12:29 PM Monday6 - October 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರ: ಸಂಬಂಧಿಕರ ಸಾವಿಗೆ ತೆರಳಿದ್ದ ಯುವಕ ಹಾರಂಗಿ ಮುಖ್ಯ ನಾಲೆಯಲ್ಲಿ ಈಜಲು ಹೋಗಿ… ಮೈಸೂರು ದಸರಾ ಜಂಬೂ ಸವಾರಿ: ಚಿತ್ರದುರ್ಗದ ಸ್ತಬ್ದಚಿತ್ರಕ್ಕೆ ಪ್ರಥಮ ಸ್ಥಾನ ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರ ಆತಂಕಗೊಳಿಸಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ Kodagu | ಡಿವೈಎಸ್ಪಿ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಅ. 16 ರವರೆಗೆ… ಹೆತ್ತಬ್ಬೆಯನ್ನೇ ಕೊಂದ ಪಾಪಿ ಪುತ್ರ: ಅಡುಗೆ ಮಾಡಿಲ್ಲ ಎಂಬ ಕಾರಣಕ್ಕೆ ಹತ್ಯೆ; ಆರೋಪಿಯ… Kodagu | ಮಂಜಿನ ನಗರಿ ಮಡಿಕೇರಿಯಲ್ಲಿ ಜನೋತ್ಸವಕ್ಕೆ ಜನಜoಗುಳಿ: ದಶ ಮಂಟಪಗಳಿಂದ ಶೋಭಾ… Bangaluru | ವೈದ್ಯ ದಂಪತಿಯಿಂದ ಮನೆಯಲ್ಲೇ ನವದುರ್ಗೆಯರ ಆರಾಧನೆ: ಸಾಲು ಸಾಲು ದಸರಾ… ಮಡಿಕೇರಿ ದಸರಾ ಶೋಭಯಾತ್ರೆಗೆ ತೆರೆ: ದಶಮoಟಪಗಳ ತೀರ್ಪುಗಾರರ ವಿರುದ್ದ ಆಕ್ರೋಶ; ಪ್ರತಿಭಟನೆ ಮುಂದಿನ ವರ್ಷವೂ ನಾನೇ ದಸರಾ ಪುಷ್ಪಾರ್ಚನೆ ಮಾಡುತ್ತೇನೆ: ಸಿಎಂ ಸಿದ್ದರಾಮಯ್ಯ ಭರವಸೆಯ ನುಡಿ ಮೈಸೂರು ದಸರಾ: ಅರಮನೆ ಆವರಣದಲ್ಲಿ ಯದುವೀರ್ ಒಡೆಯರ್ ರಿಂದ ಶಮಿ ಪೂಜೆ

ಇತ್ತೀಚಿನ ಸುದ್ದಿ

ಮಂಗಳೂರು: 5 ದಿನಗಳ ಕಾಲ ನಡೆದ ‘ನವಲೇಖನ ಶಿಬಿರ’ ಸಮಾರೋಪ

19/05/2024, 00:19

ಮಂಗಳೂರು(reporterkarnataka.com): ಭಾರತದಲ್ಲಿ ಹಿಂದಿ ರಾಜ್ಯಭಾಷಾ ಸ್ಥಾನ ಪಡೆದಿದೆ. ಅತಿ ಹೆಚ್ಚಿನ ಜನರು ಹಿಂದಿ ಭಾಷೆ ಮಾತನಾಡಬಲ್ಲವರಾಗಿದ್ದಾರೆ. ಹಾಗಾಗಿ ಹಿಂದಿ ಭಾಷೆ ಮಾತನಾಡುವುದಕ್ಕೆ ಯಾವುದೇ ರೀತಿಯ ಸಂಕೋಚ ಇರಕೂಡದು ಎಂದು ಡಾ. ವಿದ್ಯಾಕುಮಾರ್ ಹೇಳಿದರು.
ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ಕೇಂದ್ರೀಯ ಹಿಂದಿ ವಿದೇಶಾಲಯ, ಶಿಕ್ಷಣ ಸಚಿವಾಲಯ(ಉನ್ನತ ಶಿಕ್ಷಣ ವಿಭಾಗ, ಭಾರತ ಸರ್ಕಾರ), ಮಂಗಳೂರು ವಿಶ್ವವಿದ್ಯಾನಿಲಯ, ವಿಶ್ವವಿದ್ಯಾನಿಲಯ ಕಾಲೇಜು ಹಂಪನಕಟ್ಟ ಮತ್ತು ಆಂತರಿಕ ಗುಣಮಟ್ಟ ಖಾತರಿಕೋಶದ ಸಹಭಾಗಿತ್ವದಲ್ಲಿ ಐದು ದಿನಗಳ ಕಾಲ ನಡೆದ “ನವಲೇಖನ ಶಿಬಿರ” ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಕೇಂದ್ರೀಯ ಹಿಂದಿ ವಿದೇಶಾಲಯದ ಅಧಿಕಾರಿ ಪ್ರದೀಪ್ ಕುಮಾರ್ ಮಾತನಾಡಿ, ವಿದೇಶಾಲಯದ ವತಿಯಿಂದ ಮಂಗಳೂರಿನಲ್ಲಿ ಮಾಡುತ್ತಿರುವ ಪ್ರಥಮ ಕಾರ್ಯಕ್ರಮ ಯಶಸ್ವಿಯಾಗಿದೆ. ಹಾಗಾಗಿ ಮುಂದಿನ ದಿನಗಳಲ್ಲಿ ಕೇಂದ್ರೀಯ ವಿದೇಶಾಲಯ ಮಂಗಳೂರು ವಿಶ್ವವಿದ್ಯಾನಿಲಯದ ಜೊತೆ ಸೇರಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸುವುದಕ್ಕಾಗಿ ಪ್ರಯತ್ನಿಸುತ್ತೇವೆ ಎಂದು ಆಶ್ವಾಸನೆ ನೀಡಿದರು.


ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಡಾ. ಅನುಸೂಯ ರೈ ಮಾತನಾಡಿ, ಹಲವು ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ಇಲ್ಲಿ ಕಲಿತಂತಹ ವಿಷಯವನ್ನು ಮುಂದಿನ ಬದುಕಿನಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಸದುಪಯೋಗಪಡಿಸಿಕೊಳ್ಳಿ ಎಂದು ಕಿವಿಮಾತು ಹೇಳಿದರು.
ಈ ಕಾರ್ಯಕ್ರಮದಲ್ಲಿ ಪ್ರೊ. ಈಶ್ವರ್ ಪವಾರ್, ಕಾರ್ಯಕ್ರಮ ಸಂಯೋಜಕ ಡಾ. ನಾಗರತ್ನ ಎನ್. ರಾವ್, ಹಿಂದಿ ವಿಭಾಗದ ಮುಖ್ಯಸ್ಥೆ ಡಾ. ಸುಮಾ ಟಿ.ಆರ್., ನಿವೃತ್ತ ಉಪನ್ಯಾಸಕಿ ಡಾ. ಸುಧಾ ಭಟ್, ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ಉಪನ್ಯಾಸಕರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು