2:16 AM Friday10 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ…

ಇತ್ತೀಚಿನ ಸುದ್ದಿ

ಮಂಗಳೂರು: 1992ರ ಅಯೋಧ್ಯೆ ಕರಸೇವಕರಿಗೆ ನಮೋ ಬ್ರಿಗೇಡ್ ಸನ್ಮಾನ

06/01/2024, 19:36

ಮಂಗಳೂರು(reporterkarnataka.com):ನಮೋ ಬ್ರಿಗೇಡ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಿಂದ ಅಯೋಧ್ಯೆಗೆ ಕರಸೇವೆಯಲ್ಲಿ ಭಾಗವಹಿಸಿದ ಶ್ರೀರಾಮ ಭಕ್ತರನ್ನು ಸನ್ಮಾನಿಸಲಾಯಿತು. ವಿ.ಟಿ.ರಸ್ತೆಯಲ್ಲಿರುವ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನದ ರಾಜಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 63 ಮಂದಿ ಕರಸೇವಕರನ್ನು ಸನ್ಮಾನಿಸಿ ಅವರ ಸೇವೆಗೆ ಅಭಿನಂದನೆ ಸಲ್ಲಿಸಲಾಯಿತು. ಆರಂಭದಲ್ಲಿ 1992ರ ಕರಸೇವೆಯ ದಿನಗಳನ್ನು ನೆನಪಿಸುವ ವಿಡಿಯೋ ಡಾಕ್ಯುಮೆಂಟರಿಯನ್ನು ಎಲ್ ಇಡಿ ಪರದೆಯಲ್ಲಿ ಪ್ರದರ್ಶಿಸಲಾಯಿತು. ಆ ಬಳಿಕ ನಮೋ ಬ್ರಿಗೇಡ್ ರಾಜ್ಯ ಮಾರ್ಗದರ್ಶಕರಾದ ಚಕ್ರವರ್ತಿ ಸೂಲಿಬೆಲೆಯವರು ಕರಸೇವಕರ ಹೋರಾಟಗಳ ಘಟನಾವಳಿಗಳು, ತ್ಯಾಗ, ಬಲಿದಾನಗಳ ಕುರಿತು ಮಾತನಾಡಿದ ವಿಡಿಯೋ ಪ್ರದರ್ಶಿಸಲಾಯಿತು. ಸನ್ಮಾನ ಸ್ವೀಕರಿಸಿದ ಕರಸೇವಕರು ಮೆಚ್ಚುಗೆಯನ್ನು ಸೂಚಿಸಿದರು. ವಿಶ್ವ ಹಿಂದೂ ಪರಿಷತ್ ಮುಖಂಡರಾದ ಎಂ.ಬಿ.ಪುರಾಣಿಕ್, ಹಿರಿಯ ಲೇಖಕ ಡಾ. ಪಿ. ಅನಂತಕೃಷ್ಣ ಭಟ್, ವಿಹಿಂಪ ಮುಖಂಡರಾದ ಶರಣ್ ಪಂಪ್ ವೆಲ್, ಶಿವಾನಂದ ಮೆಂಡನ್, ಮಟ್ಟಾರು ವಿಠಲ್ ಕಿಣಿ ಸಹಿತ ಅನೇಕ ಗಣ್ಯರು ಭಾಗವಹಿಸಿದರು. ನಮೋ ಬ್ರಿಗೇಡ್ ಪ್ರಮುಖರಾದ ಮಂಗಲ್ಪಾಡಿ ನರೇಶ್ ಶೆಣೈ, ತಿಲಕ್ ಶಿಶಿಲ, ಭರತ್ ನಾಗರಮಠ್, ರಾಜೇಂದ್ರ ಉಳ್ಳಾಲ್, ನರೇಶ್ ಪ್ರಭು, ಸಿರ್ಧಾರ್ಥ್ ಪ್ರಭು, ನಾಗೇಂದ್ರ ಶೆಣೈ ಸಹಿತ ನಮೋ ಬ್ರಿಗೇಡ್ ಪ್ರಮುಖರು ಉಪಸ್ಥಿತರಿದ್ದರು. ಗೋಪಾಲಕೃಷ್ಣ ಭಟ್ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು