11:53 AM Friday11 - April 2025
ಬ್ರೇಕಿಂಗ್ ನ್ಯೂಸ್
ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ… ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್…

ಇತ್ತೀಚಿನ ಸುದ್ದಿ

ಮಂಗಳೂರು: ನಾಳೆಯಿಂದ 5 ದಿನಗಳ ಕಾಲ ವಿವಿ ಕಾಲೇಜಿನಲ್ಲಿ ಹಿಂದಿ ಯುವ ಬರಹಗಾರರ ಶಿಬಿರ

12/05/2024, 12:02

ಮಂಗಳೂರು(reporterkarnataka.com): ಹಿಂದಿಯೇತರ ಪ್ರಾಂತೀಯ ಹಿಂದಿ ಯುವ ಬರಹಗಾರರಿಗೆ ಭಾರತ ಸರಕಾರ ಶಿಕ್ಷಣ ಮಂತ್ರಾಲಯದ ಕೇಂದ್ರೀಯ ಹಿಂದಿ ನಿರ್ದೇಶನಾಲಯವು 5 ದಿವಸಗಳ ಬರಹಗಾರರ ಶಿಬಿರವನ್ನು ಮೇ 13ರಿಂದ 17 ರವರೆಗೆ ಮಂಗಳೂರು ವಿಶ್ವವಿದ್ಯಾನಿಲಯದ ಹಿಂದಿ ಸ್ನಾತಕೋತ್ತರ ವಿಭಾಗ ನಗರದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಆಯೋಜಿಸಿದೆ.

ಈ ಕಾರ್ಯಕ್ರಮದ ಉದ್ಘಾಟನೆಗೆ ವಿಶ್ವವಿದ್ಯಾನಿಲಯದ ವಿ.ವಿ.ಕುಲಪತಿ ಪ್ರೊ. ಪಿ.ಎಲ್.ಧರ್ಮ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು. ವಿಶೇಷ ಅತಿಥಿಗಳಾಗಿ ಪ್ರೊ. ಸುನಿಲ್. ಬಿ. ಕುಲಕರ್ಣಿ (ನಿರ್ದೇಶಕರು, ಕೇಂದ್ರೀಯ ಹಿಂದಿ ನಿರ್ದೇಶನಾಲಯ, ನವದೆಹಲಿ) ಉಪಸ್ಥಿತರಿರುವರು. ಶಿಬಿರದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಅಡಿಯಲ್ಲಿ ಬರುವ 10 ಕಾಲೇಜಿನ 23 ವಿದ್ಯಾರ್ಥಿಗಳು ಮತ್ತು ಒಟ್ಟು 50 ವಿದ್ಯಾರ್ಥಿಗಳು ಭಾಗವಹಿಸಲಿರುವರು. ಆಯೋಜಕರಾಗಿ ಮಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವ ರಾಜು ಮೊಗವೀರ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಡಾ. ಅನಸೂಯ ರೈ.
ಹಿಂದಿ ಸ್ನಾತಕೋತ್ತರ ವಿಭಾಗದ ಸಂಯೋಜಕರಾದ ಡಾ. ನಾಗರತ್ನ ಎನ್.ರಾವ್, ಪ್ರದೀಪಕುಮಾರ, ನವದೆಹಲಿ ಹಾಗೂ ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಈಶ್ವರ ಪವಾರ. ಪುಣೆ. ಡಾ. ಪ್ರತಿಭಾ ಮೊದಲಿಯಾರ್, ಮೈಸೂರು. ಪ್ರೊ. ಪ್ರಭಾ. ವಿ.ಭಟ್. ಧಾರವಾಡ. ಡಾ. ಸುಮಂಗಲಾ ಮಮ್ಮಿಗಟ್ಟಿ, ಧಾರವಾಡ, ಡಾ. ಮಂಜುನಾಥ, ಐಕಳ, ಮಂಗಳೂರು ಡಾ. ಮುಕುಂದ ಪ್ರಭು, ಮಂಗಳೂರು, ಡಾ. ಸುಮಾ. ಟಿ. ರೊಡನ್ನವರ್. ಮಂಗಳೂರು ಅವರು ಭಾಗವಹಿಸುವರು.
ಈ ಶಿಬಿರವು ಪೂರ್ವಾಹ್ನ 10 ಗಂಟೆಯಿಂದ ಅಪರಾಹ್ನ 4 ಗಂಟೆಯವರೆಗೆ ನಡೆಯುವುದು. ಶಿಬಿರಾರ್ಥಿಗಳಿಗೆ ನೊಂದಣಿ ಮತ್ತು ಬೆಳಿಗ್ಗೆ ಉಪಾಹಾರ, ಮಧ್ಯಾಹ್ನ ಊಟ, ಸಂಜೆ ಚಹಾ, ಕೇಂದ್ರ ಸರ್ಕಾರದ ಅನುದಾನದಲ್ಲಿ ಉಚಿತವಾಗಿ ಇರುವುದು. ಈ ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪ್ರಪ್ರಥಮವಾಗಿ ಆಯೋಜಿಸಲಾಗಿದ್ದು, ಯುವ ಬರಹಗಾರರನ್ನು ಪ್ರೋತ್ಸಾಹಿಸುವ ಉದ್ದೇಶವನ್ನು ಹೊಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು