮೂಲಕ ಬೆಂಬಲಿಸಲಾಯಿತು. ದೇಶದ ಯುವ ಮನಸುಗಳನ್ನು ಸಬಲೀಕರಣಗೊಳಿಸುವ ಮತ್ತು ಹಿಂದುಳಿದ ಪ್ರತಿಭಾವಂತ ಎಸ್ ಸಿ ಎಸ್ ಟಿ ಬಾಲಕಿಯರಿಗೆ ವಿದ್ಯಾರ್ಥಿವೇತನವನ್ನು ನೀಡುವುದರ ಮೂಲಕ ಶೈಕ್ಷಣಿಕ ಶ್ರೇಷ್ಠತೆಯನ್ನು ಸಾಧಿಸುವಲ್ಲಿ ಸಹಾಯ ಮಾಡುವ ಗುರಿಯನ್ನು ಕೆನರಾ ಬ್ಯಾಂಕ್, ಭಾರತಾದ್ಯಂತ 26 ವೃತ್ತ ಕಚೇರಿಗಳಲ್ಲಿ 177 ಪ್ರಾದೇಶಿಕ ಕಚೇರಿಗಳಲ್ಲಿ ಮತ್ತು 7660ಕ್ಕೂ ಹೆಚ್ಚು ಶಾಖೆಗಳಲ್ಲಿ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ನಡೆಯಿತು.
ವಿದ್ಯಾರ್ಥಿ ವೇತನದ ಯೋಜನೆಯ ಹೊರತಾಗಿ ಕೆನರಾ ಬ್ಯಾಂಕ್ ಸಿ ಎಸ್ ಆರ್ ಕಾರ್ಯಕ್ರಮದಲ್ಲಿ ಗ್ರಾಮೀಣ ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಶೌಚಾಲಯ ನಿರ್ಮಾಣ, ನೈರ್ಮಲ್ಯ ಸೌಲಭ್ಯಗಳನ್ನು ಒದಗಿಸಿದೆ ಎಂದು ಅಧ್ಯಕ್ಷತೆಯನ್ನು ವಹಿಸಿದ ಬ್ಯಾಂಕಿನ ಜನರಲ್ ಮ್ಯಾನೇಜರ್ ಮಂಜುನಾಥ್ ಬಿ. ಸಿಂಗೈ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ಬಿ.ಎಸ್. ಹೇಮಲತಾ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು ಎಜಿಎಂ ಸಂಜಯ್ ಕುಮಾರ್ ತ್ರಿವೇದಿ, ಡೆಪ್ಯುಟಿ ಜನರಲ್ ಮ್ಯಾನೇಜರ್ ಲತಾ ಕುರುಪ್ , ಮತ್ತು ಶೈಲೇಂದ್ರನಾಥ್ ಶೀತ್, ವ್ಯವಸ್ಥಾಪಕರಾದ ತುಶಾಂತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಹಿರಿಯ ವ್ಯವಸ್ಥಾಪಕಿ ಸ್ವಾತಿ ಕೆ. ಸ್ವಾಗತಿಸಿದರು. ಸಂಜಯ್ ಕುಮಾರ್ ತ್ರಿವೇದಿ ಧನ್ಯವಾದ ಸಮರ್ಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು