5:21 PM Friday26 - June 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;…

ಇತ್ತೀಚಿನ ಸುದ್ದಿ

ಮಂಗಳೂರು: 160 ಮೀನುಗಾರ ಮಹಿಳೆಯರಿಗೆ ಶಾಖ ನಿರೋಧಕ ಪೆಟ್ಟಿಗೆ ವಿತರಣೆ

30/03/2023, 23:09

ಮಂಗಳೂರು(reporterkarnataka.com) ರಾಜ್ಯ ವಲಯ ಯೋಜನೆಯಡಿ ಮೀನುಗಾರ ಮಹಿಳೆಯರಿಗೆ ರಾಜ್ಯ ಸರಕಾರವು ಉಚಿತವಾಗಿ ನೀಡುವ ಶಾಖ ನಿರೋಧಕ ಪೆಟ್ಟಿಗೆಗಳನ್ನು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಯಲ್ಲಿ ಸಾಂಕೇತಿಕವಾಗಿ ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಕೇಂದ್ರ ಹಾಗೂ ರಾಜ್ಯ ಸರಕಾರವು ಮೀನುಗಾರರ ಹಿತದೃಷ್ಟಿಯಿಂದ ವಿವಿಧ ಯೋಜನೆಗಳನ್ನು, ಸವಲತ್ತುಗಳನ್ನು ಜಾರಿಗೆ ತಂದಿದೆ. ಕೇಂದ್ರ ಸರಕಾರವು ಮತ್ಸ್ಯ ಸಂಪದ ಯೋಜನೆಯಡಿ ಆಳ ಸಮುದ್ರ ಮೀನುಗಾರಿಕೆ ನಡೆಸುವವರಿಗೆ ಬೋಟ್, ಇನ್ಸುಲೇಟೆಡ್ ವಾಹನಗಳು ಸೇರಿದಂತೆ ವಿವಿಧ ಯೋಜನೆಗಳನ್ನು ನೀಡುವ ಮೂಲಕ ಮೀನುಗಾರರ ಹಿತ ಕಾಪಾಡುವ ಕೆಲಸ ಮಾಡಿದೆ. ನಗರದ ಮೀನು ಮಾರುಕಟ್ಟೆಯ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೂ ಕೂಡ ವಿಶೇಷವಾಗಿ ಚಿಂತನೆ ನಡೆಸಲಾಗಿದ್ದು, ಸ್ಥಳೀಯ ಮೀನುಗಾರರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಬಿಜೆಪಿ ನೇತೃತ್ವದ ರಾಜ್ಯ ಸರಕಾರವು ನಾಡದೋಣಿಗಳಿಗೆ ಸೀಮೆ ಎಣ್ಣೆ, ನದಿಯಲ್ಲಿ ಮೀನುಗಾರಿಕೆ ಮಾಡುವವರಿಗೆ ಬಲೆ, ಸಬ್ಸಿಡಿ ಡೀಸೆಲ್, ಮೀನುಗಾರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯಡಿ ಸ್ಕಾಲರ್ಶಿಪ್ ನೀಡುವ ಮೂಲರ ಆಸರೆಯಾಗಿದೆ. ಸದ್ಯ ರಾಜ್ಯ ವಲಯ ಯೋಜನೆಯಡಿ ನಗರದಲ್ಲಿ 160 ಮೀನು ಮಾರಾಟ ಮಹಿಳೆಯರಿಗೆ ಶಾಖ ನಿರೋಧಕ ಪೆಟ್ಟಿಗೆಗಳನ್ನು ಒದಗಿಸಲಾಗಿದೆ ಎಂದು ಹೇಳಿದ್ದಾರೆ.
ರಾಜ್ಯ ಮೀನುಗಾರಿಕಾ ನಿಗಮದ ನಿಕಟಪೂರ್ವ ಅಧ್ಯಕ್ಷರಾದ ನಿತಿನ್ ಕುಮಾರ್ ಮಾತನಾಡಿ, ಬಿಜೆಪಿ ಸರಕಾರವು ಸದಾ ಬೆನ್ನೆಲುಬಾಗಿ ನಿಂತಿದೆ. ಕೇಂದ್ರ ಹಾಗೂ ರಾಜ್ಯ ಸರಕಾರ ನೀಡಿದ ಯೋಜನೆಗಳು ಹಾಗೂ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಹೇಳಿದರು.
ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಹಾಗೂ ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ, ಮಾಜಿ ಕಾರ್ಪೋರೇಟರ್ ಮೀರಾ ಕರ್ಕೇರ, ಮೀನು ಮಾರಾಟಗಾರ ಮಹಿಳೆಯರ ಸಂಘದ ಅಧ್ಯಕ್ಷರಾದ ಬೇಬಿ ಅಮೀನ್, ಉಪಾಧ್ಯಕ್ಷರಾದ ಮೋಹನ್, ಹದಿನಾರು ಪಟ್ನ ಮೀನುಗಾರ ಸಂಯುಕ್ತ ಸಭಾದ ಉಪಾಧ್ಯಕ್ಷ ಸುಭಾಷ್ ಕಾಂಚನ್, ಮುಖಂಡರಾದ ಹೇಮಚಂದ್ರ ಸಾಲ್ಯಾನ್, ಸುಗಂಧಿ ಉಳ್ಳಾಲ್, ಇಲಾಖೆಯ ಅಧಿಕಾರಿ ನಳಿನಿ ಮತ್ತು ಇತರೆ ಪ್ರಮುಖರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು