4:42 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮಂಗಳೂರು: ನಾಳೆಯಿಂದ 5 ದಿನಗಳ ಕಾಲ ವಿವಿ ಕಾಲೇಜಿನಲ್ಲಿ ಹಿಂದಿ ಯುವ ಬರಹಗಾರರ ಶಿಬಿರ

12/05/2024, 12:02

ಮಂಗಳೂರು(reporterkarnataka.com): ಹಿಂದಿಯೇತರ ಪ್ರಾಂತೀಯ ಹಿಂದಿ ಯುವ ಬರಹಗಾರರಿಗೆ ಭಾರತ ಸರಕಾರ ಶಿಕ್ಷಣ ಮಂತ್ರಾಲಯದ ಕೇಂದ್ರೀಯ ಹಿಂದಿ ನಿರ್ದೇಶನಾಲಯವು 5 ದಿವಸಗಳ ಬರಹಗಾರರ ಶಿಬಿರವನ್ನು ಮೇ 13ರಿಂದ 17 ರವರೆಗೆ ಮಂಗಳೂರು ವಿಶ್ವವಿದ್ಯಾನಿಲಯದ ಹಿಂದಿ ಸ್ನಾತಕೋತ್ತರ ವಿಭಾಗ ನಗರದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಆಯೋಜಿಸಿದೆ.

ಈ ಕಾರ್ಯಕ್ರಮದ ಉದ್ಘಾಟನೆಗೆ ವಿಶ್ವವಿದ್ಯಾನಿಲಯದ ವಿ.ವಿ.ಕುಲಪತಿ ಪ್ರೊ. ಪಿ.ಎಲ್.ಧರ್ಮ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು. ವಿಶೇಷ ಅತಿಥಿಗಳಾಗಿ ಪ್ರೊ. ಸುನಿಲ್. ಬಿ. ಕುಲಕರ್ಣಿ (ನಿರ್ದೇಶಕರು, ಕೇಂದ್ರೀಯ ಹಿಂದಿ ನಿರ್ದೇಶನಾಲಯ, ನವದೆಹಲಿ) ಉಪಸ್ಥಿತರಿರುವರು. ಶಿಬಿರದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಅಡಿಯಲ್ಲಿ ಬರುವ 10 ಕಾಲೇಜಿನ 23 ವಿದ್ಯಾರ್ಥಿಗಳು ಮತ್ತು ಒಟ್ಟು 50 ವಿದ್ಯಾರ್ಥಿಗಳು ಭಾಗವಹಿಸಲಿರುವರು. ಆಯೋಜಕರಾಗಿ ಮಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವ ರಾಜು ಮೊಗವೀರ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಡಾ. ಅನಸೂಯ ರೈ.
ಹಿಂದಿ ಸ್ನಾತಕೋತ್ತರ ವಿಭಾಗದ ಸಂಯೋಜಕರಾದ ಡಾ. ನಾಗರತ್ನ ಎನ್.ರಾವ್, ಪ್ರದೀಪಕುಮಾರ, ನವದೆಹಲಿ ಹಾಗೂ ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಈಶ್ವರ ಪವಾರ. ಪುಣೆ. ಡಾ. ಪ್ರತಿಭಾ ಮೊದಲಿಯಾರ್, ಮೈಸೂರು. ಪ್ರೊ. ಪ್ರಭಾ. ವಿ.ಭಟ್. ಧಾರವಾಡ. ಡಾ. ಸುಮಂಗಲಾ ಮಮ್ಮಿಗಟ್ಟಿ, ಧಾರವಾಡ, ಡಾ. ಮಂಜುನಾಥ, ಐಕಳ, ಮಂಗಳೂರು ಡಾ. ಮುಕುಂದ ಪ್ರಭು, ಮಂಗಳೂರು, ಡಾ. ಸುಮಾ. ಟಿ. ರೊಡನ್ನವರ್. ಮಂಗಳೂರು ಅವರು ಭಾಗವಹಿಸುವರು.
ಈ ಶಿಬಿರವು ಪೂರ್ವಾಹ್ನ 10 ಗಂಟೆಯಿಂದ ಅಪರಾಹ್ನ 4 ಗಂಟೆಯವರೆಗೆ ನಡೆಯುವುದು. ಶಿಬಿರಾರ್ಥಿಗಳಿಗೆ ನೊಂದಣಿ ಮತ್ತು ಬೆಳಿಗ್ಗೆ ಉಪಾಹಾರ, ಮಧ್ಯಾಹ್ನ ಊಟ, ಸಂಜೆ ಚಹಾ, ಕೇಂದ್ರ ಸರ್ಕಾರದ ಅನುದಾನದಲ್ಲಿ ಉಚಿತವಾಗಿ ಇರುವುದು. ಈ ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪ್ರಪ್ರಥಮವಾಗಿ ಆಯೋಜಿಸಲಾಗಿದ್ದು, ಯುವ ಬರಹಗಾರರನ್ನು ಪ್ರೋತ್ಸಾಹಿಸುವ ಉದ್ದೇಶವನ್ನು ಹೊಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು