3:57 AM Friday9 - May 2025
ಬ್ರೇಕಿಂಗ್ ನ್ಯೂಸ್
Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಮಂಗಳೂರು: 160 ಮೀನುಗಾರ ಮಹಿಳೆಯರಿಗೆ ಶಾಖ ನಿರೋಧಕ ಪೆಟ್ಟಿಗೆ ವಿತರಣೆ

30/03/2023, 23:09

ಮಂಗಳೂರು(reporterkarnataka.com) ರಾಜ್ಯ ವಲಯ ಯೋಜನೆಯಡಿ ಮೀನುಗಾರ ಮಹಿಳೆಯರಿಗೆ ರಾಜ್ಯ ಸರಕಾರವು ಉಚಿತವಾಗಿ ನೀಡುವ ಶಾಖ ನಿರೋಧಕ ಪೆಟ್ಟಿಗೆಗಳನ್ನು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಯಲ್ಲಿ ಸಾಂಕೇತಿಕವಾಗಿ ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಕೇಂದ್ರ ಹಾಗೂ ರಾಜ್ಯ ಸರಕಾರವು ಮೀನುಗಾರರ ಹಿತದೃಷ್ಟಿಯಿಂದ ವಿವಿಧ ಯೋಜನೆಗಳನ್ನು, ಸವಲತ್ತುಗಳನ್ನು ಜಾರಿಗೆ ತಂದಿದೆ. ಕೇಂದ್ರ ಸರಕಾರವು ಮತ್ಸ್ಯ ಸಂಪದ ಯೋಜನೆಯಡಿ ಆಳ ಸಮುದ್ರ ಮೀನುಗಾರಿಕೆ ನಡೆಸುವವರಿಗೆ ಬೋಟ್, ಇನ್ಸುಲೇಟೆಡ್ ವಾಹನಗಳು ಸೇರಿದಂತೆ ವಿವಿಧ ಯೋಜನೆಗಳನ್ನು ನೀಡುವ ಮೂಲಕ ಮೀನುಗಾರರ ಹಿತ ಕಾಪಾಡುವ ಕೆಲಸ ಮಾಡಿದೆ. ನಗರದ ಮೀನು ಮಾರುಕಟ್ಟೆಯ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೂ ಕೂಡ ವಿಶೇಷವಾಗಿ ಚಿಂತನೆ ನಡೆಸಲಾಗಿದ್ದು, ಸ್ಥಳೀಯ ಮೀನುಗಾರರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಬಿಜೆಪಿ ನೇತೃತ್ವದ ರಾಜ್ಯ ಸರಕಾರವು ನಾಡದೋಣಿಗಳಿಗೆ ಸೀಮೆ ಎಣ್ಣೆ, ನದಿಯಲ್ಲಿ ಮೀನುಗಾರಿಕೆ ಮಾಡುವವರಿಗೆ ಬಲೆ, ಸಬ್ಸಿಡಿ ಡೀಸೆಲ್, ಮೀನುಗಾರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯಡಿ ಸ್ಕಾಲರ್ಶಿಪ್ ನೀಡುವ ಮೂಲರ ಆಸರೆಯಾಗಿದೆ. ಸದ್ಯ ರಾಜ್ಯ ವಲಯ ಯೋಜನೆಯಡಿ ನಗರದಲ್ಲಿ 160 ಮೀನು ಮಾರಾಟ ಮಹಿಳೆಯರಿಗೆ ಶಾಖ ನಿರೋಧಕ ಪೆಟ್ಟಿಗೆಗಳನ್ನು ಒದಗಿಸಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯ ಮೀನುಗಾರಿಕಾ ನಿಗಮದ ನಿಕಟಪೂರ್ವ ಅಧ್ಯಕ್ಷರಾದ ನಿತಿನ್ ಕುಮಾರ್ ಮಾತನಾಡಿ, ಬಿಜೆಪಿ ಸರಕಾರವು ಸದಾ ಬೆನ್ನೆಲುಬಾಗಿ ನಿಂತಿದೆ. ಕೇಂದ್ರ ಹಾಗೂ ರಾಜ್ಯ ಸರಕಾರ ನೀಡಿದ ಯೋಜನೆಗಳು ಹಾಗೂ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಹೇಳಿದರು.
ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಹಾಗೂ ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ, ಮಾಜಿ ಕಾರ್ಪೋರೇಟರ್ ಮೀರಾ ಕರ್ಕೇರ, ಮೀನು ಮಾರಾಟಗಾರ ಮಹಿಳೆಯರ ಸಂಘದ ಅಧ್ಯಕ್ಷರಾದ ಬೇಬಿ ಅಮೀನ್, ಉಪಾಧ್ಯಕ್ಷರಾದ ಮೋಹನ್, ಹದಿನಾರು ಪಟ್ನ ಮೀನುಗಾರ ಸಂಯುಕ್ತ ಸಭಾದ ಉಪಾಧ್ಯಕ್ಷ ಸುಭಾಷ್ ಕಾಂಚನ್, ಮುಖಂಡರಾದ ಹೇಮಚಂದ್ರ ಸಾಲ್ಯಾನ್, ಸುಗಂಧಿ ಉಳ್ಳಾಲ್, ಇಲಾಖೆಯ ಅಧಿಕಾರಿ ನಳಿನಿ ಮತ್ತು ಇತರೆ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು