6:59 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮಂಗಳೂರು: 46ನೇ ಕಂಟೋನ್ಮೆಂಟ್‌ ವಾರ್ಡಿನ ರಾಜ ಕಾಲುವೆ ತಡೆಗೋಡೆ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಶಿಲಾನ್ಯಾಸ

04/02/2023, 12:26

ಮಂಗಳೂರು(reporterkarnataka.com): ಪಾಲಿಕೆಯ 46ನೇ ಕಂಟೋನ್ಮೆಂಟ್‌ ವಾರ್ಡಿನ ವೈದ್ಯನಾಥ ನಗರದ ರಾಜ ಕಾಲುವೆಗೆ ಸುಭದ್ರ ತಡೆಗೋಡೆ ನಿರ್ಮಾಣದ ಕಾಮಗಾರಿಗೆ ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ ಕಾಮತ್‌ ಶಿಲಾನ್ಯಾಸ ನೆರವೇರಿಸಿದರು.

ಕುಸಿದಿರುವ ತಡೆಗೋಡೆಯ ಮರು ನಿರ್ಮಾಣಕ್ಕೆ ಮಹಾನಗರ ಪಾಲಿಕೆ ಯೋಜನೆಯನ್ನು ತಯಾರಿಸಿದೆ. ಅದರಂತೆ ಇದೀಗ ಕಾಮಗಾರಿಗೆ ಶಿಲಾನ್ಯಾಸ ಮಾಡಲಾಗಿದೆ ಎಂದು ಶಾಸಕರು ತಿಳಿಸಿದರು.

ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರು ನಗರದ ಅಭಿವೃದ್ಧಿಗೆ ಸಣ್ಣ ನೀರಾವರಿ ಇಲಾಖೆಯಿಂದ 100 ಕೋಟಿ ರೂ ಅನುದಾನ ಬಿಡುಗಡೆ ಮಾಡಿಸಿದ್ದಾರೆ. ಮಳೆಗಾಲದಲ್ಲಿ ನಗರದಲ್ಲಿ ಉಂಟಾಗುವ ನೆರೆ ಹಾವಳಿಯನ್ನು ನಿವಾರಿಸಲು ರಾಜ ಕಾಲುವೆಗಳಿಗೆ ತಡೆಗೋಡೆ ನಿರ್ಮಾಣ, ಕಾಲುವೆಗಳ ಹೂಳೆತ್ತುವಿಕೆ, ಅಗಲಗೊಳಿಸುವಿಕೆ ಸೇರಿದಂತೆ ವಿವಿಧ ಯೋಜನೆಗಳಿಗೆ ಈ ಅನುದಾನವನ್ನು ಬಳಸಲಾಗುವುದು ಎಂದು ಹೇಳಿದರು.
ಮಳೆ ಬಂದಾಗ ನಗರದ ನಿವಾಸಿಗಳಿಗೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಮಳೆ ನೀರಿನ ಚರಂಡಿ ಮತ್ತು ಕಾಲುವೆಗಳ ಹೂಳೆತ್ತುವಿಕೆ, ತಡೆಗೋಡೆ ನಿರ್ಮಾನ ಸೇರಿದಂತೆ ವಿವಿಧ ಯೋಜನೆಗಳ ರೂಪುರೇಷೆಗಳನ್ನು ತಯಾರಿಸಲಾಗಿದೆ ಎಂದು ಶಾಸಕ ಕಾಮತ್‌ ನುಡಿದರು.
ಪ್ರಸ್ತುತ ಈ ರಾಜ ಕಾಲುವೆಯ ತಡೆಗೋಡೆಯನ್ನು ಸ್ಥಳೀಯರ ಬೇಡಿಕೆ ಮತ್ತು ಮಾಜಿ ಮೇಯರ್‌ ದಿವಾಕರ್‌ ಅವರ ಮನವಿಯಂತೆ 10 ಅಡಿ ಅಗಲಕ್ಕೆ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ಅಕ್ಕಪಕ್ಕದ 40 ಸೆಂಟ್ಸ್‌ ಜಾಗವನ್ನು ಸಹ ಬಿಟ್ಟುಕೊಡುವಂತೆ ಸ್ಥಳೀಯರ ಮನವೊಲಿಸಲಾಗಿದೆ. ಇಲ್ಲಿನ ಕಾಮಗಾರಿ ಪೂರ್ಣಗೊಂಡ ಬಳಿಕ ಈ ಭಾಗದ ಜನರಿಗೆ ಮಳೆ ನೀರಿನಿಂದ ಸಮಸ್ಯೆಯಾಗದು ಎಂದು ಶಾಸಕರು ತಿಳಿಸಿದರು.

ಮಂಗಳೂರು ನಗರದ ಸರ್ವಾಂಗೀಣ ಅಭಿವೃದ್ಧಿಗೆ ರಾಜ್ಯ ಸರಕಾರ ಬದ್ಧವಾಗಿದ್ದು, ಮಹಾನಗರಪಾಲಿಕೆಯ ಎಲ್ಲ ಯೋಜನೆಗಳನ್ನು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಉಪಮೇಯರ್ ಪೂರ್ಣಿಮಾ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಮಾಜಿ ಮೇಯರ್ ಹಾಗೂ ಸ್ಥಳೀಯ ಕಾರ್ಪೋರೇಟರ್ ದಿವಾಕರ್ ಪಾಂಡೇಶ್ವರ, ಮುಖಂಡರಾದ ಲಲ್ಲೇಶ್ ಅತ್ತಾವರ, ನಿತಿನ್ ಕಾಮತ್, ಅಮರ್ ಪಾಂಡೇಶ್ವರ, ಉಮೇಶ್ ರಾವ್, ಮಾಲತಿ ಶೆಟ್ಟಿ, ಸೌಭಾಗ್ಯ, ಕೀರ್ತಿ ಅತ್ತಾವರ, ಚಂದ್ರಹಾಸ್, ರಿತೇಶ್, ಹಿತೇಶ್ ಅತ್ತಾವರ, ಸ್ಥಳೀಯರು ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು