1:29 PM Monday24 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

Mangaluru | ಜಪ್ಪಿನಮೊಗರು ಪ್ರಜ್ಞಾ ಸ್ವಾದಾರ ಕೇಂದ್ರದಿಂದ 3 ಮಂದಿ ಮಹಿಳೆಯರು ಕಾಣೆ: ಪತ್ತೆಗೆ ಮನವಿ

13/11/2025, 21:47

ಮಂಗಳೂರು(reporterkarnataka.com): ನಗರದ ಜಪ್ಪಿನಮೊಗರು ಪ್ರಜ್ಞಾ ಸ್ವಾದಾರ ಕೇಂದ್ರದಲ್ಲಿ ದಾಖಲಾಗಿದ್ದ ಮೂವರು ಮಹಿಳೆಯರು ಕಾಣೆಯಾಗಿದ್ದಾರೆ.
ಕುಮಾರಿ(30), ಅಮಲಾ(30) ಹಾಗೂ ಸಂಧ್ಯಾ(28) ಎಂಬ ಮೂರು ಮಹಿಳೆಯರು 2019 ರ ಅಕ್ಟೋಬರ್ 8ರಂದು ಕಾಣೆಯಾಗಿರುವ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
*ಕಾಣೆಯಾದವರ ಚಹರೆ:*
ಕುಮಾರಿ- ಎತ್ತರ 5.6 ಅಡಿ, ಕಪ್ಪು ಮೈ ಬಣ್ಣ, ದಪ್ಪಗಿನ ಶರೀರ ಹೊಂದಿರುತ್ತಾರೆ. ಕಾಣೆಯಾದ ದಿನ ಕಪ್ಪು ಮತ್ತು ಬಿಳಿ ಮಿಶ್ರಿತ ಚೂಡಿದಾರ ಮತ್ತು ಕೇಸರಿ ಬಣ್ಣದ ಪ್ಯಾಂಟ್ ಧರಿಸಿದ್ದರು. ಕನ್ನಡ ಭಾಷೆ ಮಾತನಾಡುತ್ತಾರೆ.
ಅಮಲಾ-ಎತ್ತರ 5.5 ಅಡಿ, ಕಪ್ಪು ಮೈ ಬಣ್ಣ ಹೊಂದಿರುತ್ತಾರೆ. ಕಾಣೆಯಾದ ದಿನ ಪಿಂಕ್ ಬಣ್ಣದ ಟಾಪ್ ಮತ್ತು ಹಳದಿ ಬಣ್ಣದ ಪ್ಯಾಂಟ್ ಹೊಂದಿರುವ ಚೂಡಿದಾರ ಧರಿಸಿದ್ದರು. ತಮಿಳು, ಕನ್ನಡ ಭಾಷೆ ಮಾತನಾಡುತ್ತಾರೆ.
ಸಂಧ್ಯಾ- ಎತ್ತರ 4.5 ಅಡಿ, ಗೋಧಿ ಮೈ ಬಣ್ಣ ಹೊಂದಿರುತ್ತಾರೆ. ಕಾಣೆಯಾದ ದಿನ ಕಪ್ಪು ಬಣ್ಣದ ಚೂಡಿದಾರ ಧರಿಸಿದ್ದರು. ಹಿಂದಿ, ತುಳು, ಕನ್ನಡ ಭಾಷೆ ಮಾತನಾಡುತ್ತಾರೆ.
ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು