12:51 PM Friday4 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಮಂಗಳೂರು: 46ನೇ ಕಂಟೋನ್ಮೆಂಟ್‌ ವಾರ್ಡಿನ ರಾಜ ಕಾಲುವೆ ತಡೆಗೋಡೆ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಶಿಲಾನ್ಯಾಸ

04/02/2023, 12:26

ಮಂಗಳೂರು(reporterkarnataka.com): ಪಾಲಿಕೆಯ 46ನೇ ಕಂಟೋನ್ಮೆಂಟ್‌ ವಾರ್ಡಿನ ವೈದ್ಯನಾಥ ನಗರದ ರಾಜ ಕಾಲುವೆಗೆ ಸುಭದ್ರ ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್‌ ಶಿಲಾನ್ಯಾಸ ನೆರವೇರಿಸಿದರು.

ಕುಸಿದಿರುವ ತಡೆಗೋಡೆಯ ಮರು ನಿರ್ಮಾಣಕ್ಕೆ ಮಹಾನಗರ ಪಾಲಿಕೆ ಯೋಜನೆಯನ್ನು ತಯಾರಿಸಿದೆ. ಅದರಂತೆ ಇದೀಗ ಕಾಮಗಾರಿಗೆ ಶಿಲಾನ್ಯಾಸ ಮಾಡಲಾಗಿದೆ ಎಂದು ಶಾಸಕರು ತಿಳಿಸಿದರು.

ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರು ನಗರದ ಅಭಿವೃದ್ಧಿಗೆ ಸಣ್ಣ ನೀರಾವರಿ ಇಲಾಖೆಯಿಂದ 100 ಕೋಟಿ ರೂ ಅನುದಾನ ಬಿಡುಗಡೆ ಮಾಡಿಸಿದ್ದಾರೆ. ಮಳೆಗಾಲದಲ್ಲಿ ನಗರದಲ್ಲಿ ಉಂಟಾಗುವ ನೆರೆ ಹಾವಳಿಯನ್ನು ನಿವಾರಿಸಲು ರಾಜ ಕಾಲುವೆಗಳಿಗೆ ತಡೆಗೋಡೆ ನಿರ್ಮಾಣ, ಕಾಲುವೆಗಳ ಹೂಳೆತ್ತುವಿಕೆ, ಅಗಲಗೊಳಿಸುವಿಕೆ ಸೇರಿದಂತೆ ವಿವಿಧ ಯೋಜನೆಗಳಿಗೆ ಈ ಅನುದಾನವನ್ನು ಬಳಸಲಾಗುವುದು ಎಂದು ಹೇಳಿದರು.
ಮಳೆ ಬಂದಾಗ ನಗರದ ನಿವಾಸಿಗಳಿಗೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಮಳೆ ನೀರಿನ ಚರಂಡಿ ಮತ್ತು ಕಾಲುವೆಗಳ ಹೂಳೆತ್ತುವಿಕೆ, ತಡೆಗೋಡೆ ನಿರ್ಮಾನ ಸೇರಿದಂತೆ ವಿವಿಧ ಯೋಜನೆಗಳ ರೂಪುರೇಷೆಗಳನ್ನು ತಯಾರಿಸಲಾಗಿದೆ ಎಂದು ಶಾಸಕ ಕಾಮತ್‌ ನುಡಿದರು.
ಪ್ರಸ್ತುತ ಈ ರಾಜ ಕಾಲುವೆಯ ತಡೆಗೋಡೆಯನ್ನು ಸ್ಥಳೀಯರ ಬೇಡಿಕೆ ಮತ್ತು ಮಾಜಿ ಮೇಯರ್‌ ದಿವಾಕರ್‌ ಅವರ ಮನವಿಯಂತೆ 10 ಅಡಿ ಅಗಲಕ್ಕೆ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ಅಕ್ಕಪಕ್ಕದ 40 ಸೆಂಟ್ಸ್‌ ಜಾಗವನ್ನು ಸಹ ಬಿಟ್ಟುಕೊಡುವಂತೆ ಸ್ಥಳೀಯರ ಮನವೊಲಿಸಲಾಗಿದೆ. ಇಲ್ಲಿನ ಕಾಮಗಾರಿ ಪೂರ್ಣಗೊಂಡ ಬಳಿಕ ಈ ಭಾಗದ ಜನರಿಗೆ ಮಳೆ ನೀರಿನಿಂದ ಸಮಸ್ಯೆಯಾಗದು ಎಂದು ಶಾಸಕರು ತಿಳಿಸಿದರು.

ಮಂಗಳೂರು ನಗರದ ಸರ್ವಾಂಗೀಣ ಅಭಿವೃದ್ಧಿಗೆ ರಾಜ್ಯ ಸರಕಾರ ಬದ್ಧವಾಗಿದ್ದು, ಮಹಾನಗರಪಾಲಿಕೆಯ ಎಲ್ಲ ಯೋಜನೆಗಳನ್ನು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಉಪಮೇಯರ್ ಪೂರ್ಣಿಮಾ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಮಾಜಿ ಮೇಯರ್ ಹಾಗೂ ಸ್ಥಳೀಯ ಕಾರ್ಪೋರೇಟರ್ ದಿವಾಕರ್ ಪಾಂಡೇಶ್ವರ, ಮುಖಂಡರಾದ ಲಲ್ಲೇಶ್ ಅತ್ತಾವರ, ನಿತಿನ್ ಕಾಮತ್, ಅಮರ್ ಪಾಂಡೇಶ್ವರ, ಉಮೇಶ್ ರಾವ್, ಮಾಲತಿ ಶೆಟ್ಟಿ, ಸೌಭಾಗ್ಯ, ಕೀರ್ತಿ ಅತ್ತಾವರ, ಚಂದ್ರಹಾಸ್, ರಿತೇಶ್, ಹಿತೇಶ್ ಅತ್ತಾವರ, ಸ್ಥಳೀಯರು ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು