10:09 AM Thursday15 - January 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ…

ಇತ್ತೀಚಿನ ಸುದ್ದಿ

Mangaluru | ಜಪ್ಪಿನಮೊಗರು ಪ್ರಜ್ಞಾ ಸ್ವಾದಾರ ಕೇಂದ್ರದಿಂದ 3 ಮಂದಿ ಮಹಿಳೆಯರು ಕಾಣೆ: ಪತ್ತೆಗೆ ಮನವಿ

13/11/2025, 21:47

ಮಂಗಳೂರು(reporterkarnataka.com): ನಗರದ ಜಪ್ಪಿನಮೊಗರು ಪ್ರಜ್ಞಾ ಸ್ವಾದಾರ ಕೇಂದ್ರದಲ್ಲಿ ದಾಖಲಾಗಿದ್ದ ಮೂವರು ಮಹಿಳೆಯರು ಕಾಣೆಯಾಗಿದ್ದಾರೆ.
ಕುಮಾರಿ(30), ಅಮಲಾ(30) ಹಾಗೂ ಸಂಧ್ಯಾ(28) ಎಂಬ ಮೂರು ಮಹಿಳೆಯರು 2019 ರ ಅಕ್ಟೋಬರ್ 8ರಂದು ಕಾಣೆಯಾಗಿರುವ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
*ಕಾಣೆಯಾದವರ ಚಹರೆ:*
ಕುಮಾರಿ- ಎತ್ತರ 5.6 ಅಡಿ, ಕಪ್ಪು ಮೈ ಬಣ್ಣ, ದಪ್ಪಗಿನ ಶರೀರ ಹೊಂದಿರುತ್ತಾರೆ. ಕಾಣೆಯಾದ ದಿನ ಕಪ್ಪು ಮತ್ತು ಬಿಳಿ ಮಿಶ್ರಿತ ಚೂಡಿದಾರ ಮತ್ತು ಕೇಸರಿ ಬಣ್ಣದ ಪ್ಯಾಂಟ್ ಧರಿಸಿದ್ದರು. ಕನ್ನಡ ಭಾಷೆ ಮಾತನಾಡುತ್ತಾರೆ.
ಅಮಲಾ-ಎತ್ತರ 5.5 ಅಡಿ, ಕಪ್ಪು ಮೈ ಬಣ್ಣ ಹೊಂದಿರುತ್ತಾರೆ. ಕಾಣೆಯಾದ ದಿನ ಪಿಂಕ್ ಬಣ್ಣದ ಟಾಪ್ ಮತ್ತು ಹಳದಿ ಬಣ್ಣದ ಪ್ಯಾಂಟ್ ಹೊಂದಿರುವ ಚೂಡಿದಾರ ಧರಿಸಿದ್ದರು. ತಮಿಳು, ಕನ್ನಡ ಭಾಷೆ ಮಾತನಾಡುತ್ತಾರೆ.
ಸಂಧ್ಯಾ- ಎತ್ತರ 4.5 ಅಡಿ, ಗೋಧಿ ಮೈ ಬಣ್ಣ ಹೊಂದಿರುತ್ತಾರೆ. ಕಾಣೆಯಾದ ದಿನ ಕಪ್ಪು ಬಣ್ಣದ ಚೂಡಿದಾರ ಧರಿಸಿದ್ದರು. ಹಿಂದಿ, ತುಳು, ಕನ್ನಡ ಭಾಷೆ ಮಾತನಾಡುತ್ತಾರೆ.
ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು